Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಗಳವಾರ ಪರಿಷತ್ ವಿಶೇಷ ಅಧಿವೇಶನ:...

ಮಂಗಳವಾರ ಪರಿಷತ್ ವಿಶೇಷ ಅಧಿವೇಶನ: 'ಗೋಹತ್ಯೆ ನಿಷೇಧ' ಮಸೂದೆ, ಅವಿಶ್ವಾಸ ನಿರ್ಣಯದತ್ತ ಎಲ್ಲರ ಚಿತ್ತ

ವಾರ್ತಾಭಾರತಿವಾರ್ತಾಭಾರತಿ14 Dec 2020 8:14 PM IST
share
ಮಂಗಳವಾರ ಪರಿಷತ್ ವಿಶೇಷ ಅಧಿವೇಶನ: ಗೋಹತ್ಯೆ ನಿಷೇಧ ಮಸೂದೆ, ಅವಿಶ್ವಾಸ ನಿರ್ಣಯದತ್ತ ಎಲ್ಲರ ಚಿತ್ತ

ಬೆಂಗಳೂರು, ಡಿ.14: ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದ್ದ ಮೇಲ್ಮನೆ ಅಧಿವೇಶನವು ಸರಕಾರದ ಸೂಚನೆ ಮೇರೆಗೆ ನಾಳೆ(ಡಿ.15) ವಿಶೇಷ ಅಧಿವೇಶನ ನಡೆಯಲಿದ್ದು, ಆಡಳಿತ ಪಕ್ಷ ಹಾಗೂ ವಿಪಕ್ಷಗಳ ನಡುವಿನ ವಾಕ್ಸಮರಕ್ಕೆ ಸಾಕ್ಷಿಯಾಗಲಿದೆ. ಸಭಾಪತಿ ಪ್ರತಾಪಚಂದ್ರ ಶೆಟ್ಟಿ ವಿರುದ್ಧದ ಅವಿಶ್ವಾಸ ನಿಲುವಳಿ ಸೂಚನೆ ಈ ವಿಶೇಷ ವಿಶೇಷ ಅಧಿವೇಶನದ ಪ್ರಮುಖ ಕಾರ್ಯಸೂಚಿಯಾಗಿದ್ದು, ಆ ಬಳಿಕ ಗೋಹತ್ಯೆ ನಿಷೇಧ ಮಸೂದೆಯನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.

ತಮ್ಮ ವಿರುದ್ಧದ ಅವಿಶ್ವಾಸ ಗೊತ್ತುವಳಿಗೆ ಸಂಬಂಧಿಸಿದಂತೆ ತಾಂತ್ರಿಕ ಸಮಸ್ಯೆಗಳಿದ್ದು, ಕಾನೂನು ಸಲಹೆ ಕೇಳಿ ಮುಂದುವರಿಯುವುದಾಗಿ ಪ್ರತಾಪಚಂದ್ರ ಶೆಟ್ಟಿ ಹೇಳಿದ್ದಾರೆ. ಅವಿಶ್ವಾಸ ನೋಟಿಸ್ ನೀಡಿ 14 ದಿನಗಳು ಕಳೆದಿದೆ. ಕಳೆದ ಗುರುವಾರಕ್ಕೆ 15 ನೇ ದಿನವಾಗಿದೆ. ಹೀಗಾಗಿ, ಅದನ್ನು ಕೈಗೆತ್ತಿಕೊಳ್ಳಬೇಕು ಎಂದು ಬಿಜೆಪಿ ಒತ್ತಾಯಿಸಿದೆ.

ವಿಧಾನಪರಿಷತ್ ಸಚಿವಾಲಯದ ಮೂಲಗಳ ಪ್ರಕಾರ, ಸಭಾಪತಿಯವರಿಗೆ ಬೇರೆ ಮಾರ್ಗವಿಲ್ಲ. ಖಾಸಗಿ ವಕೀಲರ ಮೂಲಕ ಸಲಹೆ ಪಡೆಯಲು ಅವರಿಗೆ ಸಾಧ್ಯವಿಲ್ಲ. ಅವಿಶ್ವಾಸವನ್ನು ಎದುರಿಸಲೇಬೇಕು. ಸದನವೇ ಸರ್ವೋಚ್ಚವಾಗಿದ್ದು, ಅಲ್ಲಿ ತೆಗೆದುಕೊಳ್ಳುವ ನಿರ್ಣಯಕ್ಕೆ ಅವರು ತಲೆ ಬಾಗಬೇಕಾಗುತ್ತದೆ ಎನ್ನಲಾಗಿದೆ.

ಜೆಡಿಎಸ್ ಬೆಂಬಲ ಸಾಧ್ಯತೆ: ಪ್ರತಾಪಚಂದ್ರ ಶೆಟ್ಟಿಯವರನ್ನು ಸಭಾಪತಿ ಸ್ಥಾನದಿಂದ ಇಳಿಸಲು ಬಿಜೆಪಿಯು ಜೆಡಿಎಸ್ ಬೆಂಬಲವನ್ನು ಕೇಳಿದೆ. ಬೆಂಬಲ ನೀಡುವುದಾಗಿ ಜೆಡಿಎಸ್ ವರಿಷ್ಠರು ಭರವಸೆ ನೀಡಿದ್ದಾರೆ ಎಂದು ಮೂಲಗಳು ಹೇಳಿವೆ. ಇದರ ಭಾಗವಾಗಿ ಇತ್ತೀಚಿಗೆ ಮೇಲ್ಮನೆ ಜೆಡಿಎಸ್ ಹಿರಿಯ ಸದಸ್ಯ ಬಸವರಾಜ ಹೊರಟ್ಟಿಯೂ ಅನಿವಾರ್ಯವಾಗಿ ಬೆಂಬಲಿಸಬೇಕಾಗುತ್ತದೆ ಎಂದಿದ್ದಾರೆ. ಆದರೆ, ಜೆಡಿಎಸ್ ನಡೆ ನಾಳೆ ನಡೆಯುವ ಅಧಿವೇಶನದಲ್ಲಿ ನಿರ್ಣಾಯಕವಾಗಿರಲಿದೆ.

ವಿಧಾನಪರಿಷತ್‍ನಲ್ಲಿ ಬಿಜೆಪಿ 31 ಮಂದಿ ಸದಸ್ಯರನ್ನು ಹೊಂದಿದ್ದರೆ, ಜೆಡಿಎಸ್ 14 ಮಂದಿ ಸದಸ್ಯರನ್ನು ಹೊಂದಿದೆ. ಪಕ್ಷೇತರ ಒಬ್ಬ ಸದಸ್ಯರಿದ್ದಾರೆ. ಪಕ್ಷೇತರ, ಜೆಡಿಎಸ್ ಹಾಗೂ ಬಿಜೆಪಿ ಸೇರ್ಪಡೆಯಾದರೆ ಒಟ್ಟು 46 ಸದಸ್ಯರ ಸಂಖ್ಯಾಬಲವಾಗಲಿದೆ. ಕಾಂಗ್ರೆಸ್ ಸಭಾಪತಿ ಸೇರಿದಂತೆ ಒಟ್ಟು 29 ಮಂದಿ ಸದಸ್ಯರ ಸಂಖ್ಯಾಬಲ ಹೊಂದಿದೆ. ಅವಿಶ್ವಾಸ ನಿರ್ಣಯ ವಿಚಾರದಲ್ಲಿ ಗೆಲ್ಲಲು ಕಾಂಗ್ರೆಸ್‍ಗೆ ಅಗತ್ಯವಾದ ಸಂಖ್ಯಾಬಲ ಇಲ್ಲ. ಹೀಗಾಗಿ ಸಭಾಪತಿಯವರು ಅವಿಶ್ವಾಸ ಗೊತ್ತುವಳಿಯನ್ನು ತಿರಸ್ಕರಿಸಿರುವುದಕ್ಕೆ ಕಾಂಗ್ರೆಸ್ ಬೆಂಬಲ ವ್ಯಕ್ತಪಡಿಸಿದೆ.

ವಿಧಾನಸಭೆಯಲ್ಲಿ ಅಂಗೀಕಾರಗೊಂಡ ಗೋಹತ್ಯೆ ನಿಷೇಧ ಮಸೂದೆಯ ಬಗ್ಗೆ ಬಿಜೆಪಿ ಬಾಯಿ ಬಿಡುತ್ತಿಲ್ಲ. ಅವಿಶ್ವಾಸ ವಿಷಯ ಮುಗಿದ ಮೇಲೆ ಕೈಗೆತ್ತಿಕೊಳ್ಳಬಹುದು. ಆದರೆ, ಸಭಾಪತಿ ಇಳಿಸುವುದೇ ನಮ್ಮ ಆದ್ಯತೆ ಎಂದು ಬಿಜೆಪಿ ಸದಸ್ಯರು ಹೇಳಿದ್ದಾರೆ. ವಿಧಾನಪರಿಷತ್ತಿನಲ್ಲಿ ಈ ಮಸೂದೆ ಅಂಗೀಕಾರ ಪಡೆಯದೇ ಇದ್ದರೆ, ಸರಕಾರ ಸುಗ್ರೀವಾಜ್ಞೆ ಹೊರಡಿಸಬೇಕಾಗುತ್ತದೆ. ವಿಧಾನಸಭೆಯಲ್ಲಿ ಏಕಾಏಕಿ ಹೆಚ್ಚುವರಿ ಕಾರ್ಯಸೂಚಿ ಪಟ್ಟಿಯಲ್ಲಿ ಮಸೂದೆಯನ್ನು ಸೇರಿಸಿ ಮಂಡಿಸಲಾಯಿತು. ಅದೇ ರೀತಿಯ ತಂತ್ರ ಅನುಸರಿಸಲೂಬಹುದು. ಆದರೆ, ಜೆಡಿಎಸ್ ಬೆಂಬಲ ನೀಡುತ್ತದೆಯಾ, ಇಲ್ಲವಾ ಎಂಬುದು ನಾಳೆಯೇ ತೀರ್ಮಾನವಾಗಲಿದೆ.

ಕಲಾಪ ವೇಳಾಪಟ್ಟಿ

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 ಪ್ರಮುಖವಾಗಿ ಚರ್ಚೆಯಾಗಲಿದೆ. ಉಳಿದಂತೆ ನಿಯಮ 68ರ ಮೇರೆಗೆ ವಿಪಕ್ಷ ಸದಸ್ಯರು ಅತಿವೃಷ್ಟಿಯಿಂದಾದ ಹಾನಿಯ ಕುರಿತು ಮಾತನಾಡಲಿದ್ದಾರೆ. ಪ್ರಶ್ನೋತ್ತರ, ಗಮನ ಸೆಳೆಯುವ ಸೂಚನೆಗಳು, ನಿಯಮ 330 ಮೇರೆಗೆ ಚರ್ಚೆ ಹಾಗೂ ಅರ್ಧಗಂಟೆಯ ಕಾಲಾವಧಿ ಚರ್ಚೆಯು ನಡೆಯಲಿದೆ ಎಂದು ಪರಿಷತ್‍ನ ಕಾರ್ಯದರ್ಶಿ ಬಿಡುಗಡೆ ಮಾಡಿರುವ ಕಲಾಪ ವೇಳಾಪಟ್ಟಿಯಲ್ಲಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X