ಮಂಗಳೂರು: ಚಲಿಸುತ್ತಿದ್ದ ಕಾರಿಗೆ ಬೆಂಕಿ ಆಕಸ್ಮಿಕ
![ಮಂಗಳೂರು: ಚಲಿಸುತ್ತಿದ್ದ ಕಾರಿಗೆ ಬೆಂಕಿ ಆಕಸ್ಮಿಕ ಮಂಗಳೂರು: ಚಲಿಸುತ್ತಿದ್ದ ಕಾರಿಗೆ ಬೆಂಕಿ ಆಕಸ್ಮಿಕ](https://www.varthabharati.in/sites/default/files/images/articles/2020/12/12/270910-1607764909.jpg)
ಮಂಗಳೂರು, ಡಿ.12: ನಗರದ ಪಿವಿಎಸ್ ಸರ್ಕಲ್ ಬಳಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ಹಿಡಿದ ಘಟನೆಯು ಶನಿವಾರ ಮಧ್ಯಾಹ್ನ ನಡೆದಿದೆ.
ಕಾರಿನಲ್ಲಿ ಚಾಲಕನಲ್ಲದೆ ಇತರ ಮೂವರು ಮಹಿಳೆಯರು ಇದ್ದರು. ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೋಡಿಯಾಲ್ಬೈಲ್ ಕಡೆಯಿಂದ ಬಂದ ಕಾರು ಪಿವಿಎಸ್ ಸರ್ಕಲ್ ತಲುಪುತ್ತಿದ್ದಂತೆಯೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿತು. ತಕ್ಷಣ ಚಾಲಕ ಕಾರು ನಿಲ್ಲಿಸಿದರು. ಅದರಲ್ಲಿದ್ದ ಮೂವರು ಮಹಿಳೆಯರು ಕ್ಷಣಾರ್ಧದಲ್ಲಿ ಕಾರಿನಿಂದಿಳಿದರು. ಬೆಂಕಿ ಹೊತ್ತಿ ಉರಿಯುತ್ತಿದ್ದಂತೆಯೇ ಸಂಚಾರ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಬೆಂಕಿ ನಂದಿಸಿದರು. ಬಳಿಕ ಅಗ್ನಿಶಾಮಕ ದಳದ ಪೊಲೀಸರು ಕೂಡ ಆಗಮಿಸಿ ಬೆಂಕಿ ನಂದಿಸಿದರು. ಆದಾಗ್ಯೂ ಕಾರು ಭಾಗಶಃ ಸುಟ್ಟು ಕರಕಲಾಗಿದೆ.