Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಬನ್ನಂಜೆ ಗೋವಿಂದಾಚಾರ್ಯರಿಗೆ...

ಉಡುಪಿ: ಬನ್ನಂಜೆ ಗೋವಿಂದಾಚಾರ್ಯರಿಗೆ ನುಡಿನಮನ

ವಾರ್ತಾಭಾರತಿವಾರ್ತಾಭಾರತಿ18 Dec 2020 10:42 PM IST
share
ಉಡುಪಿ: ಬನ್ನಂಜೆ ಗೋವಿಂದಾಚಾರ್ಯರಿಗೆ ನುಡಿನಮನ

ಉಡುಪಿ, ಡಿ.18:ಬನ್ನಂಜೆ ಗೋವಿಂದಾಚಾರ್ಯರು ಯಾವುದೇ, ಯಾರದೇ ಪ್ರಭಾವಕ್ಕೆ ಒಳಗಾಗದೆ ತತ್ವ ಮತ್ತು ಸತ್ಯವನ್ನು ತಿಳಿಯಲು ಒಳ ಗಣ್ಣು ತೆರೆದು ಸಾಗಿದ್ದರಿಂದ ಅವರ ವ್ಯಕ್ತಿತ್ವ ಬೆಳೆಯಲು ಸಾಧ್ಯವಾಗಿದೆ. ಅವರು ಪಂಡಿತ, ಕವಿ ಮಾತ್ರವಲ್ಲದೆ ಸತ್ಯಾನ್ವೇಷಕ ಸಹ ಆಗಿದ್ದರು ಎಂದು ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಶುಕ್ರವಾರ ಸಂಜೆ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಇತ್ತೀಚೆಗೆ ನಿಧನರಾದ ವಿದ್ಯಾವಾಚಸ್ಪತಿ ಬನ್ನಂಜೆ ಗೋವಿಂದಾ ಚಾರ್ಯರಿಗೆ ಹಮ್ಮಿಕೊಳ್ಳಲಾದ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯಲ್ಲಿ ಅವರು ಮಾತನಾಡು ತಿದ್ದರು.

ಮಾತು, ಕೃತಿ ಮತ್ತು ಆಚರಣೆಯಲ್ಲಿ ಒಂದೇ ತೆರನಾಗಿದ್ದ ಬನ್ನಂಜೆ ಯಾರನ್ನೂ ಮೆಚ್ಚಿಸಲು ಸತ್ಯವನ್ನು ತಿರುಚಿ ಹೇಳುತ್ತಿರಲಿಲ್ಲ. ಸತ್ಯವನ್ನು ನಿಷ್ಠುರವಾಗಿ ಹೇಳುವ ಧೈರ್ಯ ಅವರಿಗೆ ಒಲಿದಿತ್ತು. ಈ ಕಾರಣದಿಂದ ತ್ರಿಕರಣ ಪೂರ್ವಕ ತತ್ವಬದ್ಧ ಜೀವನ ಸಾಗಿಸಲು ಸಾಧ್ಯವಾಗಿದೆ ಎಂದರು.

ಬನ್ನಂಜೆ ವಿಚಾರಧಾರೆ ಪಾಶ್ಚಿಮಾತ್ಯರ ಮೆಚ್ಚುಗೆಗೆ ಪಾತ್ರವಾಗಿದೆ. ವಿಶ್ವಾದ್ಯಂತ ಮಧ್ವ ತತ್ವಶಾಸ್ತ್ರದ ಜಾಗೃತಿ ಮೂಡಿಸಿದ್ದಾರೆ. ಅವರಿಲ್ಲ ದಿದ್ದರೂ ಪ್ರವಚನ, ಕೃತಿಗಳ ಮೂಲಕ ಜೀವಂತವಾಗಿದ್ದಾರೆ. ಇದನ್ನು ಮುಂದಿನ ಪೀಳಿಗೆಗೆ ಉಳಿಸುವ ಕಾರ್ಯ ನಡೆಯಬೇಕು. ಸರಕಾರ ಬನ್ನಂಜೆ ಪ್ರತಿಷ್ಠಾನ ಸ್ಥಾಪಿಬೇಕು ಎಂದವರು ಒತ್ತಾಯಿಸಿದರು.

ಸಾಹಿತಿ ಲಕ್ಷ್ಮೀಶ ತೋಳ್ಪಾಡಿ ಮಾತನಾಡಿ, ಸಂಶೋಧನೆ, ಪಾಂಡಿತ್ಯ, ಸೃಜನಶೀಲತೆ ಮೂರರ ಅಪೂರ್ವ ಸಂಗಮ ಬನ್ನಂಜೆ. ಇವೆಲ್ಲವೂ ಅವರೊಳಗೆ ಪರಸ್ಪರ ಸ್ಪರ್ಧಿಸುತ್ತಿವೆಯೋ ಎಂಬಂತೆ ನಮ್ಮನ್ನು ಬೆರಗುಗೊಳಿಸಿದ್ದರು. ಶಾಸ್ತ್ರಗಳೇ ಅವರನ್ನು ಅನುಸರಿಸುತ್ತಿವೆಯೋ ಎಂಬಂತೆ ಬದುಕಿದವರು. ಸಂಸ್ಕೃತ ಶ್ಲೋಕಗಳಿಗೆ ಸಮಾನಾರ್ಥವಾಗಿ ಅಚ್ಚಕನ್ನಡದ ಪದಗಳನ್ನು ಬಳಸುತ್ತಿದ್ದ ಅವರ ಪ್ರತಿಭೆ ವಿಶಿಷ್ಟವಾಗಿದೆ. ಅವರೊಬ್ಬ ಉತ್ತಮ ಚಿತ್ರಕಾರರಾಗಿದ್ದರೂ ಪ್ರವಚನ, ಸಾಹಿತ್ಯ, ಗ್ರಂಥ ರಚನೆ ಮಧ್ಯೆ ಈ ಕಲೆ ಮರೆಯಾಗಿ ಹೋಯಿತು ಎಂದರು.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಸಮಕಾಲೀನ ಸಮಾಜದಲ್ಲಿ ಬನ್ನಂಜೆ ಅವರಿಗೆ ಸಮಾನರಿರಲಿಲ್ಲ. ಅವರ ವ್ಯಕಿತ್ವ ಮತ್ತು ಕೃತಿ ಗಳನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ದಾಖಲೀಕರಣ ಮಾಡಲು ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದರು.

ಶಾಸಕ ರಘುಪತಿ ಭಟ್, ವಿದ್ವಾನ್ ರಾಮನಾಥ ಆಚಾರ್ಯ, ಹೆರ್ಗ ರವೀಂದ್ರ ಭಟ್ ನುಡಿನಮನ ಸಲ್ಲಿಸಿದರು. ವಾಸುದೇವ ಭಟ್ ಪೆರಂಪಳ್ಳಿ ಪ್ರಸ್ತಾವನೆ ಮಾಡಿದರು. ಮುರಲಿ ಕಡೆಕಾರ್ ಕಾರ್ಯಕ್ರಮ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X