Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಆರೋಗ್ಯ
  4. ಹೃದಯದಲ್ಲಿ ಸೋಂಕು ಮತ್ತು ಅದರ ಲಕ್ಷಣಗಳು

ಹೃದಯದಲ್ಲಿ ಸೋಂಕು ಮತ್ತು ಅದರ ಲಕ್ಷಣಗಳು

ವಾರ್ತಾಭಾರತಿವಾರ್ತಾಭಾರತಿ11 Dec 2020 11:19 PM IST
share

ವೈರಸ್, ಬ್ಯಾಕ್ಟೀರಿಯಾ ಅಥವಾ ಶಿಲೀಂದ್ರ ಇವು ಹೃದಯದ ಅಂಗಾಂಶಗಳಲ್ಲಿ ಸೋಂಕನ್ನುಂಟು ಮಾಡುತ್ತವೆ. ಹೃದಯವು ಎಂಡೊಕಾರ್ಡಿಯಂ, ಮೈಯೊಕಾರ್ಡಿಯಂ ಮತ್ತು ಪೆರಿಕಾರ್ಡಿಯಂ ಇವುಗಳನ್ನು ಒಳಗೊಂಡಿರುತ್ತದೆ. ಹೃದಯದಲ್ಲಿ ಸೋಂಕು ಜನರಿಗೆ ಹೆಚ್ಚಾಗಿ ಗೊತ್ತಿರದ ಕಾಯಿಲೆಯಾಗಿದೆ.

ಎಂಡೊಕಾರ್ಡಿಯಂ ಹೃದಯದ ಅತ್ಯಂತ ಒಳಭಾಗದಲ್ಲಿರುವ ಪದರವಾಗಿದ್ದು,ಹೃದಯದ ಕವಾಟಗಳನ್ನು ಒಳಗೊಂಡಿರುತ್ತದೆ. ಮೈಯೊಕಾರ್ಡಿಯಂ ಹೃದಯದ ಸ್ನಾಯು ಭಾಗವಾಗಿದ್ದು ಹೆಚ್ಚಿನ ಪ್ರಮಾಣದ ಹೃದಯ ಅಂಗಾಂಶಗಳನ್ನು ಒಳಗೊಂಡಿರುತ್ತದೆ. ಪೆರಿಕಾರ್ಡಿಯಂ ಹೃದಯದ ಹೊರಾವರಣವಾಗಿದ್ದು,ಪೆರಿಕಾರ್ಡಿಯಲ್ ದ್ರವವನ್ನು ಒಳಗೊಂಡಿರುತ್ತದೆ. ಇದು ಹೃದಯಕ್ಕೆ ಕೀಲೆಣ್ಣೆಯಂತೆ ಕೆಲಸ ಮಾಡುತ್ತದೆ ಮತ್ತು ಹೃದಯವು ತನ್ನ ಅಂಗರಚನಾ ಸ್ಥಾನದಲ್ಲಿರಲು ನೆರವಾಗುತ್ತದೆ. ಎಂಡೊಕಾರ್ಡಿಯಂ ಸೋಂಕಿಗೊಳಗಾದರೆ ಅದನ್ನು ಎಂಡೊಕಾರ್ಡಿಟಿಸ್ ಎಂದು ಕರೆಯಲಾಗುತ್ತದೆ ಮತ್ತು ಇದು ಸಾಮಾನ್ಯವಾಗಿ ಬ್ಯಾಕ್ಟೀರಿಯಾಗಳಿಂದ ಮತ್ತು ಕೆಲವೊಮ್ಮೆ ಶಿಲೀಂಧ್ರಗಳಿಂದ ಉಂಟಾಗುತ್ತದೆ. ಇದೇ ರೀತಿ ಮೈಯೊಕಾರ್ಡಿಯಂ ಸೋಂಕನ್ನು ಮೈಯೊಕಾರ್ಡಿಟಿಸ್ ಮತ್ತು ಪೆರಿಕಾರ್ಡಿಯಂ ಸೋಂಕನ್ನು ಪೆರಿಕಾರ್ಡಿಟಿಸ್ ಎಂದು ಕರೆಯಲಾಗುತ್ತದೆ.

ಹೃದಯ ಸೋಂಕಿನ ಲಕ್ಷಣಗಳು

ಎಂಡೊಕಾರ್ಡಿಟಿಸ್: ಜ್ವರದೊಂದಿಗೆ ವ್ಯಕ್ತಿಯು ನಿಸ್ತೇಜನಾಗಿರುತ್ತಾನೆ. ನಾಡಿಮಿಡಿತವು ಅಧಿಕವಾಗಿರುತ್ತದೆ. ಶ್ವಾಸಕೋಶಗಳ ಒತ್ತಡ ಹೆಚ್ಚುತ್ತದೆ. ಈ ಹೆಚ್ಚಿನ ಒತ್ತಡವು ಶ್ವಾಸಕೋಶಗಳಲ್ಲಿ ದ್ರವ ಸಂಗ್ರಹಗೊಳ್ಳಲು ಕಾರಣವಾಗುತ್ತದೆ ಮತ್ತು ಇದು ಉಸಿರಾಟಕ್ಕೆ ತೊಂದರೆಯನ್ನುಂಟು ಮಾಡುತ್ತದೆ.

ಮೈಯೊಕಾರ್ಡಿಟಿಸ್: ಈ ವಿಧದ ಸೋಂಕಿನಲ್ಲಿ ರೋಗಿಯಲ್ಲಿ ಜ್ವರ ಕಾಣಿಸಿಕೊಳ್ಳುತ್ತದೆ ಮತ್ತು ಹೃದಯವು ಹೆಚ್ಚು ಬಡಿದುಕೊಳ್ಳುತ್ತದೆ. ಹೃದಯದ ಪಂಪಿಂಗ್ ಕಾರ್ಯ ಕಡಿಮೆಯಾಗುತ್ತದೆ . ಇದರಿಂದಾಗಿ ಹೃದಯದ ಕೋಣೆಗಳು ಹಿಗ್ಗುತ್ತವೆ. ರೋಗಿಯಲ್ಲಿ ಎದೆ ಡವಗುಡುವ,ಉಸಿರಾಟಕ್ಕೆ ತೊಂದರೆಯ ಮತ್ತು ಕೆಲವೊಮ್ಮೆ ಎದೆನೋವಿನ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ.

ಪೆರಿಕಾರ್ಡಿಟಿಸ್: ಈ ವಿಧದ ಸೋಂಕಿನಲ್ಲಿಯೂ ರೋಗಿಯಲ್ಲಿ ಜ್ವರ ಮತ್ತು ಹೆಚ್ಚಿನ ಹೃದಯ ಬಡಿತ ಕಾಣಿಸಿಕೊಳ್ಳುತ್ತವೆ. ದೀರ್ಘಕಾಲದಲ್ಲಿ ಇದು ಕನ್‌ಸ್ಟ್ರಿಕ್ಟಿವ್ ಪೆರಿಕಾರ್ಡಿಟಿಸ್ ಅನ್ನು ಉಂಟು ಮಾಡುತ್ತದೆ ಮತ್ತು ಇದು ಹೃದಯದ ಸೂಕ್ತ ಹಿಗ್ಗುವಿಕೆಗೆ ಅವಕಾಶನ್ನು ನೀಡುವುದಿಲ್ಲ. ರೋಗಿಯಲ್ಲಿ ಉಸಿರಾಟಕ್ಕೆ ತೊಂದರೆಯಾಗುತ್ತದೆ ಮತ್ತು ಶರೀರದಾದ್ಯಂತ ದ್ರವ ಶೇಖರಗೊಳ್ಳುವುದರಿಂದ,ಮುಖ್ಯವಾಗಿ ಕಾಲುಗಳಲ್ಲಿ ಊತ ಕಾಣಿಸಿಕೊಳ್ಳುತ್ತದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X