ಕರಾವಳಿ ಅಲ್ಪಸಂಖ್ಯಾತ ಮೀನುಗಾರ ಸಂಘದಿಂದ ಪರಿಹಾರಧನ ವಿತರಣೆ
![ಕರಾವಳಿ ಅಲ್ಪಸಂಖ್ಯಾತ ಮೀನುಗಾರ ಸಂಘದಿಂದ ಪರಿಹಾರಧನ ವಿತರಣೆ ಕರಾವಳಿ ಅಲ್ಪಸಂಖ್ಯಾತ ಮೀನುಗಾರ ಸಂಘದಿಂದ ಪರಿಹಾರಧನ ವಿತರಣೆ](https://www.varthabharati.in/sites/default/files/images/articles/2020/12/15/271376-1608050873.jpg)
ಮಂಗಳೂರು, ಡಿ.15: ಮಂಗಳೂರಿನ ‘ಶ್ರೀರಕ್ಷಾ’ ಬೋಟ್ ದುರಂತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಸಹಕಾರಿ ಸಂಘದಿಂದ ತಲಾ 50 ಸಾವಿರ ಪರಿಹಾಧನದ ಚೆಕ್ಗಳನ್ನು ನಗರದ ಸೆಂಟ್ರಲ್ ಕಮಿಟಿಯ ಸಭಾಂಗಣದಲ್ಲಿ ಮಂಗಳವಾರ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಕರಾವಳಿ ಅಲ್ಪಸಂಖ್ಯಾತ ಮೀನುಗಾರರ ಸಹಕಾರಿ ಸಂಘದ ಸಲಹೆಗಾರ ಪ್ರವೀಣ್ ಕುಮಾರ್ ಶೆಟ್ಟಿ, ಅಲ್ಪಸಂಖ್ಯಾತ ಮೀನುಗಾರರ ಸಂಘವು ಆರಂಭದ ದಿನಗಳಿಂದಲೂ ಜಾತಿ, ಧರ್ಮ, ಭೇದವಿಲ್ಲದೆ ಸರ್ವ ಧರ್ಮೀಯರ ಸಂಕಷ್ಟಕ್ಕೆ ಸ್ಪಂದಿ ಸುತ್ತಾ ನಿರಂತರ ಬೆಳವಣಿಗೆ ಕಂಡಿದೆ ಎಂದರು.
ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಐಒಸಿ ನಿವೃತ್ತ ಅಧಿಕಾರಿ ಮೋಹನ್ ದಾಸ್, ಸಂಘ-ಸಂಸ್ಥೆಗಳಲ್ಲಿರುವ ಹಣ ನೊಂದ ವರು, ಸಂಕಷ್ಟದಲ್ಲಿರುವವರ ಉಪಯೋಗಕ್ಕೆ ಬರಬೇಕು. ಸೇವೆ ಮಾಡುವ ಭಾಗ್ಯ ಎಲ್ಲರಿಗೂ ಸಿಗದಿದ್ದರೂ ಅಲ್ಪಸಂಖ್ಯಾತ ಮೀನುಗಾರರ ಸಂಘ ಸಿಕ್ಕಿರುವ ಅವಕಾಶವನ್ನು ಸಮರ್ಪಕವಾಗಿ ಬಳಸಿಕೊಂಡಿದೆ ಎಂದು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಕಿಡ್ನಿ ಮತ್ತು ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಆರ್ಥಿಕವಾಗಿ ಹಿಂದುಳಿದ ಕುಟುಂಬಕ್ಕೆ ಧನಸಹಾಯ ವಿತರಿಸಲಾ ಯಿತು. ಸಂಘದ ಅಧ್ಯಕ್ಷ ಜೆ.ಮುಹಮ್ಮದ್ ಇಸಾಕ್ ಚಾಲನೆ ನೀಡಿದರು. ಈ ಸಂದರ್ಭ ಸಂಘದ ಉಪಾಧ್ಯಕ್ಷ ಅಹ್ಮದ್ ಬಾವ ಬಜಾಲ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅಬ್ದುಲ್ ಲತೀಫ್, ನಿರ್ದೇಶಕರಾದ ಯು.ಟಿ. ಅಹ್ಮದ್ ಶರೀಫ್, ಬಿ.ಇ ಬ್ರಾಹಿಂ, ಮುಹಮ್ಮದ್ ಅಶ್ರಫ್, ಎಂ.ಎ. ಗಫೂರ್, ಎಸ್.ಕೆ. ಇಸ್ಮಾಯಿಲ್, ಎಸ್.ಎಂ. ಇಬ್ರಾಹಿಂ, ಟಿ.ಎಚ್. ಹಮೀದ್, ಸುದತ್, ಬಿ.ಮುಹಮ್ಮದ್ ಶಾ ಅಲಿ, ಎ.ಎಂ.ಕೆ. ಮುಹಮ್ಮದ್ ಇಬ್ರಾಹಿಂ, ಬಿ.ಕೆ. ರಝಿಯಾ ಮೊದಲಾದವರು ಉಪಸ್ಥಿತರಿದ್ದರು.
ತಾಪಂ ಮಾಜಿ ಸದಸ್ಯ ಮುಹಮ್ಮದ್ ಮುಸ್ತಫಾ ಮಲಾರ್ ಕಾರ್ಯಕ್ರಮ ನಿರೂಪಿಸಿದರು.