Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಮಿಕರ ಖಾಯಂಗೊಳಿಸಲು ಒತ್ತಾಯ :...

ಕಾರ್ಮಿಕರ ಖಾಯಂಗೊಳಿಸಲು ಒತ್ತಾಯ : ಡಿ.14ರಂದು ಮನಪಾ ಮುಂಭಾಗ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ10 Dec 2020 10:06 PM IST
share

ಮಂಗಳೂರು, ಡಿ.10: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ಒಳಚರಂಡಿ ವಿಭಾಗದ ಕಾರ್ಮಿಕರನ್ನು ಖಾಯಂಗೊಳಿಸಲು ಹಾಗೂ ಈ ಕುರಿತು ನಗರಾಭಿವೃದ್ಧಿ ಸಚಿವರು ಸಭೆ ಕರೆಯಬೇಕು ಎಂದು ಆಗ್ರಹಿಸಿ ಡಿ.14ರಂದು ರಾಜ್ಯದ ಎಲ್ಲ ಮಹಾನಗರ ಪಾಲಿಕೆ ಮುಂಭಾಗ ಪ್ರತಿಭಟನೆ ನಡೆಯಲಿದೆ.

ನಗರದ ಖಾಸಗಿ ಹೊಟೇಲ್‌ನಲ್ಲಿ ಗುರುವಾರ ಸುದ್ದಿಗಾರರೊದಿಂಗೆ ಮಾತನಾಡಿದ ದಸಂಸ (ಅಂಬೇಡ್ಕರ್ ವಾದ) ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್ ಪಾಂಡೇಶ್ವರ, ಮಂಗಳೂರು ಮಹಾನಗರ ಪಾಲಿಕೆ ಮುಂಭಾಗದಲ್ಲೂ ಅಂದು ಬೆಳಗ್ಗೆ 10:30ರಿಂದ ಸಂಜೆ 5 ಗಂಟೆಗೆ ವರೆಗೆ ಪಂಪ್‌ಹೌಸ್ ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಲಾಗುವುದು ಎಂದರು.

ಬೆಂಗಳೂರಿನ ಪೌರಾಡಳಿತ ನಿರ್ದೇಶನಾಲಯದ ಜಂಟಿ ನಿರ್ದೇಶಕರು ಜ.6 ಮತ್ತು ಸೆ.9ರಂದು ರಾಜ್ಯದ ಎಲ್ಲ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಲೋಡರ್ಸ್, ಕ್ಲೀನರ್ಸ್‌ ಮತ್ತು ಯುಜಿಡಿ ಹೆಲ್ಪರ್ಸ್‌ ಸ್ಥಾನಗಳನ್ನು ಭರ್ತಿ ಮಾಡಲು ವಿಶೇಷ ನೇಮಕಾತಿ ನಿಯಮಾವಳಿ ಪ್ರಕಟಿಸಿ, ಒಂದು ವಾರದೊಳಗೆ ಪಟ್ಟಿಯನ್ನು ನಿರ್ದೇಶನಾಲಯಕ್ಕೆ ಸಲ್ಲಿಸಲು ಸುತ್ತೋಲೆ ಹೊರಡಿಸಿತ್ತು. ಆದರೆ, ಮಂಗಳೂರು ಮಹಾನಗರ ಪಾಲಿಕೆ ಕಳುಹಿಸಲು ಹಿಂದೇಟು ಹಾಕಿತ್ತು ಎಂದು ಹೇಳಿದರು.

ಸಂಘಟನೆಯ ಪ್ರತಿಭಟನೆ, ಒತ್ತಡದ ಹಿನ್ನೆಲೆಯಲ್ಲಿ ಕೇವಲ 106 ಕಾರ್ಮಿಕರ ಹೆಸರನ್ನು ಮಾತ್ರ ಕಳುಹಿಸಿದೆ. ಒಳಚರಂಡಿ ವಿಭಾಗದಲ್ಲಿ 214 ಮಂದಿ ಕಾರ್ಮಿಕರು ದುಡಿಯುತ್ತಿದ್ದು, ಕಳುಹಿಸಿದ ಪಟ್ಟಿಯಲ್ಲಿ 49 ಮಂದಿಯ ಹೆಸರು ಮಾತ್ರ ಇದೆ. ಉಳಿದ 57 ಮಂದಿ ಆ್ಯಂಟನಿ ವೇಸ್ಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯಡಿ ದುಡಿಯುತ್ತಿರುವವರು ಎಂದು ಮಾಹಿತಿ ನೀಡಿದರು.

ಆ್ಯಂಟನಿ ಸಂಸ್ಥೆಯ ಕಾರ್ಮಿಕರ ಹೆಸರು ಕಳುಹಿಸಿರುವುದಕ್ಕೆ ವಿರೋಧವಿಲ್ಲ. ಆದರೆ ಒಳಚರಂಡಿ ವಿಭಾಗದ ಕಾರ್ಮಿಕರು 30 ವರ್ಷದಿಂದ ದುಡಿಯುತ್ತಿದ್ದು, ಆ್ಯಂಟನಿ ಸಂಸ್ಥೆ ಕಾರ್ಮಿಕರು ಕಳೆದ ಮೂರು ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದಾರೆ. ಜತೆಗೆ ಯುಜಿಡಿ ಕಾರ್ಮಿಕರ ವೇತನ, ಪಿಎ್, ಇಎಸ್‌ಐ ಎಲ್ಲದರಲ್ಲೂ ಗುತ್ತಿಗೆದಾರರು ವಂಚನೆ ಮಾಡುತ್ತಿದ್ದಾರೆ. ಪಾಲಿಕೆ ಆಯುಕ್ತರು ತಕ್ಷಣ ಮರುಪರಿಶೀಲಿಸಿ ಸರಕಾರಕ್ಕೆ ಸರಿಯಾದ ಪಟ್ಟಿ ಸಲ್ಲಿಸಬೇಕು. ಸರಕಾರ ಕಾರ್ಮಿಕರ ಬೇಡಿಕೆಗೆ ಸ್ಪಂದಿಸದಿದ್ದರೆ, ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ದಸಂಸ ಮಂಗಳೂರು ತಾಲೂಕು ಸಂಚಾಲಕ ಕೆ.ಚಂದ್ರ ಕಡಂದಲೆ, ಕಾರ್ಮಿಕ ವಿಭಾಗದ ಪ್ರಮುಖರಾದ ಪದ್ಮನಾಭ ವಾಮಂಜೂರು, ರಾಜೇಶ್ ಪೆರ್ನಾಜೆ, ರವೀಂದ್ರ ಕಟೀಲ್, ಗಜೇಂದ್ರ ಹಾಗು ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X