Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅನುದಾನಿತ ಶಿಕ್ಷಕರಿಗೂ 'ಜ್ಯೋತಿ...

ಅನುದಾನಿತ ಶಿಕ್ಷಕರಿಗೂ 'ಜ್ಯೋತಿ ಸಂಜೀವಿನಿ' ವಿಸ್ತರಿಸುವ ಬಗ್ಗೆ ಸಿಎಂ ಜೊತೆ ಚರ್ಚೆ: ಸುರೇಶ್‍ ಕುಮಾರ್

ವಾರ್ತಾಭಾರತಿವಾರ್ತಾಭಾರತಿ14 Dec 2020 7:47 PM IST
share
ಅನುದಾನಿತ ಶಿಕ್ಷಕರಿಗೂ ಜ್ಯೋತಿ ಸಂಜೀವಿನಿ ವಿಸ್ತರಿಸುವ ಬಗ್ಗೆ ಸಿಎಂ ಜೊತೆ ಚರ್ಚೆ: ಸುರೇಶ್‍ ಕುಮಾರ್

ಬೆಂಗಳೂರು, ಡಿ.14: ಸರಕಾರಿ ಶಾಲೆಗಳ ಶಿಕ್ಷಕರಿಗೆ ಇರುವಂತೆ ಜ್ಯೋತಿ ಸಂಜೀವಿನಿ ಯೋಜನೆಯನ್ನು ಅನುದಾನಿತ ಶಾಲೆಗಳ ಶಿಕ್ಷಕರಿಗೂ ವಿಸ್ತರಿಸುವ ಕುರಿತಂತೆ ಮುಖ್ಯಮಂತ್ರಿಗಳಿಗೆ ಪ್ರಸ್ತಾವನೆ ಸಲ್ಲಿಸಿ ಚರ್ಚಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಮಾಧ್ಯಮಿಕ ಶಾಲಾ ನೌಕರರ ಸಂ(ರಿ), ರಾಜ್ಯ ಖಾಸಗಿ ಶಿಕ್ಷಣ ಸಂಸ್ಥೆಗಳ ನೌಕರರ ಹಾಗೂ ಆಡಳಿತ ಮಂಡಳಿಗಳ ಹೋರಾಟ ಸಮನ್ವಯ ಸಮಿತಿ ಹಾಗೂ ರಾಜ್ಯದ ವಿವಿಧ ಸಂಟನೆಗಳ ಆಶ್ರಯದಲ್ಲಿ ಧಾರವಾಡದಲ್ಲಿ ನಡೆಯುತ್ತಿರುವ ಸತ್ಯಾಗ್ರಹದ ಹಿನ್ನೆಲೆಯಲ್ಲಿ ಸೋಮವಾರ ಬೆಂಗಳೂರಿನಲ್ಲಿ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮತ್ತು ಸಂಟಘನೆಗಳ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿ ಮಾತನಾಡಿದ ಅವರು, ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೆ ಸರಕಾರಿ ನೌಕರರಿಗಿರುವ ಸೌಲಭ್ಯಗಳನ್ನು ನೀಡುವಲ್ಲಿ ಸರಕಾರ ಮುಕ್ತ ಮನಸ್ಸು ಹೊಂದಿದ್ದು, ಈ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಸೂಕ್ತ ವೇದಿಕೆಯಲ್ಲಿ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು ಎಂದರು.

ಬಸವರಾಜ ಹೊರಟ್ಟಿ ನೇತೃತ್ವದ ಸಮಿತಿ ಸಲ್ಲಿಸಿರುವ ಕಾಲ್ಪನಿಕ ವೇತನ ಅನುಷ್ಠಾನದಿಂದಾಗುವ ಆರ್ಥಿಕ ಪರಿಣಾಮಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿ ವಿವರವಾದ ವರದಿ ತಯಾರಿಸಿ ಸಂಪುಟದ ಮುಂದಿಡಲಾಗುವುದು. ಈ ಕುರಿತಂತೆ ವರದಿಯನ್ನು ಕಡತದಲ್ಲಿ ಮಂಡಿಸುವಂತೆ ಸಚಿವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಬಾಕಿ ವೇತನದ ಹೊರೆಯಿಲ್ಲದೇ ಮತ್ತು ಸರಕಾರದ ಬೊಕ್ಕಸಕ್ಕೆ ಅನಾವಶ್ಯಕ ಹೊರೆಯಾಗದಂತೆ ಎಲ್ಲ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸೌಲಭ್ಯವನ್ನು ಒದಗಿಸಲು ಸಿಎಂ ಜೊತೆ ಚರ್ಚಿಸಿ ನಿರ್ಧಾರಕ್ಕೆ ಬರಲಾಗುವುದು ಎಂದು ಅವರು ವಿವರಿಸಿದರು.

ಎನ್.ಪಿ.ಎಸ್ ಪದ್ಧತಿ ರದ್ದುಪಡಿಸಿ ಹಳೆ ಪಿಂಚಣಿ ವ್ಯವಸ್ಥೆ ಮುಂದುವರಿಸುವುದು ಶಿಕ್ಷಣ ಇಲಾಖೆಯೊಂದೇ ತೆಗೆದುಕೊಳ್ಳಬೇಕಾದ ನಿರ್ಧಾರವಲ್ಲ. ಅದು ಎಲ್ಲ ಇಲಾಖೆಗಳಿಗೂ ಸಂಬಂಧಿಸಿದಾಗಿದ್ದು, ಇದು ನೀತಿನಿರೂಪಣಾ ವಿಷಯವಾಗಿರುವುದರಿಂದ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಎಲ್ಲ ಇಲಾಖೆಗಳೂ ಸೇರಿ ಒಂದು ನಿರ್ಧಾರಕ್ಕೆ ಬರಬೇಕಿದೆ. ಹಳೇ ಪದ್ಧತಿಯನ್ನೇ ಮುಂದುವರಿಸುವುದು ಇಲ್ಲವೇ ಎನ್.ಪಿ.ಎಸ್ ಮುಂದುವರರಿಸುವುದಾದರೆ ಉದ್ಯೋಗದಾತನ ವಂತಿಗೆಯನ್ನು ಸರಕಾರವೇ ಭರ್ತಿ ಮಾಡಬೇಕೆಂಬ ಕುರಿತ ತಮ್ಮ ಆಗ್ರಹವನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗುವುದು ಎಂದು ಸುರೇಶ್ ಕುಮಾರ್ ಹೇಳಿದರು.

ದೈಹಿಕ ಶಿಕ್ಷಕರ ಬೇಡಿಕೆಗಳಿಗೆ ಸಂಬಂಧಿಸಿದ ಡಾ. ವೈದ್ಯನಾಥನ್ ವರದಿಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿಗೆ ಪ್ರಸ್ತಾಪಿಸಿದ್ದು, ಈ ಶಿಕ್ಷಕರನ್ನು ಇತರೆ ಶಿಕ್ಷಕರ ಸಾಲಿನಲ್ಲಿ ಸಮಾನವಾಗಿ ಗುರುತಿಸಲು ಅನುವಾಗುವಂತೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಅವರು ಸೂಚಿಸಿದರು.

2015ರ ನಂತರ ಅನುದಾನಿತ ಶಾಲಾ ಕಾಲೇಜುಗಳಲ್ಲಿ ನಿವೃತ್ತಿ, ನಿಧನ ಸೇರಿದಂತೆ ಹಲವಾರು ಕಾರಣಗಳಿಂದ ತೆರವಾಗಿರುವ ಹುದ್ದೆಗಳ ಭರ್ತಿಗೆ ಪ್ರಸ್ತುತ ಆರ್ಥಿಕ ಇಲಾಖೆಯ ನಿರ್ಬಂಧದ ತೆರವಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಹಾಗೆಯೇ ಇದಕ್ಕೂ ಮುನ್ನ ರಾಜ್ಯದ ಖಾಸಗಿ ಅನುದಾನಿತ ಶಾಲಾ ಕಾಲೇಜುಗಳಲ್ಲಿ ಖಾಲಿಯಾಗಿರುವ ಹುದ್ದೆಗಳ ವಿವರಗಳನ್ನು ಶಾಲಾವಾರು ಸಂಗ್ರಹಿಸಿ ಸಲ್ಲಿಸಬೇಕೆಂದು ಸುರೇಶ್ ಕುಮಾರ್ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದರು. 

ಅನುದಾನ ರಹಿತ ಖಾಸಗಿ ಶಾಲೆಗಳ ಶಿಕ್ಷಕರು ಮತ್ತು ಸಿಬ್ಬಂದಿಯ ಸೇವಾ ಭದ್ರತೆ ಆಯಾ ಆಡಳಿತ ಮಂಡಳಿಗಳ ಜವಾಬ್ದಾರಿಯಾಗಿದ್ದು, ಈ ನಿಟ್ಟಿನಲ್ಲಿ ಕಠಿಣ ಸುತ್ತೋಲೆಯನ್ನು ಕೂಡಲೇ ಜಾರಿ ಮಾಡುವುದಲ್ಲದೇ ವಿಚಕ್ಷಣಾ ವ್ಯವಸ್ಥೆಯನ್ನು ಬಲಪಡಿಸಲಾಗುವುದು ಎಂದು ಸಚಿವರು ವಿವರಿಸಿದರು.

ಶಿಕ್ಷಕ ಮತ್ತು ವಿದ್ಯಾರ್ಥಿಗಳ ಪ್ರಸ್ತುತ ಅನುಪಾತ 1:70ನ್ನು 1:50ಕ್ಕೆ ಬದಲಾಯಿಸುವ ಕುರಿತು ಆಡಳಿತಾತ್ಮಕ ಅನುಮೋದನೆ ನೀಡುವ ಸಂಬಂಧದಲ್ಲಿ ಪ್ರಸ್ತಾವನೆ ಸಲ್ಲಿಸಬೇಕೆಂದು ಸೂಚನೆ ನೀಡಿದರು. ಖಾಸಗಿ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸರಕಾರಿ ಶಾಲಾ ಶಿಕ್ಷಕರಿಗೆ ನೀಡುವ ತರಬೇತಿಯನ್ನು ವಿಸ್ತರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದಲ್ಲಿ 100ಕ್ಕಿಂತ ಕಡಿಮೆ ಇರುವ ಶಾಲೆಗಳ ನೋಂದಣಿ ರದ್ದುಪಡಿಸಲು ಆ ಭಾಗದ ಆಯುಕ್ತರು ಹೊರಡಿಸಿರುವ ಆದೇಶ ಶಿಕ್ಷಣ ಅಧಿನಿಯಮದ ಆದೇಶಕ್ಕೆ ವಿರುದ್ಧವಾಗಿದ್ದು, ತಕ್ಷಣವೇ ಹಿಂಪಡೆಯಲು ಅಪರ ಆಯುಕ್ತರಿಗೆ ನಿರ್ದೇಶನ ನೀಡಬೇಕೆಂದು ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದರು.

ಸರಕಾರವು ಎಲ್ಲ ಶಿಕ್ಷಕರ ಸಮಸ್ಯೆಯನ್ನು ಪರಿಹರಿಸಲು ತೆರೆದ ಮನಸ್ಸು ಹೊಂದಿದ್ದು ಮೂರು ತಿಂಗಳ ಅವಧಿಯಲ್ಲಿ ಈಡೇರಿಸಲು ಸಾಧ್ಯವಾಗಬಹುದಾದ ಬೇಡಿಕೆಗಳನ್ನು ಅನುಷ್ಠಾನಗೊಳಿಸುವಲ್ಲಿ ಕ್ರಮ ವಹಿಸುತ್ತದೆ. ನಾಡಿನ ಮಕ್ಕಳ ಹಿತದೃಷ್ಟಿಯಿಂದ ಸಂಘಟನೆಯು ನಡೆಸುತ್ತಿರುವ ಪ್ರತಿಭಟನೆಯನ್ನು ಹಿಂಪಡೆಯಬೇಕೆಂದು ಸುರೇಶ್ ಕುಮಾರ್ ಮನವಿ ಮಾಡಿದರು. 

ಸಭೆಯಲ್ಲಿ ಮಾಜಿ ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಸಂಘಟನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಶಾಮ ಮಲ್ಲನಗೌಡ, ಪ್ರಧಾನ ಕಾರ್ಯದರ್ಶಿ ಜಿ.ಆರ್. ಭಟ್ ಮತ್ತಿತರರು ಭಾಗವಹಿಸಿದ್ದರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X