Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. "ಹಿಂದೂ ಗಲಭೆಕೋರರ ಜೊತೆ ಸೇರಿ...

"ಹಿಂದೂ ಗಲಭೆಕೋರರ ಜೊತೆ ಸೇರಿ ಮುಸ್ಲಿಮನೊಬ್ಬ ಮತ್ತೊಬ್ಬ ಮುಸ್ಲಿಮನನ್ನು ಕೊಂದನೆಂಬ ವಾದ ಸ್ವೀಕಾರಾರ್ಹವಲ್ಲ"

ದಿಲ್ಲಿ ಕೋರ್ಟ್

ವಾರ್ತಾಭಾರತಿವಾರ್ತಾಭಾರತಿ15 Dec 2020 5:54 PM IST
share
ಹಿಂದೂ ಗಲಭೆಕೋರರ ಜೊತೆ ಸೇರಿ ಮುಸ್ಲಿಮನೊಬ್ಬ ಮತ್ತೊಬ್ಬ ಮುಸ್ಲಿಮನನ್ನು ಕೊಂದನೆಂಬ ವಾದ ಸ್ವೀಕಾರಾರ್ಹವಲ್ಲ

ಹೊಸದಿಲ್ಲಿ,ಡಿ.15: “ಅರ್ಜಿದಾರ ಒಬ್ಬ ಮುಸ್ಲಿಂ ಆಗಿರುವುದರಿಂದ, ಹೆಚ್ಚಾಗಿ ಹಿಂದು ಸಮುದಾಯದವರೇ ಇದ್ದ 'ಅಕ್ರಮ ಕೂಟ'ದ ಸದಸ್ಯರ ಜತೆಗೆ ಸೇರಿಕೊಂಡು ಉದ್ವಿಗ್ನತೆಯ ವಾತಾವರಣದಲ್ಲಿ ಮುಸ್ಲಿಂ ಹುಡುಗನೊಬ್ಬನನ್ನು ಥಳಿಸಿ ಸಾಯಿಸುತ್ತಾನೆ ಎನ್ನುವ ವಾದ ಸ್ವೀಕಾರಾರ್ಹವಲ್ಲ” ಎಂದು ಈಶಾನ್ಯ ದಿಲ್ಲಿ ಗಲಭೆ ಸಂಬಂಧದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ವ್ಯಕ್ತಿಯೊಬ್ಬನಿಗೆ ಜಾಮೀನು ನೀಡುವ ವೇಳೆ ದಿಲ್ಲಿಯ ಕರ್ಕಡೂಮ ನ್ಯಾಯಾಲಯ ಹೇಳಿದೆ.

ಗಲಭೆ ಸಂದರ್ಭ ಮುಸ್ಲಿಂ ಯುವಕರಾದ ಝಾಕಿರ್ ಹಾಗೂ ಅಶ್ಫಖ್ ಹುಸೈನ್ ಎಂಬ ಇಬ್ಬರ ಸಾವಿಗೆ ಸಂಬಂಧಿಸಿದ ಪ್ರಕರಣದಲ್ಲಿ  ಆರಿಫ್ ಎಂಬ ವ್ಯಕ್ತಿ ಸಲ್ಲಿಸಿದ್ದ ಎರಡು ಜಾಮೀನು ಅರ್ಜಿಗಳ ವಿಚಾರಣೆ ವೇಳೆ ಹೆಚ್ಚುವರಿ ಸೆಶನ್ಸ್ ನ್ಯಾಯಾಧೀಶ ವಿನೋದ್ ಯಾದವ್ ಡಿಸೆಂಬರ್ 11ರಂದು ಮೇಲಿನಂತೆ ಹೇಳಿದ್ದಾರೆ.

ಅರ್ಜಿದಾರ ಅಕ್ರಮ ಕೂಟದ ಭಾಗವಾಗಿ ಆಸ್ತಿಪಾಸ್ತಿ ಹಾಗೂ ಇತರ ಸಮುದಾಯದ ಮಂದಿಯ ಜೀವಕ್ಕೆ ಹಾನಿಯುಂಟು ಮಾಡಿದ್ದಾನೆಂದು ಆರೋಪಿಸಲಾಗಿತ್ತು.

ಘಟನೆಯಲ್ಲಿ ಮುಸ್ಲಿಂ ಹುಡುಗನೊಬ್ಬ ಮೃತಪಟ್ಟಿದ್ದು ಈ ಪ್ರಕರಣದ ಎಲ್ಲಾ ಆರೋಪಿಗಳು ಹಿಂದುಗಳಾಗಿರುವಾಗ  ಮುಸ್ಲಿಂ ಯುವಕನೊಬ್ಬ (ಜಾಮೀನು ಅರ್ಜಿದಾರ) ಹಿಂದು ಸಮುದಾಯದವರೇ ಹೆಚ್ಚಿದ್ದ ಇಂತಹ ಉದ್ರಿಕ್ತ ಗುಂಪಿನ  ಭಾಗವಾಗಿರುತ್ತಾನೆ ಎಂಬ ಆರೋಪ ಆಘಾತಕರ ಎಂದು ಆತನ ಪರ ವಕೀಲರು ತಮ್ಮ ವಾದ ಮಂಡನೆ ವೇಳೆ ಹೇಳಿದ್ದರು.

ಆದರೆ ಅರ್ಜಿದಾರ ಅಕ್ರಮ ಕೂಟದ ಭಾಗವಾಗಿದ್ದ ಹಾಗೂ ಆ ಇಬ್ಬರು ಯುವಕರಿಗೆ  ಹಲ್ಲೆ ನಡೆಸಿ ಅಂತಿಮವಾಗಿ ಅವರ ಸಾವಿಗೆ ಕಾರಣವಾಗಿದ್ದ ಎಂದು ವಿಶೇಷ ಸಾರ್ವಜನಿಕ ಅಭಿಯೋಜಕರು ವಾದಿಸಿದ್ದರು.

ಪ್ರಕರಣದ ಇತರ ಆರೋಪಿಗಳಾದ ಅಜಯ್, ಅಶೋಕ್ ಕುಮಾರ್, ಶುಭಂ ಹಾಗೂ ಜಿತೇಂದರ್ ಅವರ ಜಾಮೀನು ಅರ್ಜಿ ತಿರಸ್ಕೃತಗೊಂಡಿರುವುದರಿಂದ ಈ ಅಪೀಲನ್ನೂ ತಿರಸ್ಕರಿಸಬೇಕೆಂದು ಅವರು ಕೋರಿದ್ದರು.

ಆದರೆ ಅರ್ಜಿದಾರ ಅಕ್ರಮ ಕೂಟದ ಭಾಗವಾಗಿದ್ದ ಎಂದು ಹೊರನೋಟಕ್ಕೆ ತಿಳಿಯುವುದಿಲ್ಲ ಹಾಗೂ ಆತ ಈ ಹಲ್ಲೆ ನಡೆಸಿದ್ದಾನೆಂಬುದಕ್ಕೆ ಸಿಸಿಟಿವಿ ವೀಡಿಯೋ ದೃಶ್ಯಗಳು ದೊರಕಿಲ್ಲ. ಈತ ಈ ಘಟನೆ ಸಂದರ್ಭ ನಿರ್ದಿಷ್ಟವಾಗಿ ಏನು ಮಾಡಿದ್ದ ಎಂಬುದನ್ನೂ ಪ್ರತ್ಯಕ್ಷದರ್ಶಿ ಸಾಕ್ಷಿಗಳು ಹೇಳಿಲ್ಲ ಎಂದು ಹೇಳಿದ ನ್ಯಾಯಾಲಯವು ಆತನ ಜಾಮೀನು ಅರ್ಜಿಯನ್ನು ಅಂಗೀಕರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X