ಬಿಐಇಆರ್ಟಿ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ನೇಮಕ
ಉಡುಪಿ, ಡಿ.16: ಪ್ರಸಕ್ತ ಸಾಲಿನಲ್ಲಿ ಸಮಗ್ರ ಶಿಕ್ಷಣ ಯೋಜನೆಯಡಿ ಜಿಲ್ಲೆಯಲ್ಲಿ ಪ್ರಾಥಮಿಕ/ಪ್ರೌಢ ಶಾಲಾ ಹಂತದಲ್ಲಿ ಖಾಲಿ ಇರುವ ಬಿಐಇಆರ್ಟಿ ಹುದ್ದೆಗಳನ್ನು ಬಾಹ್ಯ ಮೂಲದಿಂದ ನೇರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ವಿಕಲಚೇತನ ಮಕ್ಕಳ ಬೋಧನೆಗಾಗಿ ವಿಶೇಷ ಬಿಎಡ್ /ಡಿಎಡ್ ಪದವಿ ಪಡೆದಿರುವ ಆಸಕ್ತ ಅ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಡಿ.22 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಆಯಾ ಕ್ಷೇತ್ರದ ಶಿಕ್ಷಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾ ಯೋಜನಾ ಸಮನ್ವಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story