Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕನ್ನಡದಲ್ಲಿ ಮಾಹಿತಿ ನೀಡದ ಬಗ್ಗೆ ಐಎಎಸ್...

ಕನ್ನಡದಲ್ಲಿ ಮಾಹಿತಿ ನೀಡದ ಬಗ್ಗೆ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ಟ್ವೀಟ್: ಪ್ರತಿಕ್ರಿಯಿಸಿದ ‘ಇಂಡಿಗೊ ಏರ್‌ಲೈನ್ಸ್'

ವಾರ್ತಾಭಾರತಿವಾರ್ತಾಭಾರತಿ17 Dec 2020 8:36 PM IST
share
ಕನ್ನಡದಲ್ಲಿ ಮಾಹಿತಿ ನೀಡದ ಬಗ್ಗೆ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ಟ್ವೀಟ್: ಪ್ರತಿಕ್ರಿಯಿಸಿದ ‘ಇಂಡಿಗೊ ಏರ್‌ಲೈನ್ಸ್

ಬೆಂಗಳೂರು, ಡಿ. 17: ಕನ್ನಡದಲ್ಲಿ ಮಾಹಿತಿ ನೀಡದ ‘ಇಂಡಿಗೊ ಏರ್‌ಲೈನ್ಸ್' ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದ ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ಅವರಿಗೆ ಇಂಡಿಗೊ ಏರ್‌ಲೈನ್ಸ್ ಪ್ರತಿಕ್ರಿಯೆ ನೀಡಿದ್ದು, 'ನಿಮ್ಮ ಪ್ರತಿಕ್ರಿಯೆಯನ್ನು ಸ್ವೀಕರಿಸಿ ಸಂಬಂಧಪಟ್ಟ ತಂಡಕ್ಕೆ ಹಂಚಿಕೊಳ್ಳಲಾಗುತ್ತದೆ' ಎಂದು ಮಾಹಿತಿ ನೀಡಿದೆ.

ಹಿರಿಯ ಐಎಎಸ್ ಅಧಿಕಾರಿ ಎಲ್.ಕೆ.ಅತೀಕ್ ಅವರು, ‘ಕರ್ನಾಟಕದಲ್ಲಿ ಇಂಡಿಗೊ ಹಾಗೂ ಇತರ ವಿಮಾನಯಾನ ಕಂಪೆನಿಗಳಿಗೆ ಕನ್ನಡದಲ್ಲಿ ಸೇವೆ ನೀಡಲು ಇರುವ ಸಮಸ್ಯೆ ಏನು?’ ಟ್ವೀಟ್ ನಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಹಲವರು ಬೆಂಬಲ ಸೂಚಿಸಿದ್ದು, ‘ರಾಜ್ಯದಲ್ಲಿ ಸೇವೆ ನೀಡುವ ಎಲ್ಲ ವಿಮಾನಯಾನ ಕಂಪೆನಿಗಳು ಕನ್ನಡ ಭಾಷೆಯಲ್ಲಿ ಪ್ರಯಾಣಿಕರಿಗೆ ಸೇವೆಯನ್ನು ನೀಡಬೇಕು' ಎಂದು ಆಗ್ರಹಿಸಿದ್ದಾರೆ.

ಇದಕ್ಕೆ ಟ್ವಿಟ್ಟರ್ ಮೂಲಕ ಪ್ರತಿಕ್ರಿಯಿಸಿರುವ ಇಂಡಿಗೊ ಏರ್‌ಲೈನ್ಸ್, ನೀವು ನಮ್ಮೊಂದಿಗೆ ಹಾರಾಟ ನಡೆಸುವಾಗ ನಮ್ಮ ಸಿಬ್ಬಂದಿ ಸ್ಥಳೀಯ ಭಾಷೆಯಲ್ಲಿ ಮಾತನಾಡಬೇಕೆಂದು ನೀವು ಬಯಸುತ್ತೀರಿ. ಆದರೆ ಅದು ಕೆಲವೊಮ್ಮೆ ಸಂಭವಿಸಬಹುದು. ಆದರೆ, ಕಾರ್ಯಾಚರಣೆ ದೃಷ್ಟಿಯಿಂದ ಸಿಬ್ಬಂದಿ ಬೇರೆ ಬೇರೆ ರಾಜ್ಯಗಳ ನಡುವೆ ಹಾರಾಡುವ ವಿಮಾನದಲ್ಲಿ ಕರ್ತವ್ಯ ನಿರ್ವಹಿಸುವ ಕಾರಣ ಆಯಾ ರಾಜ್ಯಗಳ ಭಾಷೆಯಲ್ಲಿ ವಿವರಣೆ ನೀಡಲು ಆಗುವುದಿಲ್ಲ. ಈ ಕಾರಣಕ್ಕಾಗಿ ನಮ್ಮ ಸಿಬ್ಬಂದಿ ವಿಮಾನದಲ್ಲಿ ಎಸ್‌ಒಪಿ ಪ್ರಕಾರ ಹಿಂದಿ ಮತ್ತು ಇಂಗ್ಲಿಷ್‌ನಲ್ಲೇ ವಿವರಿಸುತ್ತಾರೆ. ಆದರೂ, ನಿಮ್ಮ ಪ್ರತಿಕ್ರಿಯೆಯನ್ನು ಸ್ವೀಕರಿಸಿ ಸಂಬಂಧಪಟ್ಟ ತಂಡಕ್ಕೆ ಹಂಚಿಕೊಳ್ಳಲಾಗುತ್ತದೆ'' ಎಂದು ಅತೀಕ್ ಅವರ ಟ್ವೀಟ್‍ಗೆ ಸ್ಪಂದಿಸಿದೆ.

ಈ ಮಧ್ಯೆ ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಹಿರಿಯ ಅಧಿಕಾರಿ ಎಲ್.ಕೆ. ಅತೀಕ್, ‘ವಿದೇಶಿ ವಿಮಾನಯಾನ ಸಂಸ್ಥೆಗಳಾದ ಬ್ರಿಟಿಷ್ ಏರ್‍ವೇಸ್, ಎಮಿರೇಟ್ಸ್, ಸಿಂಗಾಪುರ್ ಏರ್‌ಲೈನ್ಸ್ ಕನ್ನಡದಲ್ಲಿ ಸೇವೆ ನೀಡುತ್ತವೆ. ಇಂಡಿಗೊ ಸಿಬ್ಬಂದಿ ಕ್ಯಾಬಿನ್ ಸಿಬ್ಬಂದಿಯು ಇಂಗ್ಲಿಷ್, ಹಿಂದಿ ಬಳಸುವುದಾದರೆ, ಕನ್ನಡದಲ್ಲಿ ಸೇವೆ ನೀಡದಿರುವುದು ಅಚ್ಚರಿ ಮೂಡಿಸುತ್ತದೆ’ ಎಂದು ಬೇಸರ ವ್ಯಕ್ತಪಡಿಸಿದರು.

ನಮ್ಮ ಭಾಷೆಯಲ್ಲಿ ಮಾತನಾಡಿ: ದುಬೈನಿಂದ ಬೆಂಗಳೂರಿಗೆ ವಿಮಾನದಲ್ಲಿ ಆಗಮಿಸಿದರೆ ಕನ್ನಡ ಭಾಷೆಯಲ್ಲಿ ಸೇವೆ ನೀಡುವುದಲ್ಲದೆ, ಮೆನುಕಾರ್ಡ್ ಅನ್ನು ಕನ್ನಡ ಭಾಷೆಯಲ್ಲೆ ನೀಡುತ್ತಾರೆ. ಆದರೆ, ಬೆಂಗಳೂರಿನಿಂದ ಬೆಳಗಾವಿಗೆ ನಿತ್ಯ ಸಂಚರಿಸುವ ಇಂಡಿಗೊ ವಿಮಾನದಲ್ಲಿ ಕನ್ನಡ ಭಾಷೆಯಲ್ಲಿ ಸೇವೆ ಒದಗಿಸುತ್ತಿಲ್ಲ ಏಕೆ? ಎಂದು ಅತೀಕ್ ಅವರು ಪ್ರಶ್ನಿಸಿದರು.

ವಿಮಾನಯಾನ ಕಂಪೆನಿ ನನ್ನ ಭಾಷೆಯಲ್ಲಿ ಸೇವೆ ಒದಗಿಸಬೇಕು. ಜೊತೆಗೆ ಕನ್ನಡ ಭಾಷೆ ಬಿಟ್ಟು ಬೇರೆ ಭಾಷೆ ತಿಳಿದವರು, ಇಂಗ್ಲಿಷ್ ಮತ್ತು ಹಿಂದಿ ಗೊತ್ತಿಲ್ಲದ ಪ್ರಯಾಣಿಕರು ಏನು ಮಾಡಬೇಕು ಎಂದು ಕೇಳಿದ ಎಲ್.ಕೆ.ಅತೀಕ್ ಅವರು, ಕನ್ನಡ ಭಾಷೆ ಬಲ್ಲ ವ್ಯಕ್ತಿಯೊಬ್ಬರನ್ನು ಇಟ್ಟುಕೊಂಡು ಅನೌನ್ಸ್ ಮಾಡಿಸಲು ವಿಮಾನಯಾನ ಕಂಪೆನಿಗೆ ಯಾವುದೇ ಹೊರೆಯಾಗುತ್ತಿಲ್ಲ. ನಮ್ಮ ಭಾಷೆಯಲ್ಲಿ ಸೇವೆ ನೀಡಬೇಕು ಎಂದು ಆಗ್ರಹಿಸಿದರು.

ಕರ್ನಾಟಕದಲ್ಲಿ @IndiGo6E ಹಾಗು ಇತರೆ ವಿಮಾನಯಾನ ಕಂಪನಿಗಳಿಗೆ ಕನ್ನಡದಲ್ಲಿ ಸೇವೆ ಸಲ್ಲಿಸಲು ಇರುವ ಸಮಸ್ಯವೇನು? https://t.co/p86yzHZi0M

— ಎಲ್ ಕೆ ಅತೀಕ್ L K Atheeq (@lkatheeq) December 16, 2020

On @IndiGo6E flight from Bengaluru to Belagavi today.

Announcement: cabin crew can speak English, Hindi & Malayalam.

Foreign Airlines like British Airways, Emirates, Singapore Airlines serve in Kannada. I wonder how difficult it is for @IndiGo6E to hire Kannada speaking crew.

— ಎಲ್ ಕೆ ಅತೀಕ್ L K Atheeq (@lkatheeq) December 16, 2020
share
ವಾರ್ತಾಭಾರತಿ
ವಾರ್ತಾಭಾರತಿ
Next Story
X