Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಚಿವ ಸುರೇಶ್‍ ಕುಮಾರ್ ರಾಜೀನಾಮೆಗೆ...

ಸಚಿವ ಸುರೇಶ್‍ ಕುಮಾರ್ ರಾಜೀನಾಮೆಗೆ ಶಿಕ್ಷಣ ತಜ್ಞರು, ಪ್ರಗತಿಪರ ಸಂಘಟನೆಗಳ ಮುಖಂಡರ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ18 Dec 2020 7:23 PM IST
share
ಸಚಿವ ಸುರೇಶ್‍ ಕುಮಾರ್ ರಾಜೀನಾಮೆಗೆ ಶಿಕ್ಷಣ ತಜ್ಞರು, ಪ್ರಗತಿಪರ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರು, ಡಿ.18: ರಾಜ್ಯ ಸರಕಾರ ಕೋವಿಡ್‍ನ್ನು ನೆಪವಾಗಿಟ್ಟು ಶಾಲೆಗಳನ್ನು ತೆರೆಯದೆ ಬಡ, ಮಧ್ಯಮ ವರ್ಗದ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುತ್ತಿದ್ದು, ಇದಕ್ಕೆ ಪ್ರಮುಖ ಕಾರಣವಾಗಿರುವ ಶಿಕ್ಷಣ ಸಚಿವ ಸುರೇಶ್‍ ಕುಮಾರ್ ಕೂಡಲೇ ರಾಜೀನಾಮೆ ನೀಡಬೇಕೆಂದು ರಾಜ್ಯಾದ್ಯಂತ ಶಿಕ್ಷಣ ತಜ್ಞರು, ವೈದ್ಯರು, ಪ್ರಗತಿಪರ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಶಿಕ್ಷಣ ತಜ್ಞ ನಿರಂಜನಾರಾಧ್ಯ, ಕೊರೋನ ಹರಡುವಿಕೆಯು ಇಳಿಮುಖವಾದ ಪರಿಣಾಮ ಬೇರೆಲ್ಲಾ ಚಟುವಟಿಕೆಗಳಿಗೆ ಮುಕ್ತ ಅವಕಾಶ ನೀಡಲಾಗಿದೆ. ಮಕ್ಕಳಿಗೆ ಕೊರೋನ ಸೋಂಕಿನಿಂದ ಯಾವುದೇ ಅಪಾಯವಿಲ್ಲವೆಂದು ವೈದ್ಯ ತಜ್ಞರು ವೈಜ್ಞಾನಿಕವಾಗಿ ಮಾಹಿತಿ ನೀಡಿದ್ದಾರೆ. ಆದರೂ ಶಾಲೆಗಳನ್ನು ಆರಂಭಿಸುವಲ್ಲಿ ಸರಕಾರ ಸಂಪೂರ್ಣ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.

ಶಾಲೆಗಳನ್ನು ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಕೊರೋನ ಕಾರ್ಯಪಡೆಯ ತಾಂತ್ರಿಕ ಸಲಹಾ ಸಮಿತಿಯು ರಾಜ್ಯ ಸರಕಾರಕ್ಕೆ ನೀಡಿರುವ ವರದಿ ಸಂಪೂರ್ಣ ಅವೈಜ್ಞಾನಿಕವಾಗಿದೆ. ಆರನೇ ತರಗತಿಗಿಂತ ಕೆಳ ಹಂತದ ತರಗತಿಗಳನ್ನು ತೆರೆಯಲೇಬಾರದೆಂದು ಸಲಹೆ ನೀಡಿದ್ದು, ಇದು ಬಡ ಮಕ್ಕಳನ್ನು ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವ ಅಪಾಯಕಾರಿ ನಿಲುವಾಗಿದೆ ಎಂದು ಆವರು ಆತಂಕ ವ್ಯಕ್ತಪಡಿಸಿದ್ದಾರೆ.

ರಾಜ್ಯವು ಸೇರಿದಂತೆ ವಿಶ್ವದಾದ್ಯಂತ ಲಭ್ಯವಿರುವ ವರದಿಗಳನುಸಾರ ಕೊರೋನ ಸೋಂಕು 10 ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಯಾವ ಸಮಸ್ಯೆಯನ್ನೂ, ರೋಗಲಕ್ಷಣಗಳನ್ನೂ ಉಂಟು ಮಾಡುವುದಿಲ್ಲ. ಹಾಗೂ 10ರಿಂದ 20ವರ್ಷದ ಮಕ್ಕಳಲ್ಲೂ ಅತಿ ಸೌಮ್ಯ ಸೋಂಕಾಗಿ, ಯಾವುದೇ ಸಮಸ್ಯೆಯನ್ನುಂಟು ಮಾಡದೆ ವಾಸಿಯಾಗುತ್ತದೆ. ಇದನ್ನೇ ಪರಿಗಣಿಸಿ ಇಂದು ವಿಶ್ವದಾದ್ಯಂತ ಪ್ರಾಥಮಿಕ ಶಾಲೆಗಳನ್ನೇ ಆದ್ಯತೆಯ ಮೇರೆಗೆ ಮೊದಲಾಗಿ ತೆರೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಯುರೋಪಿಯನ್ ಜರ್ನಲ್ ಆಫ್ ಎಪಿಡೆಮಿಯೋಲಜಿಯಲ್ಲಿ ಪ್ರಕಟವಾಗಿರುವ ಅಧ್ಯಯನದಲ್ಲೂ ಮಕ್ಕಳಲ್ಲಿ ಕೊರೋನ ಸೋಂಕಿನಿಂದ ಯಾವುದೇ ಮಾರಣಾಂತಿಕ ಸಮಸ್ಯೆಗಳಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಆದ್ದರಿಂದ ಬಾಲವಾಡಿಯಿಂದ 12ರವರೆಗಿನ ಎಲ್ಲಾ ತರಗತಿಗಳನ್ನು ತೆರೆಯುವುದರಿಂದ ಯಾವುದೇ ಸಮಸ್ಯೆಯಾಗದು. ಈ ಕೂಡಲೇ ಶಾಲೆಗಳನ್ನು ತೆರೆಯುವುದರಿಂದ ಮುಂದಿನ ಜೂನ್‍ವರೆಗೆ ಪ್ರಸಕ್ತ ಶೈಕ್ಷಣಿಕ ವರ್ಷದ ಪಾಠಗಳನ್ನು ಕಲಿಸುವುದಕ್ಕೂ ಸಾಧ್ಯವಾಗಲಿದೆ ಎಂದು ಶಿಕ್ಷಣ ತಜ್ಞರು, ಶಿಕ್ಷಣ ಸಂಘಟನೆಗಳ ಮುಖಂಡರು ಅಭಿಪ್ರಾಯಿಸಿದ್ದಾರೆ.

ಮಕ್ಕಳ ನಡೆ-ಶಾಲೆಯ ಕಡೆ ಅಭಿಯಾನದ ಸಮಿತಿಯ ಪರವಾಗಿ ದಸಂಸ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಎಐಎಸ್‍ಎಫ್ ರಾಜ್ಯಾಧ್ಯಕ್ಷೆ ಜ್ಯೋತಿ, ಎಸ್‍ಎಫ್‍ಐ ವಾಸುದೇವ ರೆಡ್ಡಿ, ಕೆವಿಎಸ್ ರಾಜ್ಯ ಸಂಚಾಲಕ ಸರೋವರ್ ಬೆಂಕಿಕೆರೆ, ಬಿವಿಎಸ್ ರಾಜ್ಯ ಸಂಚಾಲಕ ಡಾ.ಶ್ರೀನಿವಾಸ್, ಎಐವೈಎಫ್ ಅಧ್ಯಕ್ಷ ಪುಷ್ಪರಾಜ್ ಬೋಳೂರು, ತೋಳಿ ಭರಮಣ್ಣ, ತಿಪ್ಪೇಸ್ವಾಮಿ ಕೆಟಿ ಹೇಳಿಕೆ ನೀಡಿದ್ದಾರೆ.

ಅಭಿಯಾನದ ಪರವಾಗಿ ವೈದ್ಯಕೀಯ ತಜ್ಞ ಡಾ.ಶ್ರೀನಿವಾಸ್ ಕಕ್ಕಿಲ್ಲಾಯ, ಶಿಶು ತಜ್ಞ ಡಾ.ಯೋಗಾನಂದ ರೆಡ್ಡಿ, ಹೊಸತು ಮಾಸಪತ್ರಿಕೆಯ ಸಂಪಾದಕ ಡಾ.ಸಿದ್ದನಗೌಡ ಪಾಟೀಲ್, ಹಿರಿಯ ಕವಿ ಡಾ.ವಡ್ಡಗೆರೆ ನಾಗರಾಜಯ್ಯ, ಶಿಕ್ಷಣ ತಜ್ಞ ಶ್ರೀಪಾದ ಭಟ್, ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಭಾಸ್ಕರ್ ಪ್ರಸಾದ್, ವಿಚಾರವಾದಿ ಸಂಘಗಳ ಒಕ್ಕೂಟದ ಅಧ್ಯಕ್ಷ ಪ್ರೊ.ನರೇಂದ್ರ ನಾಯಕ್, ಮನೋರೋಗ ತಜ್ಞ ಡಾ.ಪಿ.ವಿ.ಭಂಡಾರಿ, ನರಶಾಸ್ತ್ರ ಚಿಕಿತ್ಸಾ ವೈದ್ಯ ಡಾ.ಭಾನುಪ್ರಕಾಶ್ ಮತ್ತಿತರ ತಜ್ಞರು ಶಾಲೆಗಳನ್ನು ತೆರೆಯುವಂತೆ ಸರಕಾರವನ್ನು ಒತ್ತಾಯಿಸಿದ್ದಾರೆ.

ಶಾಲೆಗಳನ್ನು ತೆರೆಯದೇ ಇರುವುದು ಮಕ್ಕಳ ಶಿಕ್ಷಣದ ಹಕ್ಕು, ಆಹಾರದ ಹಕ್ಕು, ಮಾನವಾಧಿಕಾರ ಮತ್ತಿತರ ಎಲ್ಲಾ ಸಾಂವಿಧಾನಿಕ ಹಕ್ಕುಗಳ ಉಲ್ಲಂಘನೆಯಾಗುತ್ತದೆ. ಮಾತ್ರವಲ್ಲ 3ರಿಂದ 10 ವಯಸ್ಸಿನ ಮಕ್ಕಳ, ದೈಹಿಕ, ಮಾನಸಿಕ, ಶೈಕ್ಷಣಿಕ ಮತ್ತು ಮಿದುಳಿನ ಬೆಳವಣಿಗೆಗಳ ಮೇಲೆ ಶಾಶ್ವತವಾದ ಹಾನಿಯನ್ನುಂಟು ಮಾಡಲಿವೆ.

-ನಿರಂಜನಾರಾಧ್ಯ, ಶಿಕ್ಷಣ ತಜ್ಞರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X