Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಲ ಮರು ಪಾವತಿ ವಿನಾಯತಿ ಅವಧಿ ವಿಸ್ತರಣೆ...

ಸಾಲ ಮರು ಪಾವತಿ ವಿನಾಯತಿ ಅವಧಿ ವಿಸ್ತರಣೆ ಕಾರ್ಯ ಸಾಧುವಲ್ಲ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಆರ್‌ಬಿಐ

ವಾರ್ತಾಭಾರತಿವಾರ್ತಾಭಾರತಿ10 Dec 2020 10:28 PM IST
share
ಸಾಲ ಮರು ಪಾವತಿ ವಿನಾಯತಿ ಅವಧಿ ವಿಸ್ತರಣೆ ಕಾರ್ಯ ಸಾಧುವಲ್ಲ: ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಆರ್‌ಬಿಐ

ಹೊಸದಿಲ್ಲಿ, ಡಿ. 10: ಸಾಲ ಮರು ಪಾವತಿ ವಿನಾಯತಿ ಅವಧಿ (ಮೊರಟೋರಿಯಂ ಅವಧಿ)ಯನ್ನು ವಿಸ್ತರಿಸುವುದು ಕಾರ್ಯಸಾಧುವಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಬುಧವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ. ಕೊರೋನ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ ಘೋಷಿಸಲಾದ ಸಾಲ ಮರು ಪಾವತಿ ವಿನಾಯತಿ ಅವಧಿ (ಮೊರಟೋರಿಯಂ ಅವಧಿ)ಯಲ್ಲಿ ಸಾಲದ ಮೇಲೆ ಬಡ್ಡಿ ವಿಧಿಸುವ ಭಾರತೀಯ ರಿಸರ್ವ್ ಬ್ಯಾಂಕ್‌ನ ನಿರ್ಧಾರದ ವಿರುದ್ಧ ಸಲ್ಲಿಸಲಾದ ಮನವಿಗಳನ್ನು ನ್ಯಾಯಮೂರ್ತಿ ಅಶೋಕ್ ಭೂಷಣ್ ನೇತೃತ್ವದ ಮೂವರು ಸದಸ್ಯರ ಪೀಠ ವಿಚಾರಣೆ ನಡೆಸಿತು.

ಭಾರತೀಯ ರಿಸರ್ವ್ ಬ್ಯಾಂಕ್ ಅನ್ನು ಪ್ರತಿನಿಧಿಸಿದ ವಕೀಲ ವಿ. ಗಿರಿ, ಕಾರ್ಪೋರೇಟ್ ಹಾಗೂ ವೈಯಕ್ತಿಕ ಸಾಲಗಳ ಸಾಲ ಮರು ಪರಿಹಾರ ಯೋಜನೆ ‘‘ಕೋವಿಡ್-19 ಸಂಬಂಧಿತ ಒತ್ತಡಕ್ಕೆ ಮರು ಪರಿಹಾರ ಕಾರ್ಯಚೌಕಟ್ಟು’’ ಕುರಿತು ಆಗಸ್ಟ್ 6ರಂದು ಬ್ಯಾಂಕ್ ಹೊರಡಿಸಿದ ಸುತ್ತೋಲೆಯ 3ನೇ ಉಪ ವಾಕ್ಯವನ್ನು ಉಲ್ಲೇಖಿಸಿದರು. ಆಡಳಿತ ಮಂಡಳಿಯ ಅನುಮೋದಿತ ನೀತಿಗೆ ಅನುಗುಣವಾಗಿ ನಿರ್ದೇಶನಕ್ಕೊಳಗಾದ ಸಾಲ ನೀಡುವ ಸಂಸ್ಥೆಗಳು ಅರ್ಹ ಸಾಲಗಾರರಿಗೆ ಕಾರ್ಯಸಾಧುವಾದ ಸಾಲ ಮರು ಪರಿಹಾರ ಯೋಜನೆಗಳನ್ನು ಸಿದ್ಧಪಡಿಸಿದೆ. ಆದರೆ, ಕೊರೋನ ಸಾಂಕ್ರಾಮಿಕ ರೋಗದ ಬಾಧೆಗೆ ಒಳಗಾದ ಸಾಲಗಾರರಿಗೆ ಮಾತ್ರ ಈ ಮರು ಪರಿಹಾರವನ್ನು ಒದಗಿಸಲಾಗುತ್ತದೆಯೇ ಎಂಬ ಬಗ್ಗೆ ಸಾಲಗಾರರು ಖಾತರಿಪಡಿಸಿಕೊಳ್ಳುತ್ತಾರೆ ಎಂದು ಗಿರಿ ಹೇಳಿದ್ದಾರೆ. ಸುತ್ತೋಲೆಯಲ್ಲಿ ಉಲ್ಲೇಖಿಸಲಾದ ಸೌಲಭ್ಯಗಳನ್ನು ಮಾತ್ರ ಸಾಲಗಾರರು ಪಡೆಯಲು ಸಾಧ್ಯ ಎಂದು ಬ್ಯಾಂಕ್ ಹೇಳಿದೆ.

ಆದುದರಿಂದ ಭಾರತೀಯ ರಿಸರ್ವ್ ಬ್ಯಾಂಕ್‌ನ ಆಗಸ್ಟ್ 6ರ ಸುತ್ತೋಲೆಯ ಸೌಲಭ್ಯಗಳನ್ನು ಬಳಸುವುದಾಗಿ ಸಾಲಗಾರರು ತಿಳಿಸಬೇಕೇ ಎಂದು ಪೀಠ ಪ್ರಶ್ನಿಸಿದೆ. ಸುತ್ತೋಲೆಯಲ್ಲಿ ಸಾಲಗಾರರಿಗೆ ಇರುವ ಸೌಲಭ್ಯಗಳ ಕುರಿತ ಅಂಶಗಳ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ಮತ್ತೊಮ್ಮೆ ಸ್ಪಷ್ಟನೆ ನೀಡುವಂತೆ ಕೇಂದ್ರ ಸರಕಾರವನ್ನು ಪ್ರತಿನಿಧಿಸಿದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸೂಚಿಸಿದರು. ಕೋವಿಡ್-19ನಿಂದ ಆರ್ಥಿಕತೆ ಕುಸಿತಕ್ಕೆ ಒಳಗಾಗಿದೆ. ಇದರಿಂದ ಸಾಲಗಾರರ ಮೇಲೆ ಉಂಟಾದ ಪರಿಣಾಮ ತಗ್ಗಿಸಲು ಹಾಗೂ ರಿಯಲ್ ಎಸ್ಟೇಟ್ ಚಟುವಟಿಕೆಗಳನ್ನು ಪುನರುಜ್ಜೀವನಗೊಳಿಸುವ ಉದ್ದೇಶದಿಂದ ಆಗಸ್ಟ್ 6ರಂದು ಕಾರ್ಯಚೌಕಟ್ಟನ್ನು ಬಿಡುಗಡೆ ಮಾಡಲಾಯಿತು ಎಂದು ಆರ್‌ಬಿಐ ಸುಪ್ರೀಂ ಕೋರ್ಟ್‌ಗೆ ತಿಳಿಸಿತು. ನ್ಯಾಯಾಲಯ ವಿಚಾರಣೆಯನ್ನು ಡಿಸೆಂಬರ್ 14ಕ್ಕೆ ಮುಂದೂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X