ಬೈಕ್ ಕಳವು ಪ್ರಕರಣ : ಇಬ್ಬರ ಬಂಧನ
ಮಂಗಳೂರು, ಡಿ.11: ಕಳವುಗೈದ ಬೈಕ್ನಲ್ಲಿ ಸಂಚರಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ದಕ್ಷಿಣ (ಪಾಂಡೇಶ್ವರ) ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಸ್ಥಳೀಯ ನಿವಾಸಿಗಳಾದ ಮುಹಮ್ಮದ್ ಸಫ್ವಾನ್, ಸೈಫುಲ್ಲಾ ಫರಾಝ್ ಬಂಧಿತ ಆರೋಪಿಗಳು.
ಶುಕ್ರವಾರ ಪಾಂಡೇಶ್ವರ ಠಾಣಾ ಉಪ ನಿರೀಕ್ಷಕ ಅನಂತ ಮುರ್ಡೇಶ್ವರ್ ಸಿಬ್ಬಂದಿಯೊಂದಿಗೆ ರೌಂಡ್ಸ್ ಕರ್ತವ್ಯದಲ್ಲಿದ್ದಾಗ, ನಸುಕಿನಜಾವ 3 ಗಂಟೆ ಸುಮಾರಿಗೆ ಮಂಗಳೂರು ದಕ್ಷಿಣ ದಕ್ಕೆಯಲ್ಲಿ ವಾಹನ ತಪಾಸಣೆ ಮಾಡಲಾಗುತ್ತಿತ್ತು. ಈ ಸಂದರ್ಭ ಸೈಫುಲ್ಲಾ ಫರಾಝ್ನನ್ನು ಸಹಸವಾರನನ್ನಾಗಿ ಕುಳ್ಳಿರಿಸಿಕೊಂಡು ಬೈಕ್ ಚಲಾಯಿಸುತ್ತಿದ್ದ ಆರೋಪಿ ಮುಹಮ್ಮದ್ ಸಫ್ವಾನ್ ಎಂಬವರನ್ನು ಪೊಲೀಸರು ತಡೆದು ನಿಲ್ಲಿಸಿದ್ದಾರೆ.
ವಾಹನ ತಪಾಸಣೆ ವೇಳೆ ಬೈಕ್ ಸವಾರರ ಬಳಿ ವಾಹನದ ದಾಖಲೆಗಳು ಇರದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ್ದಾರೆ. ಬೈಕ್ನ್ನು ಸುರತ್ಕಲ್ ಸಮೀಪ ಕಳವು ಮಾಡಿರುವುದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಬಳಿಕ ಇಬ್ಬರೂ ಆರೋಪಿಗಳನ್ನು ವಶಕ್ಕೆ ಪಡೆದು, ಬೈಕ್ನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.