Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ‘ಲವ್ ಜಿಹಾದ್’ ಪ್ರಕರಣದಲ್ಲಿ ಪುತ್ರರ...

‘ಲವ್ ಜಿಹಾದ್’ ಪ್ರಕರಣದಲ್ಲಿ ಪುತ್ರರ ಬಂಧನ; ನೆರೆಹೊರೆಯವರ ಸಹಾಯದಿಂದ ದಿನದೂಡುತ್ತಿರುವ ತಂದೆತಾಯಿ

ವಾರ್ತಾಭಾರತಿವಾರ್ತಾಭಾರತಿ15 Dec 2020 3:37 PM IST
share
‘ಲವ್ ಜಿಹಾದ್’ ಪ್ರಕರಣದಲ್ಲಿ ಪುತ್ರರ ಬಂಧನ; ನೆರೆಹೊರೆಯವರ ಸಹಾಯದಿಂದ ದಿನದೂಡುತ್ತಿರುವ ತಂದೆತಾಯಿ

ಮೊರಾದಾಬಾದ್,ಡಿ.15: ಉತ್ತರ ಪ್ರದೇಶದ ಮೊರಾದಾಬಾದ್‍ನ ಕಾಂತ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಕುಟುಂಬವೊಂದು ರಾಜ್ಯದಲ್ಲಿನ ಮತಾಂತರ ನಿಷೇಧ ಕಾಯ್ದೆಯ ಕಾರಣದಿಂದ ಸಂಕಷ್ಟಕ್ಕೊಳಗಾಗಿದೆ. ಈ ಮನೆಯ ಇಬ್ಬರು ಆಧಾರಸ್ಥಂಭಗಳು ಇದೀಗ ಜೈಲುಪಾಲಾಗಿರುವುದರಿಂದ ಅವರ 45 ವರ್ಷದ ತಾಯಿಗೆ ಮತ್ತು ವೃದ್ಧ ತಂದೆಗೆ ದಿಕ್ಕೇ ತೋಚದಂತಾಗಿದ್ದು, ನೆರೆಹೊರೆಯವರ ಸಹಾಯದಿಂದ ಈ ಕುಟುಂಬ ದಿನದೂಡುತ್ತಿದೆ.

“ಅವರು ಯಾವುದೇ ಅಪರಾಧವೆಸಗಿಲ್ಲ” ಎಂದು ಇಬ್ಬರು ಯುವಕರ ತಾಯಿ ಹೇಳುತ್ತಾರೆ. ಆಕೆಯ ಹಿರಿಯ ಪುತ್ರ ದಿನಗೂಲಿ ಕಾರ್ಮಿಕನಾಗಿದ್ದರೆ ಕಿರಿಯವ ಕ್ಷೌರಿಕನಾಗಿದ್ದಾನೆ. “ನನಗೆ ನಾಲ್ಕು ಮಂದಿ ಪುತ್ರಿಯರು ಹಾಗೂ ಮೂವರು ಪುತ್ರರು. ಇಬ್ಬರು ಪುತ್ರರು ಜೈಲಿನಲ್ಲಿದ್ದಾರೆ. ನಾವು ಕಡು ಬಡವರು, ಮನೆಯಲ್ಲಿ ತಿನ್ನಲು ಏನೂ ಇಲ್ಲ” ಎಂದು ಆಕೆ ತಮ್ಮ ಕಷ್ಟ ವಿವರಿಸುತ್ತಾರೆ.

ಕುಟುಂಬಕ್ಕೆ ವಿದ್ಯುತ್ ಬಿಲ್ ಕೂಡ ಪಾವತಿಸಲು ಕಷ್ಟವಾಗಿದ್ದರಿಂದ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ. ಜೈಲಿನಲ್ಲಿರುವ ಪುತ್ರರನ್ನು ಬಿಡಿಸಲು ವಕೀಲರನ್ನು ಹೇಗೆ ನೇಮಿಸುವುದು ಎಂದು ಕೂಡ ಆಕೆಗೆ ತಿಳಿಯದಾಗಿದ್ದು ಅದಕ್ಕೆ ಅವಶ್ಯಕತೆಯಿರುವ ಹಣವೂ ಆಕೆಯ ಬಳಿಯಿಲ್ಲ. ಒಂದು ವಾರದ ಹಿಂದೆ ಸರಕಾರದ ಆಶ್ರಯತಾಣಕ್ಕೆ ಕರೆದುಕೊಂಡು ಹೋಗಲಾದ ಸೊಸೆಯ ಬಗ್ಗೆಯೂ ಈಕೆಗೆ ಕಳವಳವಿದೆ. ಆಕೆ ಗರ್ಭಿಣಿಯಾಗಿರುವುದರಿಂದ ಹಾಗೂ ತೀವ್ರ ರಕ್ತಸ್ರಾವದಿಂದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಬೇಕಾಗಿ ಬಂದಿತ್ತು.

“ಆಕೆ ನನ್ನನ್ನು ಪಾಪಾಜಿ ಎನ್ನುತ್ತಾಳೆ. ನನ್ನ ಮೇಲೆ ಅಪಾರ ಪ್ರೀತಿ ಮತ್ತು ಗೌರವ. ಆಕೆ ನನ್ನ ಪುತ್ರಿ ಆಕೆ ನಮಗೆ ವಾಪಸ್ ಬೇಕು” ಎಂದು ಯುವಕರ 54 ವರ್ಷದ ತಂದೆ ತಮ್ಮ ಸೊಸೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡುತ್ತಾರೆ. ಬಂಧಿತ ಯುವಕರ ಸಹೋದರಿ ತಮ್ಮ ಕುಟುಂಬದ ಫೋಟೋ ತೋರಿಸಿ “ಧರ್ಮ ಒಂದು ವಿಚಾರವೇ ಅಲ್ಲ. ನಮ್ಮ ಜೀವನದಲ್ಲಿ ಜನರೇಕೆ ಹಸ್ತಕ್ಷೇಪ ಮಾಡುತ್ತಾರೆಂದು ಆಕೆ ಯಾವತ್ತೂ ಪ್ರಶ್ನಿಸುತ್ತಿದ್ದಳು” ಎನ್ನುತ್ತಾಳೆ.

ನಿಕಾಹ್ ನಡೆದ ನಂತರ ನಾಲ್ಕು ತಿಂಗಳುಗಳಿಂದ ಅಂತರ-ಧರ್ಮೀಯ ದಂಪತಿ ಇದೇ ಮನೆಯಲ್ಲಿ ವಾಸವಾಗಿದ್ದರು. ಯುವತಿ ತನ್ನ ಸ್ವಇಚ್ಛೆಯಿಂದಲೇ ಮತಾಂತರಗೊಂಡಿದ್ದಳು ಎಂದು ಆಕೆಯ ಅತ್ತೆ ಹೇಳುತ್ತಾರೆ. ಇಬ್ಬರೂ ತಮ್ಮ ವಿವಾಹ ನೋಂದಣಿಗಾಗಿ ಡಿಸೆಂಬರ್ 5ರಂದು ರಿಜಿಸ್ಟ್ರಾರ್ ಕಚೇರಿಗೆ ತೆರಳುತ್ತಿದ್ದಾಗ ಬಜರಂಗದಳ ಕಾರ್ಯಕರ್ತರು ತಡೆದಿದ್ದರು. ನಂತರ ಯುವಕನನ್ನು ಬಂಧಿಸಲಾಗಿತ್ತು.

“ಆಕೆ ಯಾವತ್ತೂ ಪತಿಯ ಜತೆ ಖುಷಿಯಿಂದಿದ್ದಳು, ತನ್ನ ನಾದಿನಿ ಜತೆಗೂ ಸ್ನೇಹದಿಂದಿದ್ದಳು” ಎಂದು ನೆರೆಮನೆಯವರೊಬ್ಬರು ಹೇಳುತ್ತಾರೆ. ಉತ್ತರಪ್ರದೇಶದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಾದ ಬಳಿಕ ನಡೆದ ಹಲವು ಪ್ರಕರಣಗಳಲ್ಲಿ ಇದೂ ಒಂದು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X