Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೊರೋನ ಸೋಂಕಿನಿಂದ ಮೃತಪಟ್ಟ ನೂರಾರು...

ಕೊರೋನ ಸೋಂಕಿನಿಂದ ಮೃತಪಟ್ಟ ನೂರಾರು ವ್ಯಕ್ತಿಗಳನ್ನು ಅಂಕಿ-ಅಂಶದಲ್ಲಿ ಕೈಬಿಟ್ಟ ಗುಜರಾತ್ ಸರಕಾರ

ವಾರ್ತಾಭಾರತಿವಾರ್ತಾಭಾರತಿ16 Dec 2020 9:56 PM IST
share
ಕೊರೋನ ಸೋಂಕಿನಿಂದ ಮೃತಪಟ್ಟ ನೂರಾರು ವ್ಯಕ್ತಿಗಳನ್ನು ಅಂಕಿ-ಅಂಶದಲ್ಲಿ ಕೈಬಿಟ್ಟ ಗುಜರಾತ್ ಸರಕಾರ

ಹೊಸದಿಲ್ಲಿ, ಡಿ. 16: ಗುಜರಾತ್‌ನಲ್ಲಿ ಕೊರೋನ ಸೋಂಕಿನಿಂದ ಮೃತಪಟ್ಟ ನೂರಾರು ವ್ಯಕ್ತಿಗಳನ್ನು ರಾಜ್ಯದ ಅಧಿಕೃತ ಮರಣದ ಅಂಕಿ-ಅಂಶಗಳಲ್ಲಿ ಸೇರ್ಪಡೆಗೊಳಿಸಿಲ್ಲ ಎಂದು ‘ದೈನಿಕ್ ಭಾಸ್ಕರ್’ನ ವರದಿ ಹೇಳಿದೆ. ಯಾವುದೇ ಆಸ್ಪತ್ರೆಗೆ ಭೇಟಿ ನೀಡದ ಅಥವಾ ಯಾವುದೇ ಚಿಕಿತ್ಸೆ ಪಡೆಯದ ಈ ವ್ಯಕ್ತಿಗಳ ಅಂತ್ಯ ಸಂಸ್ಕಾರವನ್ನು ಕೋವಿಡ್-19ನಿಂದ ಮೃತಪಟ್ಟವರ ಮೃತದೇಹಗಳ ಅಂತ್ಯ ಸಂಸ್ಕಾರಕ್ಕೆ ವಿಧಿಸಲಾಗಿರುವ ಮಾರ್ಗದರ್ಶಿ ಸೂತ್ರಗಳಿಗೆ ಅನುಗುಣವಾಗಿ ನಡೆಸಲಾಯಿತು.

ಈ ಪೈಕಿ ಕೊರೋನ ಲಕ್ಷಣ ಕಾಣಿಸಿಕೊಂಡ ಶೇ. 5ರಷ್ಟು ಮೃತದೇಹಗಳನ್ನು ಮಾತ್ರ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿತ್ತು. 2020 ಮಾರ್ಚ್‌ನಿಂದ 500 ಮೃತದೇಹಗಳನ್ನು ಸಿವಿಲ್ ಆಸ್ಪತ್ರೆಗೆ ತರಲಾಗಿತ್ತು. ಇದರಲ್ಲಿ 200 ಮೃತದೇಹಗಳಲ್ಲಿ ಕೊರೋನ ಸೋಂಕಿನ ಲಕ್ಷಣಗಳು ಕಂಡು ಬಂದಿದ್ದರೂ ಕೇವಲ 10 ಮೃತದೇಹಗಳನ್ನು ಮಾತ್ರ ಕೊರೋನ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇದರಲ್ಲಿ ಮೂರು ಮೃತದೇಹಗಳಲ್ಲಿ ಮಾತ್ರ ಕೊರೋನ ಪಾಸಿಟಿವ್ ಕಂಡು ಬಂದಿತ್ತು. ಇದರಿಂದಾಗಿ ಪ್ರತಿ ಮೂವರಲ್ಲಿ ಒಬ್ಬರಿಗೆ ಕೊರೋನ ಸೋಂಕು ಇದ್ದಿರಬಹುದು ಎಂದು ಅಂದಾಜಿಸಲಾಗಿದೆ.

ಕೊರೋನ ಪಾಸಿಟಿವ್ ಎಂದು ವರದಿಯಾಗಿದ್ದ ಮೂವರು ವ್ಯಕ್ತಿಗಳ ಸಾವಿಗೆ ಕೊರೋನ ಸೋಂಕು ಕಾರಣ ಎಂದು ಗುರುತಿಸಲಾಗಿತ್ತಾದರೂ ಸೂರತ್ ನಗರ ಸಭೆ ಡಾ. ಮೋಹನ್ ಬಾಬುಬಾ ಗಾಮಿತ್ ಅವರ ಸಾವನ್ನು ಲೆಕ್ಕಕ್ಕೆ ತೆಗೆದುಕೊಂಡಿರಲಿಲ್ಲ. ಆದರೆ, ಸೂರತ್ ಮುನ್ಸಿಪಲ್ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಎಜುಕೇಶನ್ ಆ್ಯಂಡ್ ರಿಸರ್ಚ್ (ಎಸ್‌ಎಂಐಎಂಇಆರ್) ಆಸ್ಪತ್ರೆಯ ಕೋವಿಡ್-19 ವಾರ್ಡ್‌ನಲ್ಲಿ ಕೆಲಸ ಮಾಡಿದ ಗಾಮಿತ್ ಅವರು ಮೃತಪಟ್ಟ ಒಂದು ದಿನದ ಬಳಿಕ ಗಾಮಿತ್ ಅವರ ಮೃತದೇಹವನ್ನು ಕೊರೋನ ರ್ಯಾಪಿಡ್ ಪರೀಕ್ಷೆಗೆ ಒಳಪಡಿಸಲಾಗಿತ್ತು.

ಪರೀಕ್ಷೆಯಲ್ಲಿ ಅವರಿಗೆ ಕೋವಿಡ್ ಸೋಂಕು ತಗಲಿರುವುದು ದೃಢಪಟ್ಟಿತ್ತು ಹಾಗೂ ಮರಣ ಪ್ರಮಾಣ ಪತ್ರದಲ್ಲಿ ಅವರ ಸಾವಿಗೆ ಕೊರೋನ ಸೋಂಕು ಕಾರಣ ಎಂದು ಗುರುತಿಸಲಾಗಿತ್ತು. ಕೊರೋನ ರೋಗ ಲಕ್ಷಣ ಇರುವ ಎಲ್ಲ 200 ಮೃತದೇಹಗಳ ಪರೀಕ್ಷೆ ನಡೆಸಿದ್ದರೆ ಬಹುಶಃ 60 ಪಾಸಿಟಿವ್ ಪ್ರಕರಣಗಳು ಬೆಳಕಿಗೆ ಬರುತ್ತಿತ್ತು. ಒಂದು ವೇಳೆ ಎಲ್ಲ 500 ಮೃತದೇಹಗಳನ್ನು ಪರೀಕ್ಷೆಗೆ ಒಳಪಡಿಸಿದ್ದರೆ, ಈ ಅಂಕಿ-ಅಂಶ ಇನ್ನೂ ಏರಿಕೆಯಾಗುತ್ತಿತ್ತು ಎಂದು ವರದಿ ಹೇಳಿದೆ. ‘‘ಕೊರೋನ ರೋಗ ಲಕ್ಷಣ ಇರುವ 10 ಮೃತದೇಹಗಳನ್ನು ಸಿವಿಲ್ ಆಸ್ಪತ್ರೆಯಲ್ಲಿ ಕೊರೋನ ರ‍್ಯಾಪಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಸುಮಾರು 190 ಮೃತದೇಹಗಳ ಪರೀಕ್ಷೆ ನಡೆಸಿಲ್ಲ. ಈ ಮೃತದೇಹಗಳ ಮರಣೋತ್ತರ ಪರೀಕ್ಷೆ ಮಾತ್ರ ನಡೆಸಲಾಗಿತ್ತು’’ ಎಂದು ವರದಿ ಹೇಳಿದೆ.

ಕೊರೋನ ಸೋಂಕಿಗೆ ಒಳಗಾದವರ ಸಂಪರ್ಕಕ್ಕೆ ಒಳಗಾದವರು ಎಂಬ ಶಂಕೆ ಇರುವವರ ಅಥವಾ ವಿದೇಶ ಪ್ರಯಾಣದ ಇತಿಹಾಸ ಹೊಂದಿರುವವರು ಅಥವಾ ಸಾವಿಗೆ ಕಾರಣವಾದ ಯಾವುದೇ ಗಾಯಗಳಿಲ್ಲದ ಅಥವಾ ಸಾವಿಗೆ ಯಾವುದೇ ವಿವರಣೆ ನೀಡಲು ಸಾಧ್ಯವಾಗದ ಹಾಗೂ ಮೃತಪಟ್ಟಿದ್ದ ವ್ಯಕ್ತಿ ಯುವಕನಾಗಿದ್ದರೆ, ಅಂತಹ ಮೃತದೇಹಗಳನ್ನು ತಂದಾಗ ಮಾತ್ರ ಕೊರೋನ ಪರೀಕ್ಷೆ ನಡೆಸಲಾಗಿತ್ತು ಎಂದು ಅಹ್ಮದಾಬಾದ್‌ನ ಜೆಎಂಇಆರ್‌ಎಸ್ ಮೆಡಿಕಲ್ ಕಾಲೇಜು ಹಾಗೂ ಸಿವಿಲ್ ಆಸ್ಪತ್ರೆಯ ವಿಧಿವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಗುರಂಗ್ ಪಟೇಲ್ ತಿಳಿಸಿದ್ದಾರೆ.

ರಾಜ್ಯದ ವಿವಿಧ ಸ್ಮಶಾನಗಳಲ್ಲಿ ನಡೆಸಲಾದ ಶವ ಸಂಸ್ಕಾರದ ಸಂಖ್ಯೆಗಿಂತ ಗುಜರಾತ್ ಸರಕಾರ ತನ್ನ ಬುಲೆಟಿನ್‌ನಲ್ಲಿ ದಿನಂಪ್ರತಿ ಪ್ರಕಟಿಸಿದ ಸಾವಿನ ಅಂಕಿ-ಅಂಶಗಳು ಕಡಿಮೆ ಇದ್ದುದರಿಂದ ಗುಜರಾತ್‌ನಲ್ಲಿ ಕೊರೋನ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ಬಗ್ಗೆ ಸಂಶಯ ವ್ಯಕ್ತವಾಗಿದೆ ಎಂದು ಡಾ. ದರ್ಶನ್ ದೇಸಾಯಿ ‘ವೈರ್’ಗೆ ತಿಳಿಸಿದ್ದಾರೆ. ‘‘ಕೊರೋನ ಸೋಂಕಿನಿಂದ ಸಂಭವಿಸಿದ ಸಾವಿನ ಸಂಖ್ಯೆಯನ್ನು ಕಡಿಮೆ ತೋರಿಸಿರುವುದರಲ್ಲಿ ಯಾವುದೇ ಸಂಶಯ ಇಲ್ಲ. ಕೊರನ ಸೋಂಕಿಗೆ ಒಳಗಾಗಿ ಇತರ ಅಸ್ವಸ್ಥತೆಯಿಂದ ಸಾವನ್ನಪ್ಪಿದವರ ಸಂಖ್ಯೆಯನ್ನು ಲೆಕ್ಕ ಮಾಡಬಾರದು ಎಂಬ ಅಲಿಖಿತ ನೀತಿಯನ್ನು ಅನುಸರಿಸಿದಂತೆ ಕಾಣುತ್ತದೆ’’ ಎಂದು ಗುಜರಾತ್ ಚಾಪ್ಟರ್ ಆಫ್ ದಿ ಇಂಡಿಯನ್ ಮೆಡಿಕಲ್ ಅಸೋಸಿಯೇಶನ್‌ನ ಅಧ್ಯಕ್ಷ ಡಾ. ಚಂದ್ರೇಶ್ ಜರ್ದೋಶ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X