Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಕೆಎಸ್ಸಾರ್ಟಿಸಿ ನೌಕರರ ಮುಷ್ಕರ ವಾಪಸ್:...

​ಕೆಎಸ್ಸಾರ್ಟಿಸಿ ನೌಕರರ ಮುಷ್ಕರ ವಾಪಸ್: ದ.ಕ. ಜಿಲ್ಲೆಯಲ್ಲಿ ಬಸ್ ಸಂಚಾರ ಪುನಾರಂಭ

ವಾರ್ತಾಭಾರತಿವಾರ್ತಾಭಾರತಿ14 Dec 2020 8:14 PM IST
share

ಮಂಗಳೂರು, ಡಿ.14: ಕೆಎಸ್ಸಾರ್ಟಿಸಿ ಸಾರಿಗೆ ನೌಕರರ ಮುಷ್ಕರ ವಾಪಸ್ ಪಡೆದ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಸೋಮವಾರ ಸಂಜೆಯಿಂದಲೇ ಶೇ.50ರಷ್ಟು ಕೆಎಸ್ಸಾರ್ಟಿಸಿ ಬಸ್‌ಗಳು ಪುನಃ ಸಂಚಾರ ಆರಂಭಿಸಿವೆ.

ಮಂಗಳೂರು ಮತ್ತು ಪುತ್ತೂರು ಕೆಎಸ್ಸಾರ್ಟಿಸಿ ವಿಭಾಗದಿಂದ ಸೋಮವಾರ ಮಧ್ಯಾಹ್ನ ವೇಳೆಗೆ ಆಯಾ ವಿಭಾಗೀಯ ನಿಯಂತ್ರಣಾಧಿಕಾರಿಗಳ ಮುತುವರ್ಜಿಯಿಂದ ಶೇ.10ರಷ್ಟು ಬಸ್‌ಗಳು ಸಂಚಾರಕ್ಕೆ ಇಳಿದಿದ್ದವು. ಸಂಜೆ ಮುಷ್ಕರ ವಾಪಸ್ ಆಗುತ್ತಿದ್ದಂತೆ ಶೇ.50ರಷ್ಟು ಬಸ್‌ಗಳು ಸಂಚಾರ ಆರಂಭಿಸಿದವು. ಈ ವೇಳೆ ಖಾಸಗಿ ಬಸ್‌ಗಳು ಕೂಡ ಹೆಚ್ಚುವರಿ ಸಂಚಾರ ನಡೆಸಿರುವುದು ಗಮನಾರ್ಹ.

ಕೆಎಸ್ಸಾರ್ಟಿಸಿ ನೌಕರರ ಮುಷ್ಕರದ ಹೊರತಾಗಿಯೂ ಮಂಗಳೂರು ವಿಭಾಗದಿಂದ ಧರ್ಮಸ್ಥಳ, ಸುಬ್ರಹ್ಮಣ್ಯ, ಕಾಸರಗೋಡುಗಳಿಗೆ ಕೆಲವೇ ಬಸ್‌ಗಳು ಸಂಚರಿಸುತ್ತಿದ್ದವು. ಆದರೆ ಸೋಮವಾರ ಬೆಳಗ್ಗೆ ಏಕಾಏಕಿ ನೌಕರರು ಮುಷ್ಕರಕ್ಕೆ ಇಳಿದ ಪರಿಣಾಮ ಮಂಗಳೂರು ವಿಭಾಗದಲ್ಲೂ ಬಸ್ ಸಂಚಾರ ಸ್ಥಗಿತಗೊಂಡಿತು.

ಬಳಿಕ ವಿಭಾಗೀಯ ನಿಯಂತ್ರಣಾಧಿಕಾರಿ ಅರುಣ್ ಕುಮಾರ್ ನೌಕರರ ಜೊತೆ ಮಾತುಕತೆ ನಡೆಸಿ ಬೆಳಗ್ಗೆ 11 ಗಂಟೆ ಸುಮಾರಿಗೆ 38ಕ್ಕೂ ಹೆಚ್ಚು ಬಸ್‌ಗಳು ಧರ್ಮಸ್ಥಳ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಕಾಸರಗೋಡುಗಳಿಗೆ ಸಂಚರಿಸಲು ಅನುವಾಗಿದ್ದವು. ಪುತ್ತೂರು ವಿಭಾಗದಿಂದಲೂ ಧರ್ಮಸ್ಥಳ, ಪುತ್ತೂರು, ಬಿ.ಸಿ.ರೋಡ್ ಹಾಗೂ ಮಡಿಕೇರಿಗೆ ಬೆರಳೆಣಿಕೆ ಬಸ್‌ಗಳು ಸಂಚರಿಸಿದವು. ಆದರೆ ಸುಳ್ಯದಲ್ಲಿ ಬಸ್ ರಸ್ತೆಗೆ ಇಳಿಯಲೇ ಇಲ್ಲ.

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷದೀಪ ಉತ್ಸವ ಪ್ರಯುಕ್ತ ಪುತ್ತೂರು ವಿಭಾಗದಿಂದ ಪುತ್ತೂರು, ಸುಬ್ರಹ್ಮಣ್ಯದಿಂದ ಕೆಎಸ್ಸಾರ್ಟಿಸಿ ಕಳೆದ ಮೂರು ದಿನಗಳಿಂದ ಬಸ್ ಓಡಿಸುತ್ತಿದೆ. ಈ ಬಗ್ಗೆ ಪುತ್ತೂರು ವಿಭಾಗದ ವಿಭಾಗೀಯ ಅಧಿಕಾರಿ ಹಾಗೂ ಸಂಚಾರ ನಿಯಂತ್ರಣಾಧಿಕಾರಿಗಳು ನೌಕರರ ಮನ ಒಲಿಸಿ ಧರ್ಮಸ್ಥಳಕ್ಕೆ ಬಸ್ ಸಂಚಾರ ಏರ್ಪಡಿಸಿದರು.

ಸಂಚಾರ ನಿಯಂತ್ರಣಾಧಿಕಾರಿಗಳು ಧರ್ಮಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು. ಧರ್ಮಸ್ಥಳಕ್ಕೆ ರವಿವಾರ ತೆರಳಿದ್ದ ಕೆಎಸ್ಸಾರ್ಟಿಸಿ ಬಸ್ ಚಾಲಕರು ಮುಷ್ಕರಕ್ಕೆ ಮುಂದಾಗಿದ್ದರು. ಆಗ ಸ್ವತಃ ಕಾರ್ಯಾಚರಣೆಗೆ ಇಳಿದ ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳು ಬಸ್‌ಗಳನ್ನು ವಾಪಸ್ ಮಂಗಳೂರಿಗೆ ಕರೆಸಿ, ಮಂಗಳೂರಿನಿಂದ ಸೋಮವಾರ ವಿವಿಧ ಕಡೆಗಳಿಗೆ ಸಂಚಾರ ಏರ್ಪಾಟು ಮಾಡಿಸಿದರು.

ಮಂಗಳೂರಿನ ಮೂರು ಡಿಪೋ, ಉಡುಪಿ ಹಾಗೂ ಕುಂದಾಪುರ ಸೇರಿ ಕೋವಿಡ್ ನಂತರ 390 ಬಸ್‌ಗಳ ಪೈಕಿ 200ಕ್ಕೂ ಅಧಿಕ ಬಸ್‌ಗಳು ಸೋಮವಾರ ಸಂಜೆಯಿಂದಲೇ ರಸ್ತೆಗೆ ಇಳಿದಿವೆ. ಕಾಸರಗೋಡಿಗೂ ಸಂಚಾರ ಕೈಗೊಂಡಿವೆ. ಇದೇ ರೀತಿ ಪುತ್ತೂರು, ಬಿ.ಸಿ.ರೋಡ್, ಧರ್ಮಸ್ಥಳ, ಸುಳ್ಯ, ಮಡಿಕೇರಿ ಡಿಪೋ ವ್ಯಾಪ್ತಿಯ ಪುತ್ತೂರು ವಿಭಾಗದಲ್ಲಿ 390 ಬಸ್‌ಗಳ ಪೈಕಿ 200ಕ್ಕೂ ಅಧಿಕ ಬಸ್‌ಗಳು ರಸ್ತೆಗೆ ಇಳಿದಿವೆ. ಸೋಮವಾರ ರಾತ್ರಿ ಕೂಡ ಈ ಎರಡು ವಿಭಾಗಗಳಿಂದ ಬಸ್‌ಗಳು ಎಂದಿನ ಸಂಚಾರ ಕೈಗೊಂಡಿವೆ.

ಕಳೆದ ನಾಲ್ಕು ದಿನಗಳಿಂದ ಕೆಎಸ್ಸಾರ್ಟಿಸಿ ಬಸ್‌ಗಳು ರಸ್ತೆಗೆ ಇಳಿಯದೆ ಮುಷ್ಕರ ನಡೆಸುತ್ತಿದ್ದರೆ, ಇತ್ತ ಖಾಸಗಿ ಬಸ್ ಮಾಲಕರು ದರ ಏರಿಕೆ ಮಾಡದೆ ಖಾಸಗಿ ಬಸ್‌ಗಳನ್ನು ಓಡಿಸಿ ಪ್ರಯಾಣಿಕರಿಗೆ ನೆರವಾಗಿರುವುದು ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ.

ಮಂಗಳೂರು ನಗರ ಹಾಗೂ ಗ್ರಾಮಾಂತರ ಮತ್ತು ಕಾಂಟ್ರಾಕ್ಟ್ ಕ್ಯಾರೇಜ್ ರೂಟ್‌ಗಳಲ್ಲಿ ಖಾಸಗಿ ಬಸ್ ಸಂಚಾರ ಸ್ಥಗಿತವಾಗಿರಲಿಲ್ಲ. ರವಿವಾರ ಸಂಜೆ ಖಾಸಗಿ ಬಸ್‌ಗಳ ರಾಜ್ಯ ಮಟ್ಟದ ಸಂಘಟನೆಗಳು ಸರಕಾರಿ ಬಸ್ ಮುಷ್ಕರಕ್ಕೆ ಕೈಜೋಡಿಸುವ ಮಾತನ್ನಾಡಿದರೂ ದ.ಕ. ಜಿಲ್ಲೆಯ ಬಸ್ ಮಾಲಕರು ಬಸ್ ಬಂದ್ ಬೆಂಬಲಿಸುವುದಿಲ್ಲ ಎಂದು ದಿಟ್ಟತನ ತೋರಿಸಿದ್ದರು.

‘ಮಂಗಳೂರು ಸಂಪರ್ಕಿಸುವ ಧರ್ಮಸ್ಥಳ, ಸುಬ್ರಹ್ಮಣ್ಯ, ಕಾಸರಗೋಡು, ಪುತ್ತೂರು ರೂಟ್‌ಗಳಲ್ಲಿ ಎಂದಿನಂತೆ ಖಾಸಗಿ ಬಸ್‌ಗಳನ್ನು ಓಡಿಸಿದ್ದಾರೆ. ಜತೆಗೆ ಹೆಚ್ಚುವರಿ ಟ್ರಿಪ್‌ಗಳನ್ನು ನಡೆಸಿದ್ದಾರೆ’ ಎಂದು ಜಿಲ್ಲಾ ಬಸ್ ಮಾಲಕರ ಸಂಘದ ಅಧ್ಯಕ್ಷ ದಿಲ್‌ರಾಜ್ ಆಳ್ವ ಸ್ಪಷ್ಟಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X