Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಚಲನಚಿತ್ರ ನಿರ್ದೇಶಕ ಬೂದಾಳ್...

ಚಲನಚಿತ್ರ ನಿರ್ದೇಶಕ ಬೂದಾಳ್ ಕೃಷ್ಣಮೂರ್ತಿ ನಿಧನ

ವಾರ್ತಾಭಾರತಿವಾರ್ತಾಭಾರತಿ19 Dec 2020 12:43 PM IST
share
ಚಲನಚಿತ್ರ ನಿರ್ದೇಶಕ ಬೂದಾಳ್ ಕೃಷ್ಣಮೂರ್ತಿ ನಿಧನ

ಬೆಂಗಳೂರು, ಡಿ.19: ಕನ್ನಡ ಚಿತ್ರೋದ್ಯಮದ ಹಿರಿಯ ನಿರ್ದೇಶಕ ಬೂದಾಳ್ ಕೃಷ್ಣಮೂರ್ತಿ(71) ಅವರು ಶನಿವಾರ ನಗರದ ಕೆಂಗೇರಿಯ ತಮ್ಮ ಸ್ವಗೃಹದಲ್ಲಿ ಬೆಳಗ್ಗೆ 6.45ಕ್ಕೆ ನಿಧನರಾಗಿದ್ದಾರೆ. ಇವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಹುಳಿಯಾರು ಸಮೀಪದ ಬೂದಾಳುವಿನಲ್ಲಿ 1949ರಲ್ಲಿ ಜನಿಸಿದ ಕೃಷ್ಣಮೂರ್ತಿ ಪದವಿ ವ್ಯಾಸಂಗದ ನಂತರ ಬೆಂಗಳೂರಿಗೆ ಆಗಮಿಸಿ ಸಿದ್ದಲಿಂಗಯ್ಯ ನಿರ್ದೇಶನದ ಬೂತಯ್ಯನ ಮಗ ಅಯ್ಯು, ಹೇಮಾವತಿ ಸೇರಿ ಹಲವು ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದರು.

ಎರಡು ದಂಡೆಯ ಮೇಲೆ, ಒಲವಿನ ಕಾಣಿಕೆ, ಸೀತಾಂಜನೇಯ, ಶುಭಲಗ್ನ, ಲಂಚಸಾಮ್ರಾಜ್ಯ ಮೊದಲಾದ ಚಿತ್ರಗಳನ್ನು ನಿರ್ದೇಶಿಸಿದ್ದರು. ಇದೊಳ್ಳೆ ಮಹಾಭಾರತ ಎಂಬ ಅವರ ನಿರ್ದೇಶನದ ಕಡೆಯ ಚಿತ್ರ ಇನ್ನೂ ಬಿಡುಗಡೆಯಾಗಿಲ್ಲ.

ಕೃಷ್ಣಮೂರ್ತಿ ನಿರ್ದೇಶನ ಮಾತ್ರವಲ್ಲದೆ ಅಭಿನಯದಲ್ಲಿಯೂ ನುರಿತಿದ್ದರು. 50ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಇವರು ಪ್ರೊಫೆಸರ್, ಶ್ರೀಗಂಧ, ಅರಿಶಿನ ಕುಂಕುಮ, ಬಲ್ ನನ್ಮಗ, ಪ್ರಜಾಶಕ್ತಿ, ಆರ್ಯಭಟ ಇನ್ನೂ ಹಲವಾರು ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು.

ಇನ್ನು ಕೃಷ್ಣಮೂರ್ತಿ ತಮ್ಮ ನಿರ್ದೇಶನದ ಕೆಲ ಚಿತ್ರಗಳಿಗೆ ಹಾಡನ್ನೂ ಬರೆದಿದ್ದರು. ಕರ್ನಾಟಕ ಚಲನಚಿತ್ರ ನಿರ್ದೇಶಕರ ಸಂಘದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಕೃಷ್ಣಮೂರ್ತಿ ಅವರು ಕೆಲವು ಕಾಲದಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದರು.

ಮೃತರ ಅಗಲಿಕೆ ಚಿತ್ರೋದ್ಯಮಕ್ಕೆ ಹಾಗೂ ನಿರ್ದೇಶಕರ ಸಂಘಕ್ಕೆ ಭಾರಿ ನೋವನ್ನು ತಂದಿದ್ದು, ನಿರ್ದೇಶಕರ ಸಂಘದ ಅಧ್ಯಕ್ಷ ಟೇಶಿ ವೆಂಕಟೇಶ್ ಹಾಗೂ ಪದಾಧಿಕಾರಿಗಳು ಕಂಬನಿ ಮಿಡಿದಿದ್ದಾರೆ. ಮೃತರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X