Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ ಜಿ.ಗ್ರಾ.ಪಂ ಚುನಾವಣೆ ಮೊದಲ ಹಂತ:...

ಉಡುಪಿ ಜಿ.ಗ್ರಾ.ಪಂ ಚುನಾವಣೆ ಮೊದಲ ಹಂತ: 63 ಮಂದಿ ಅವಿರೋಧ ಆಯ್ಕೆ, 1047 ಸ್ಥಾನಕ್ಕೆ 2349 ಅಭ್ಯರ್ಥಿಗಳು

ಅಭ್ಯರ್ಥಿಗಳೇ ಇಲ್ಲದ ಕೋಡಿ ಗ್ರಾಪಂಗೆ ಚುನಾವಣೆ ಇಲ್ಲ

ವಾರ್ತಾಭಾರತಿವಾರ್ತಾಭಾರತಿ15 Dec 2020 9:21 PM IST
share
ಉಡುಪಿ ಜಿ.ಗ್ರಾ.ಪಂ ಚುನಾವಣೆ ಮೊದಲ ಹಂತ: 63 ಮಂದಿ ಅವಿರೋಧ ಆಯ್ಕೆ, 1047 ಸ್ಥಾನಕ್ಕೆ 2349 ಅಭ್ಯರ್ಥಿಗಳು

ಉಡುಪಿ, ಡಿ.13: ಜಿಲ್ಲೆಯ ಉಡುಪಿ, ಹೆಬ್ರಿ, ಬೈಂದೂರು, ಬ್ರಹ್ಮಾವರ ತಾಲೂಕುಗಳ 67 ಗ್ರಾಪಂಗಳ ಒಟ್ಟು 1122 ಸ್ಥಾನಗಳಿಗೆ ನಡೆಯುವ ಮೊದಲ ಹಂತದ ಚುನಾವಣೆಯಲ್ಲಿ ಸ್ಪರ್ಧಾ ಕಣ ಸ್ಪಷ್ಟಗೊಂಡಿದ್ದು, ಒಟ್ಟು 63 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಡಿ.22ರಂದು ನಡೆಯುವ ಚುನಾವಣೆಯಲ್ಲಿ 1047 ಸ್ಥಾನಗಳಿಗೆ ಮತದಾನ ನಡೆಯಲಿದ್ದು, ಒಟ್ಟು 2349 ಅಭ್ಯರ್ಥಿಗಳು ಸ್ಪರ್ಧಾಕಣದಲ್ಲಿ ಉಳಿದುಕೊಂಡಿದ್ದಾರೆ.

ಬ್ರಹ್ಮಾವರ ತಾಲೂಕು ಕೋಡಿ ಗ್ರಾಪಂನಲ್ಲಿ ವಿವಿಧ ಕಾರಣಗಳಿಗಾಗಿ ಚುನಾವಣೆಯನ್ನು ಬಹಿಷ್ಕರಿಸುವ ಗ್ರಾಮಸ್ಥರ ಒಗ್ಗಟ್ಟಿನ ತೀರ್ಮಾನದಂತೆ ಈ ಗ್ರಾಪಂನ 12 ಸ್ಥಾನಗಳಿಗೆ ಯಾವೊಬ್ಬ ಅಭ್ಯರ್ಥಿಯೂ ಸ್ಪರ್ಧಾಕಣದಲ್ಲಿ ಉಳಿದುಕೊಂಡಿಲ್ಲ. ನಾಮಪತ್ರ ಸಲ್ಲಿಕೆಯ ಕೊನೆಯ ದಿನದಂದು ಮೂವರು ನಾಮಪತ್ರ ಸಲ್ಲಿಸಿದ್ದರೂ ಗ್ರಾಮಸ್ಥರ ಒತ್ತಾಸೆಯಂತೆ ಅವರು ನಾಮಪತ್ರ ಹಿಂದೆಗೆತದ ಕೊನೆಯ ದಿನವಾದ ಸೋಮವಾರ ತಮ್ಮ ನಾಮಪತ್ರಗಳನ್ನು ಹಿಂದೆಗೆದುಕೊಂಡರು. ಅಲ್ಲಿಗೆ ಕೋಡಿ ಗ್ರಾಪಂನಲ್ಲಿ ಈ ಬಾರಿ ಚುನಾವಣೆಯೇ ನಡೆಯದಂತಾಗಿದೆ.

ನಾಲ್ಕು ತಾಲೂಕುಗಳಲ್ಲಿ ಒಟ್ಟು 63 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇವರಲ್ಲಿ ಉಡುಪಿ ತಾಲೂಕಿನ 9 ಮಂದಿ, ಹೆಬ್ರಿ ತಾಲೂಕಿನ 7 ಮಂದಿ, ಬೈಂದೂರು ತಾಲೂಕಿನ 8 ಮಂದಿ ಹಾಗೂ ಬ್ರಹ್ಮಾವರ ತಾಲೂಕಿನ 39 ಮಂದಿ ಸೇರಿದ್ದಾರೆ.

ಹೀಗಾಗಿ ಉಳಿದ 1047 ಸ್ಥಾನಗಳಿಗೆ ಮಾತ್ರ ಡಿ.22ರಂದು ಮತದಾನ ನಡೆಯಬೇಕಾಗಿದೆ. ಇವುಗಳಿಗೆ 1241 ಪುರುಷರು ಹಾಗೂ 1108 ಮಹಿಳೆಯರು ಸೇರಿದಂತೆ ಒಟ್ಟು 2349 ಮಂದಿ ಸ್ಪರ್ಧೆಯಲ್ಲಿ ಉಳಿದು ಕೊಂಡಿದ್ದಾರೆ.

ಉಡುಪಿ ತಾಲೂಕಿನ 16 ಗ್ರಾಪಂಗಳ ಉಳಿದ 320 ಸ್ಥಾನಗಳಿಗೆ ಒಟ್ಟು 684 ಮಂದಿ (351ಪುರುಷರು+333ಮಹಿಳೆಯರು) ಸ್ಪರ್ಧಿಸಿದ್ದರೆ, ಹೆಬ್ರಿ ತಾಲೂಕಿನ 9 ಗ್ರಾಪಂಗಳ 115 ಸ್ಥಾನಗಳಿಗೆ 255 (131+124) ಮಂದಿ, ಬೈಂದೂರು ತಾಲೂಕಿನ 15 ಗ್ರಾಪಂಗಳ 251 ಸ್ಥಾನಗಳಿಗೆ ಒಟ್ಟು 585 (310+275) ಮಂದಿ ಹಾಗೂ ಬ್ರಹ್ಮಾವರ ತಾಲೂಕಿನ 27 ಗ್ರಾಪಂಗಳ 361 ಸ್ಥಾನಗಳಿಗೆ ಒಟ್ಟು 825 (449+376) ಮಂದಿ ಸ್ಪರ್ಧೆಯಲ್ಲಿ ಉಳಿದುಕೊಂಡಿದ್ದಾರೆ.

ನಾಲ್ಕು ತಾಲೂಕುಗಳಲ್ಲಿ ಪರಿಶಿಷ್ಟ ಜಾತಿಗೆ ಸೇರಿದ 149 (15+134) ಸ್ಪರ್ಧಿಸಿದ್ದು, ಇವರಲ್ಲಿ ಉಡುಪಿ ತಾಲೂಕಿನಲ್ಲಿ 42 (9+33), ಹೆಬ್ರಿಯಲ್ಲಿ 20 (0+20), ಬೈಂದೂರಿನಲ್ಲಿ 32 (0+32) ಹಾಗೂ ಬ್ರಹ್ಮಾವರದಲ್ಲಿ 55 (6+48) ಮಂದಿ ಸ್ಪರ್ಧೆಯಲ್ಲಿದ್ದಾರೆ.

ಪರಿಶಿಷ್ಟ ಪಂಗಡಕ್ಕೆ ಸೇರಿದ 182 (56+126) ಮಂದಿ ಸ್ಪರ್ಧೆಯಲ್ಲಿದ್ದರೆ, ಉಡುಪಿಯಲ್ಲಿ 48 (14+34), ಹೆಬ್ರಿಯಲ್ಲಿ 27(14+13), ಬೈಂದೂರಿನಲ್ಲಿ 35 (6+29) ಹಾಗೂ ಬ್ರಹ್ಮಾವರದಲ್ಲಿ 72 (22+50) ಅದೃಷ್ಟ ಪರೀಕ್ಷೆಗೆ ಉಳಿದುಕೊಂಡಿದ್ದಾರೆ.

ಹಿಂದುಳಿದ ವರ್ಗ ‘ಎ’ಗೆ ಸೇರಿದ 543 (276+267) ಮಂದಿ ಸ್ಪರ್ಧೆಯಲ್ಲಿ ಉಳಿದಿದ್ದು, ಇವರಲ್ಲಿ ಉಡುಪಿ ತಾಲೂಕಿನಲ್ಲಿ 166 (85+81), ಹೆಬ್ರಿಯಲ್ಲಿ 19+30), ಬೈಂದೂರಿನಲ್ಲಿ 151 (80+71), ಹಾಗೂ ಬ್ರಹ್ಮಾವರದಲ್ಲಿ 177 (92+85) ಮಂದಿ ಸ್ಪರ್ಧಿಸುತಿದ್ದಾರೆ.

ಹಿಂದುಳಿದ ವರ್ಗ ‘ಬಿ’ಗೆ ಸೇರಿದ 132 (56+76) ಮಂದಿ ಡಿ.22ರಂದು ಅದೃಷ್ಟ ಪರೀಕ್ಷೆ ನಡೆಸಿದ್ದಾರೆ. ಇವರಲ್ಲಿ ಉಡುಪಿಯ 41 (14+27), ಹೆಬ್ರಿಯ 14(10+4), ಬೈಂದೂರಿನ 31(12+19) ಹಾಗೂ ಬ್ರಹ್ಮಾವರದ 46 (20+26) ಮಂದಿ ಸೇರಿದ್ದಾರೆ.

ಇನ್ನು ಸಾಮಾನ್ಯ ವರ್ಗಕ್ಕೆ ಸೇರಿದ 1343 (838+505) ಮಂದಿ ಸ್ಪರ್ಧಿಸುತಿದ್ದಾರೆ. ಇವರಲ್ಲಿ ಉಡುಪಿ ತಾಲೂಕಿನ 387(229+158) ಮಂದಿ, ಹೆಬ್ರಿ ತಾಲೂಕಿನ 145 (88+57) ಮಂದಿ, ಬೈಂದೂರು ತಾಲೂಕಿನ 336 (212+214) ಮಂದಿ ಹಾಗೂ ಬ್ರಹ್ಮಾವರ ತಾಲೂಕಿನ 475 (309+166) ಮಂದಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಎರಡನೇ ಹಂತದ ಚುನಾವಣೆಗೆ 1306 ನಾಮಪತ್ರ

ಡಿ.27ರಂದು ಜಿಲ್ಲೆಯ ಕುಂದಾಪುರ, ಕಾರ್ಕಳ, ಕಾಪು ತಾಲೂಕುಗಳ ಒಟ್ಟು 86 ಗ್ರಾಪಂಗಳ 1243 ಸ್ಥಾನಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆಯ ನಾಲ್ಕನೇ ದಿನವಾದ ಇಂದು ಒಟ್ಟು 1306 ನಾಮಪತ್ರಗಳು ಸಲ್ಲಿಕೆಯಾಗಿವೆ. ಇದರಿಂದ ಈವರೆಗೆ ಒಟ್ಟು 2557 ನಾಮಪತ್ರ ಸಲ್ಲಿಕೆಯಾ ದಂತಾಗಿದೆ.

ಇಂದು ಕುಂದಾಪುರದ 43 ಗ್ರಾಪಂಗಳಿಗೆ 473, ಕಾರ್ಕಳದ 27 ಗ್ರಾಪಂಗಳಿಗೆ 560 ಹಾಗೂ ಕಾಪುವಿನ 16 ಗ್ರಾಪಂಗಳಿಗೆ 273 ನಾಮಪತ್ರಗಳನ್ನು ಸ್ವೀಕರಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X