Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆರ್ಥಿಕ ಸಂಕಷ್ಟ: ವೈದ್ಯೆಯಾಗಬೇಕೆಂಬ ಕನಸು...

ಆರ್ಥಿಕ ಸಂಕಷ್ಟ: ವೈದ್ಯೆಯಾಗಬೇಕೆಂಬ ಕನಸು ಕಂಡಿದ್ದ ಶಗುಪ್ತಾಗೆ ನೆರವಾದ ಗ್ರಾಮಸ್ಥರು

ಸೌಹಾರ್ದದ ಸಂದೇಶ ಸಾರಿದ ತಾಳಿಕೋಟೆ ಜನತೆ

ವಾರ್ತಾಭಾರತಿವಾರ್ತಾಭಾರತಿ19 Dec 2020 7:07 PM IST
share
ಆರ್ಥಿಕ ಸಂಕಷ್ಟ: ವೈದ್ಯೆಯಾಗಬೇಕೆಂಬ ಕನಸು ಕಂಡಿದ್ದ ಶಗುಪ್ತಾಗೆ ನೆರವಾದ ಗ್ರಾಮಸ್ಥರು

ವಿಜಯಪುರ, ಡಿ.19: ಎಂಬಿಬಿಎಸ್ ಓದಿ ವೈದ್ಯೆಯಾಗಬೇಕೆಂಬ ಕನಸು ಕಂಡಿದ್ದ ಶಗುಪ್ತಾ ಮುಹಮ್ಮದ್ ಶಾಪುರ್ಕರ್ ಎಂಬ ಬಡ ಕುಟುಂಬದ ಯುವತಿಗೆ ಗ್ರಾಮಸ್ಥರು ಸೇರಿ ಆರ್ಥಿಕ ಸಹಾಯ ಮಾಡಿದ್ದು, ಜಾತಿ ಮತದ ಭೇದವಿಲ್ಲದೆ ನೆರವಿಗೆ ಧಾವಿಸಿದ ವಿಜಯಪುರ ಜಿಲ್ಲೆಯ ತಾಳಿಕೋಟೆಯ ನಿವಾಸಿಗಳ ಕಾರ್ಯಕ್ಕೆ ಶ್ಲಾಘನೆ ವ್ಯಕ್ತವಾಗಿದೆ.

ವಿಜಯಪುರ ಜಿಲ್ಲೆಯ ತಾಳಿಕೋಟೆಯ ಟಿಪ್ಪು ನಗರದ ನಿವಾಸಿಯಾಗಿರುವ ಶಗುಪ್ತಾ ಮುಹಮ್ಮರ್ ಶಾಪುರ್ಕರ್ ಎಂಬ ವಿದ್ಯಾರ್ಥಿನಿಯು NEET ಪರೀಕ್ಷೆಯಲ್ಲಿ 720 ಅಂಕಗಳಿಗೆ 514 ಅಂಕಗಳನ್ನು ಪಡೆದು ಎರಡನೇ ಸುತ್ತಿನ ಆಯ್ಕೆಯಲ್ಲಿ ಬಾಗಲಕೋಟೆಯ ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಎಂಬಿಬಿಎಸ್ ಸೀಟು ಪಡೆದಿದ್ದಳು. ಆದರೆ ಅಡ್ಮಿಷನ್ ಮಾಡಲು ಆಕೆಗೆ ತನ್ನ ಕುಟುಂಬದ ಆರ್ಥಿಕ ಸ್ಥಿತಿ ಅಡ್ಡಿಯಾಗಿತ್ತು. ಇದನ್ನು ಮನಗಂಡ ತಾಳಿಕೋಟೆ ನಿವಾಸಿಗಳು ಶಗುಪ್ತಾಳಿಗೆ ಆರ್ಥಿಕ ಸಹಾಯ ಮಾಡಿದ್ದು, ಆಕೆಯ ಕನಸನ್ನು ಮತ್ತೆ ಚಿಗುರುವಂತೆ ಮಾಡಿದ್ದಾರೆ.

ತಾಳಿಕೋಟೆ ಮುಸ್ಲಿಂ ಸಮಾಜದಿಂದ ಸುಮಾರು 1.5 ಲಕ್ಷ ರೂ, ಕುಚುಕು ಗೆಳೆಯರ ಬಳಗ, ಫ್ರೆಂಡ್ಸ್ ಫಾರೆವೆರ್, ಇಸ್ರೋ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜ್ಞಾನಿಯೊಬ್ಬರು ಸೇರಿ 1 ಲಕ್ಷ 40 ಸಾವಿರ ರೂ. ಒಗ್ಗೂಡಿಸಿ ಒಟ್ಟು 2.9 ಲಕ್ಷ ರೂ. ಗಳನ್ನು ಶಗುಪ್ತಾಳಿಗೆ ನೀಡಿದ್ದಾರೆ. ಅಲ್ಲದೇ, ವಸತಿ ಖರ್ಚು, ಊಟದ ಖರ್ಚು ಸೇರಿ ಇನ್ನಿತರ ಖರ್ಚುಗಳನ್ನು ಭರಿಸುವ ಭರವಸೆ ನೀಡಿದ್ದಾರೆ.

ಇತ್ತೀಚೆಗೆ ತಾಳಿಕೋಟಿ ಖಾಸ್ಗತೇಶ್ವರ ಮಠದ ಪೀಠಾಧಿಪತಿ ಸಿದ್ಧಲಿಂಗದೇವರ ಅವರ ನೇತೃತ್ವದಲ್ಲಿ ಶಗುಪ್ತಾಳಿಗೆ ಸನ್ಮಾನ ಮಾಡಿ, ನಗದು ಹಂಚಿದ್ದಾರೆ. ಈ ಸಂದರ್ಭ ಮಾತನಾಡಿದ ಪೀಠಾಧಿಪತಿ ಸಿದ್ಧಲಿಂಗದೇವರ ಅವರು, ವಿದ್ಯಾರ್ಥಿಗಳಿಗೆ ಸಹಾಯ ಮಾಡಲು ಯಾವುದೇ ಜಾತಿ ಮತ ಪಂಥ ಇರುವುದಿಲ್ಲ. ಅವರಲ್ಲಿರುವ ವಿದ್ಯೆಯನ್ನು ನೋಡಿ ನಾವು ಸಹಾಯಧನ ಮಾಡಬೇಕೇ ಹೊರತು ಜಾತಿಯನ್ನು ನೋಡಿ ಮಾಡಬಾರದೆಂದು ಹೇಳಿದರು.

ಈ ಸಂದರ್ಭದಲ್ಲಿ ಮನ್ಸೂರ್ ಇಬ್ರಾಹಿಂ, ಮೆಹಬೂಬ್ ಚೋರಗಸ್ತಿ, ಆನಂದ್ ಮದರಕಲ್, ಶ್ರೀಶೈಲ್ ಸಜ್ಜನ್, ಸಿದ್ದು ಅಸ್ಕಿ, ಜೈಸಿಂಗ್ ಮೂಲಿಮನಿ, ಮೌಲಾನಾ ಸಾಬ್ ಶೇಖ್ ಬಾಬುಸಾಬ್ ಸೇರಿ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X