Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅತಂತ್ರ ಫಲಿತಾಂಶ ಬಂದಿರುವ ಬ್ಲಾಕ್ ಪಂ,...

ಅತಂತ್ರ ಫಲಿತಾಂಶ ಬಂದಿರುವ ಬ್ಲಾಕ್ ಪಂ, ಗ್ರಾಪಂನಲ್ಲಿ ಯಾರಾಗ್ತಾರೆ ಕಿಂಗ್ ಮೇಕರ್?

ಕಾಸರಗೋಡು ಸ್ಥಳೀಯಾಡಳಿತ ಸಂಸ್ಥೆ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ18 Dec 2020 2:25 PM IST
share
ಅತಂತ್ರ ಫಲಿತಾಂಶ ಬಂದಿರುವ ಬ್ಲಾಕ್ ಪಂ, ಗ್ರಾಪಂನಲ್ಲಿ ಯಾರಾಗ್ತಾರೆ ಕಿಂಗ್ ಮೇಕರ್?

ಕಾಸರಗೋಡು, ಡಿ.18: ಇತ್ತೀಚೆಗೆ ನಡೆದ ಸ್ಥಳೀಯಾಡಳಿತ ಸಂಸ್ಥೆ ಚುನಾವಣೆಯಲ್ಲಿ ಮಂಜೇಶ್ವರ ಬ್ಲಾಕ್ ಪಂಚಾಯತ್ ಸೇರಿದಂತೆ ಕಾಸರಗೋಡು ಜಿಲ್ಲೆಯ ಹಲವು ಗ್ರಾಮ ಪಂಚಾಯತ್ ಗಳಲ್ಲಿ ಅತಂತ್ರ ಫಲಿತಾಂಶ ದಾಖಲಾಗಿರುವುದರಿಂದ ಅಧಿಕಾರದ ಗದ್ದುಗೆ ಯಾರಿಗೆ ಸಿಗಲಿದೆ ಎಂಬ ಕುತೂಹಲ ಜನರಲ್ಲಿದೆ.

ಬೆರಳೆಣಿಕೆಯ ಸ್ಥಾನಗಳನ್ನು ಗೆದ್ದಿರುವ ಪಕ್ಷಗಳ ಬೆಂಬಲಿಗ ಅಭ್ಯರ್ಥಿಗಳು ಕಿಂಗ್ ಮೇಕರ್ ಗಳು ಆಗುವ ಸಂಭವ ಕಂಡುಬರುತ್ತಿದೆ. ಬಹುಮತಕ್ಕೆ ಒಂದೆರಡು ಸ್ಥಾನಗಳ ಕೊರತೆ ಎದುರಿಸುತ್ತಿರುವ ಪಕ್ಷಗಳು ಅಧಿಕಾರಕ್ಕೇರಲು ಸೈದ್ಧಾಂತಿಕವಾಗಿ ವಿಭಿನ್ನ ನಿಲುವು ಹೊಂದಿರುವ ಪಕ್ಷಗಳ ಬೆಂಬಲ ಯಾಚಿಸಬೇಕಾದ ಅನಿವಾರ್ಯಕ್ಕೆ ಸಿಲುಕಿವೆ.

ಮಂಜೇಶ್ವರ ಬ್ಲಾಕ್ ಪಂಚಾಯತ್:

ಮಂಜೇಶ್ವರ ಬ್ಲಾಕ್ ಪಂಚಾಯತ್ ನಲ್ಲಿ ಅತಂತ್ರ ಫಲಿತಾಂಶ ಬಂದಿರುವುದರಿಂದ ಯುಡಿಎಫ್ ಗೆ ಅಧಿಕಾರಕ್ಕೇರಲು ಸಿಪಿಎಂ ಅಥವಾ ಎಸ್ ಡಿಪಿಐ ಬೆಂಬಲ ಅನಿವಾರ್ಯವಾಗಿದೆ.

ಇಲ್ಲಿ ಯುಡಿಎಫ್ ಮತ್ತು ಬಿಜೆಪಿ ತಲಾ ಆರು ಸ್ಥಾನಗಳನ್ನು ಜಯಿಸಿವೆ. 15 ಸದಸ್ಯ ಬಲದಲ್ಲಿ ಬಹುಮತಕ್ಕೆ ಎಂಟು ಸ್ಥಾನಗಳು ಅಗತ್ಯವಾಗಿದೆ. ಎಲ್ ಡಿಎಫ್ 2 ಮತ್ತು ಎಸ್ ಡಿಪಿಐ ಒಂದು ಸ್ಥಾನವನ್ನು ಪಡೆದುಕೊಂಡಿದೆ. ಆದರೆ ಈ ಎರಡೂ ಪಕ್ಷಗಳು ಬಿಜೆಪಿಗೆ ಬೆಂಬಲ ನೀಡುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಹಾಗಾದಲ್ಲಿ ಯುಡಿಎಫ್ ಗೆ ಅಧಿಕಾರ ಉಳಿಸಿಕೊಳ್ಳಲು ಈ ಎರಡೂ ಪಕ್ಷಗಳ ಬೆಂಬಲ ಅಗತ್ಯವಾಗಿದೆ. ಒಂದುವೇಳೆ ಈ ಎರಡೂ ಪಕ್ಷಗಳು ಯುಡಿಎಫ್ ಅಥವಾ ಬಿಜೆಪಿಗೆ ಬೆಂಬಲ ನೀಡದಿದ್ದಲ್ಲಿ ಅದೃಷ್ಟ ಚೀಟಿ ಎತ್ತುವ ಮೂಲಕ ನೂತನ ಆಡಳಿತವನ್ನು ಆಯ್ಕೆ ಮಾಡಬೇಕಾದ ಅನಿವಾರ್ಯ ಸ್ಥಿತಿ ಉಂಟಾಗಲಿದೆ.

ಪೈವಳಿಕೆ ಹಾಗೂ ಕುಂಬಳೆ ಗ್ರಾಪಂ:

ಪೈವಳಿಕೆ ಗ್ರಾಪಂನಲ್ಲಿ ಎಲ್ ಡಿಎಫ್ ಮತ್ತು ಬಿಜೆಪಿಗೆ ತಲಾ 8 ಸ್ಥಾನಗಳು ಲಭಿಸಿವೆ. ಇಲ್ಲಿ ಅಧಿಕಾರಕ್ಕೆ ಏರಲು 10 ಸ್ಥಾನಗಳ ಅಗತ್ಯ ಇದೆ. ಮೂರು ಸ್ಥಾನಗಳನ್ನು ಜಯಿಸಿರುವ ಯುಡಿಎಫ್ ಕಿಂಗ್ ಮೇಕರ್ ಆಗುವ ಸಾಧ್ಯತೆ ಇದೆ. ಆದರೆ ಯುಡಿಎಫ್ ಬೆಂಬಲ ನೀಡದಿದ್ದಲ್ಲಿ ಅದೃಷ್ಟ ಚೀಟಿ ಎತ್ತುವ ಮೂಲಕ ನೂತನ  ಆಡಳಿತ ಸಮಿತಿಯನ್ನು ಆಯ್ಕೆ ಮಾಡಲಾಗುತ್ತದೆ.

ಕುಂಬಳೆ ಗ್ರಾಮ ಪಂಚಾಯತ್ ನಲ್ಲಿ ಯು ಡಿ ಎಫ್ ಮತ್ತು ಬಿಜೆಪಿ ತಲಾ 9 ಸ್ಥಾನಗಳಲ್ಲಿ ಗೆಲುವು ದಾಖಲಿಸಿದೆ. ಇಲ್ಲಿ ಎರಡೂ ಪಕ್ಷಗಳಿಗೂ ಪಕ್ಷೇತರರ ಬೆಂಬಲ ಅಗತ್ಯವಾಗಿದೆ. ಪಕ್ಷೇತರರು ನಾಲ್ಕು ಸ್ಥಾನಗಳನ್ನು ಪಡೆದಿದ್ದಾರೆ. ಆದ್ದರಿಂದ ಯಾರು ಅಧಿಕಾರದ ಗದ್ದುಗೆ ಏರುತ್ತಾರೆ ಎಂಬ ಕುತೂಹಲ ಮನೆ ಮಾಡಿದೆ.

ಬದಿಯಡ್ಕ ಗ್ರಾಮ ಪಂಚಾಯತ್ ನಲ್ಲಿ ಯುಡಿಎಫ್ ಮತ್ತು ಬಿಜೆಪಿ ತಲಾ 8 ಸ್ಥಾನಗಳನ್ನು ಪಡೆದಿದ್ದು, ಅಧಿಕಾರಕ್ಕೆ ಬರಲು ಪಕ್ಷೇತರನ ಬೆಂಬಲ ಅನಿವಾರ್ಯವಾಗಿದೆ. ಇಲ್ಲಿ ಒಂದು ಸ್ಥಾನದಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಮೀಂಜ ಗ್ರಾಮ ಪಂಚಾಯತ್ ನಲ್ಲಿ ಯಾರಿಗೂ ಬಹುಮತ  ಲಭಿಸಿಲ್ಲ. ಬಿಜೆಪಿ 6, ಎಲ್ ಡಿಎಫ್ 5, ಯುಡಿಎಫ್ 3 ಹಾಗೂ ಪಕ್ಷೇತರ 1 ಸ್ಥಾನ ಪಡೆದಿದ್ದು, ಬಿಜೆಪಿಗೆ ಪಕ್ಷೇತರ ಅಥವಾ ಎಲ್ ಡಿಎಫ್ ಗೆ ಯುಡಿಎಫ್ ಬೆಂಬಲ ನೀಡಲಿದ್ದಲ್ಲಿ ಮಾತ್ರ ಅಧಿಕಾರ ನಡೆಸಬಹುದಾಗಿದೆ.

ವರ್ಕಾಡಿಯಲ್ಲಿ ಯುಡಿಎಫ್ 4, ಎಲ್ ಡಿಎಫ್ ಮತ್ತು ಬಿಜೆಪಿ ತಲಾ 4 ಸ್ಥಾನಗಳನ್ನು ಹೊಂದಿದ್ದು, ಇಬ್ಬರು ಪಕ್ಷೇತರರ ಬೆಂಬಲ ಬಿಜೆಪಿ ಅಥವಾ ಎಲ್ ಡಿ ಎಫ್ ಗೆ ಅಗತ್ಯ ಇದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X