ಫರಂಗಿಪೇಟೆಯಲ್ಲಿ ಬೈಕ್ ಅಪಘಾತ : ಗಾಯಾಳು ಮೃತ್ಯು
ಬಂಟ್ವಾಳ, ಡಿ.11: ಬೈಕ್ ಗೆ ಸರ್ಕಾರಿ ಬಸ್ ಢಿಕ್ಕಿ ಹೊಡೆದ ಪರಿಣಾಮ ವಿಟ್ಲದ ಪಾಕ ಪ್ರವೀಣ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಗುರುವಾರ ಸಂಜೆ ವಿಟ್ಲದ ಕಡೆಗೆ ಬೈಕಿನಲ್ಲಿ ಬರುತ್ತಿದ್ದ ಸಂದರ್ಭ ಫರಂಗಿಪೇಟೆಯಲ್ಲಿ ಸರಕಾರಿ ಬಸ್ ಢಿಕ್ಕಿ ಹೊಡೆದು ಸವಾರ ವಿಟ್ಲದ ನೇತ್ರಕೆರೆ ನಿವಾಸಿ ಶಂಕರನಾರಾಯಣ ಭಟ್ ಗಂಭೀರ ಗಾಯಗೊಂಡಿದ್ದರು. ತಕ್ಷಣವೇ ಸ್ಥಳೀಯರು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರೂ ಶುಕ್ರವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೇ ಭಟ್ ಮೃತಪಟ್ಟಿದ್ದಾರೆ ಎಂದು ದೂರಲಾಗಿದೆ.
Next Story