Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 15 ದಿನಗಳ ಕಠಿಣ ಯುದ್ಧಕ್ಕೆ ಅಗತ್ಯ...

15 ದಿನಗಳ ಕಠಿಣ ಯುದ್ಧಕ್ಕೆ ಅಗತ್ಯ ಶಸ್ತ್ರಾಸ್ತ್ರಗಳ ದಾಸ್ತಾನು: ಸಶಸ್ತ್ರ ಪಡೆಗಳಿಗೆ ಕೇಂದ್ರದ ಅನುಮತಿ

ವಾರ್ತಾಭಾರತಿವಾರ್ತಾಭಾರತಿ14 Dec 2020 7:11 PM IST
share
15 ದಿನಗಳ ಕಠಿಣ ಯುದ್ಧಕ್ಕೆ ಅಗತ್ಯ ಶಸ್ತ್ರಾಸ್ತ್ರಗಳ ದಾಸ್ತಾನು: ಸಶಸ್ತ್ರ ಪಡೆಗಳಿಗೆ ಕೇಂದ್ರದ ಅನುಮತಿ

ಹೊಸದಿಲ್ಲಿ,ಡಿ.14: ಚೀನಾದೊಂದಿಗೆ ಗಡಿ ಸಂಘರ್ಷದ ನಡುವೆಯೇ 15 ದಿನಗಳ ಕಠಿಣ ಯುದ್ಧಕ್ಕಾಗಿ ತಮ್ಮ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳ ದಾಸ್ತಾನನ್ನು ಹೆಚ್ಚಿಸಿಕೊಳ್ಳಲು ಸಶಸ್ತ್ರ ಪಡೆಗಳಿಗೆ ಅಧಿಕಾರವನ್ನು ನೀಡುವ ಮೂಲಕ ಭಾರತವು ಮಹತ್ವದ ಹೆಜ್ಜೆಯೊಂದನ್ನಿಟ್ಟಿದೆ.

ಪೂರ್ವ ಲಡಾಖ್‌ನಲ್ಲಿ ಚೀನಾದೊಂದಿಗೆ ಗಡಿ ಬಿಕ್ಕಟ್ಟು ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಸಶಸ್ತ್ರ ಪಡೆಗಳು ವಿಸ್ತ್ರತ ದಾಸ್ತಾನು ಅಗತ್ಯಗಳು ಮತ್ತು ತುರ್ತು ಹಣಕಾಸು ಅಧಿಕಾರಗಳನ್ನು ಬಳಸಿಕೊಂಡು ಸ್ಥಳೀಯ ಮತ್ತು ವಿದೇಶಿ ಮೂಲಗಳಿಂದ ರಕ್ಷಣಾ ಉಪಕರಣಗಳು ಮತ್ತು ಮದ್ದುಗುಂಡುಗಳನ್ನು ಖರೀದಿಸಲು 50,000 ಕೋ.ರೂ.ಅಧಿಕ ವೆಚ್ಚ ಮಾಡುವ ನಿರೀಕ್ಷೆಯಿದೆ.

ಈ ಹಿಂದಿನ 10 ದಿನಗಳ ಬದಲು 15 ದಿನಗಳ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ದಾಸ್ತಾನಿಟ್ಟುಕೊಳ್ಳಲು ಸರಕಾರವು ಅನುಮತಿಯನ್ನು ನೀಡಿರುವ ಹಿಂದೆ ಚೀನಾ ಮತ್ತು ಪಾಕಿಸ್ತಾನಗಳ ವಿರುದ್ಧ ಎರಡೂ ರಂಗಗಳಲ್ಲಿ ಯುದ್ಧಕ್ಕೆ ರಕ್ಷಣಾ ಪಡೆಗಳನ್ನು ಸನ್ನದ್ಧಗೊಳಿಸುವ ಉದ್ದೇಶವಿದೆ. ದಾಸ್ತಾನು ಹೆಚ್ಚಿಸುವ ಪ್ರಸ್ತಾವಕ್ಕೆ ಕೆಲವು ಸಮಯದ ಹಿಂದೆ ಅನುಮತಿ ನೀಡಲಾಗಿದೆ ಎಂದು ಸರಕಾರಿ ಮೂಲಗಳು ಸುದ್ದಿಸಂಸ್ಥೆಗೆ ತಿಳಿಸಿದವು.

ಹಲವು ವರ್ಷಗಳ ಹಿಂದೆ ಸಶಸ್ತ್ರ ಪಡೆಗಳು 40 ದಿನಗಳ ಕಠಿಣ ಯುದ್ಧಕ್ಕೆ ಅಗತ್ಯ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ದಾಸ್ತಾನಿಟ್ಟುಕೊಳ್ಳುವ ಅಧಿಕಾರವನ್ನು ಹೊಂದಿದ್ದವು. ಆದರೆ ಯುದ್ಧೋಪಕರಣಗಳ ದಾಸ್ತಾನು ಸಮಸ್ಯೆ ಮತ್ತು ಬದಲಾಗುತ್ತಿರುವ ಯುದ್ಧ ಸ್ವರೂಪಗಳ ಹಿನ್ನೆಲೆಯಲ್ಲಿ ಈ ಅವಧಿಯನ್ನು 10 ದಿನಗಳಿಗೆ ಇಳಿಸಲಾಗಿತ್ತು.

ಉರಿ ದಾಳಿಯ ಬಳಿಕ ಯುದ್ಧ ಸಾಮಗ್ರಿಗಳ ಸಂಗ್ರಹ ಕಡಿಮೆ ಪ್ರಮಾಣದಲ್ಲಿದೆ ಎನ್ನುವುದು ಸರಕಾರಕ್ಕೆ ಮನವರಿಕೆಯಾಗಿತ್ತು ಮತ್ತು ಆಗಿನ ಮನೋಹರ್ ಪಾರಿಕ್ಕರ್ ನೇತೃತ್ವದ ರಕ್ಷಣಾ ಸಚಿವಾಲಯವು ಸೇನೆ,ನೌಕಾಪಡೆ ಮತ್ತು ವಾಯುಪಡೆ ಮುಖ್ಯಸ್ಥರ ಹಣಕಾಸು ಅಧಿಕಾರವನ್ನು 100 ಕೋ.ರೂ.ಗಳಿಂದ 500 ಕೋ.ರೂ.ಗಳಿಗೆ ಹೆಚ್ಚಿಸಿತ್ತು. ಯುದ್ಧಗಳಲ್ಲಿ ಬಳಸಬಹುದಾದ ಯಾವುದೇ ಉಪಕರಣವನ್ನು ಖರೀದಿಸಲು ಹೆಚ್ಚುವರಿಯಾಗಿ 300 ಕೋ.ರೂ.ಗಳ ತುರ್ತು ಹಣಕಾಸು ಅಧಿಕಾರವನ್ನೂ ಈ ಪಡೆಗಳಿಗೆ ನೀಡಲಾಗಿತ್ತು.

ಎರಡು ರಂಗಗಳಲ್ಲಿ ವೈರಿಗಳನ್ನು ಪರಿಣಾಮಕಾರಿಯಾಗಿ ಎದುರಿಸಲು ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು,ಕ್ಷಿಪಣಿಗಳು,ಬಿಡಿಭಾಗಗಳು ಮತ್ತು ಇತರ ರಕ್ಷಣಾ ಉಪಕರಣಗಳ ಖರೀದಿ ಪ್ರಕ್ರಿಯೆಯಲ್ಲಿ ಸಶಸ್ತ್ರ ಪಡೆಗಳು ತೊಡಗಿಕೊಂಡಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X