ಯಕ್ಷ ವಿದ್ವಾಂಸ ಗಣೇಶ ಕೊಲೆಕಾಡಿಗೆ ತಲ್ಲೂರು ಕನಕ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿ
![ಯಕ್ಷ ವಿದ್ವಾಂಸ ಗಣೇಶ ಕೊಲೆಕಾಡಿಗೆ ತಲ್ಲೂರು ಕನಕ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿ ಯಕ್ಷ ವಿದ್ವಾಂಸ ಗಣೇಶ ಕೊಲೆಕಾಡಿಗೆ ತಲ್ಲೂರು ಕನಕ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿ](https://www.varthabharati.in/sites/default/files/images/articles/2020/12/15/271306-1608035095.jpg)
ಉಡುಪಿ, ಡಿ.15: ಯಕ್ಷಗಾನ ಕಲಾರಂಗ ಯಕ್ಷ ವಿದ್ವಾಂಸರಿಗೆ ನೀಡುವ ತಲ್ಲೂರು ಕನಕ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿಗೆ ಈ ಬಾರಿ ಪ್ರಸಂಗಕರ್ತ, ಛಾಂದಸ, ಕಲಾವಿದ ಗಣೇಶ ಕೊಲೆಕಾಡಿ ಆಯ್ಕೆಯಾಗಿದ್ದಾರೆ ಎಂದು ಯಕ್ಷಗಾನ ಕಲಾರಂಗ ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ಹಾಗೂ ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಪ್ರಶಸ್ತಿ ಪ್ರದಾನ ಸಮಾರಂಭ ಡಿ.25ರ ಸಂಜೆ 5 ಗಂಟೆಗೆ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ. ಪರ್ಯಾಯ ಶ್ರೀ ಅದಮಾರು ಮಠಾಧೀಶ ಶ್ರೀಈಶಪ್ರಿಯ ತೀರ್ಥರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹಿಸಲಿದ್ದಾರೆ. ಪ್ರಶಸ್ತಿಯು 40,000ರೂ. ನಗದು ಪುರಸ್ಕಾರ ಸಹಿತ ಪ್ರಶಸ್ತಿ ಪರಿಕರಗಳನ್ನೊಳಗೊಂಡಿರುತ್ತದೆ ಎಂದು ಪ್ರಕಟನೆ ತಿಳಿಸಿದೆ.
Next Story