Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆನಂದ್ ತೇಲ್ತುಂಬ್ಡೆಯ ಸತ್ಯ,...

ಆನಂದ್ ತೇಲ್ತುಂಬ್ಡೆಯ ಸತ್ಯ, ಪ್ರಾಮಾಣಿಕತೆ ಸರಕಾರದ ಕಣ್ಣು ಚುಚ್ಚುತ್ತಿದೆ: ದೇವನೂರ ಮಹಾದೇವ

ವಾರ್ತಾಭಾರತಿವಾರ್ತಾಭಾರತಿ19 Dec 2020 9:18 PM IST
share
ಆನಂದ್ ತೇಲ್ತುಂಬ್ಡೆಯ ಸತ್ಯ, ಪ್ರಾಮಾಣಿಕತೆ ಸರಕಾರದ ಕಣ್ಣು ಚುಚ್ಚುತ್ತಿದೆ: ದೇವನೂರ ಮಹಾದೇವ

ಬೆಂಗಳೂರು, ಡಿ.19: ಹಿರಿಯ ಚಿಂತಕ ಹಾಗೂ ಬರಹಗಾರ ಆನಂದ್ ತೇಲ್ತುಂಬ್ಡೆ ಅವರ ಸತ್ಯ, ಪ್ರಾಮಾಣಿಕತೆ ಹಾಗೂ ಸಂಶೋಧನೆಯ ಪ್ರಖರತೆ ಸರಕಾರದ ಕಣ್ಣು ಚುಚ್ಚುವಂತಾಗಿದೆ. ಹೀಗಾಗಿ ಅವರನ್ನು ವಿನಾಕಾರಣ ಬಂಧಿಸಿ ಜೈಲಿನಲ್ಲಿಡಲಾಗಿದೆ ಎಂದು ಹಿರಿಯ ಸಾಹಿತಿ ದೇವನೂರ ಮಹಾದೇವ ಅಭಿಪ್ರಾಯಿಸಿದ್ದಾರೆ.

ಶನಿವಾರ ಪುಸ್ತಕ ಪ್ರೀತಿ ಹಾಗೂ ಕ್ರಿಯಾ ಪ್ರಕಾಶನ ವೆಬಿನಾರ್ ಮೂಲಕ ಆಯೋಜಿಸಿದ್ದ ಲೇಖಕ ಅಬ್ದುಲ್ ರೆಹಮಾನ್ ಪಾಷ ಅನುವಾದಿಸಿರುವ ಮಹಾಡ್ ಮೊದಲ ದಲಿತ ಬಂಡಾಯ ಮತ್ತು ಮಹಾಡ್ ಕೆರೆ ಸತ್ಯಾಗ್ರಹ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ಮಹಾಡ್ ಹೋರಾಟದ ಕುರಿತು ಚಿಂತಕ ಆನಂದ್ ತೇಲ್ತುಂಬ್ಡೆ ಬರೆದಿರುವ ಮುನ್ನುಡಿ ರೂಪದಲ್ಲಿರುವ ಪುಸ್ತಕವು ಹತ್ತು ಉತ್ಕೃಷ್ಟ ಪಿಎಚ್‍ಡಿ ಗ್ರಂಥಗಳಿಗಿಂತಲೂ ಹೆಚ್ಚು ಅಮೂಲ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮಹಾಡ್ ಮೊದಲ ದಲಿತ ಬಂಡಾಯ ಮತ್ತು ಮಹಾಡ್ ಕೆರೆ ಸತ್ಯಾಗ್ರಹ ಕೃತಿಗಳು ದಲಿತರು ನಡೆಸಿದ ಚಾರಿತ್ರಿಕ ಹೋರಾಟವೊಂದನ್ನು ಹೇಗೆ ಅರ್ಥೈಸಿಕೊಳ್ಳಬೇಕೆಂದು ಸೂಕ್ಷ್ಮವಾದ ಒಳನೋಟಗಳೊಂದಿಗೆ ಆನಂದ್ ತೇಲ್ತುಂಬ್ಡೆ ವಿವರಿಸಿದ್ದಾರೆ. ಈ ಕೃತಿಗಳು ಸಂಶೋಧನಾ ವಿದ್ಯಾರ್ಥಿಗಳಿಗೆ ಆಕರ ಗ್ರಂಥವಾಗಬಲ್ಲದು ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಂಜಗೆರೆ ಜಯಪ್ರಕಾಶ್ ಮಾತನಾಡಿ, ಮಹಾಡ್ ಕೆರೆ ಸತ್ಯಾಗ್ರಹ ಹೋರಾಟವು ಕೇವಲ ಒಂದು ಸ್ಥಳದ ಹೋರಾಟವಲ್ಲ. ಶತಮಾನಗಳಿಂದ ಸವರ್ಣಿಯರಿಂದ ಅಸ್ಪೃಶ್ಯತೆಗೆ ಒಳಗಾಗಿದ್ದ ದಲಿತ ಸಮುದಾಯ ತಮ್ಮ ಹಕ್ಕುಗಳಿಗಾಗಿ ನಡೆಸಿದ ಚಾರಿತ್ರಿಕ ಹೋರಾಟವಾದ ಬಗೆಯನ್ನು ಆನಂದ್ ತೇಲ್ತುಂಬ್ಡೆ ಈ ಕೃತಿಗಳಲ್ಲಿ ವಿವರಿಸಿದ್ದಾರೆ ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ನೇತೃತ್ವದಲ್ಲಿ ನಡೆದ ಮಹಾಡ್ ಕೆರೆ ಹೋರಾಟವನ್ನು ಆನಂದ್ ತೇಲ್ತುಂಬ್ಡೆ ಹತ್ತು ಹಲವು ಬಗೆಯಲ್ಲಿ ವಿಶ್ಲೇಷಿಸಿದ್ದಾರೆ. ಅಂಬೇಡ್ಕರ್ ರೂಪಿಸಿದ ಹೋರಾಟದ ಸ್ವರೂಪದಿಂದ ಭವಿಷ್ಯದಲ್ಲಿ ದಲಿತ ಚಳವಳಿಗೆ ಯಾವ ರೀತಿಯಲ್ಲಿ ಪ್ರಭಾವ ಬೀರಿತು. ಅಂಬೇಡ್ಕರ್ ತಮ್ಮ ಹೋರಾಟದ ಸ್ವರೂಪವನ್ನು ಬದಲಿಸಿದ್ದರೆ ಯಾವ ರೀತಿಯಲ್ಲಿ ಬದಲಾವಣೆ ಕಾಣಬಹುದಾಗಿತ್ತು ಎಂಬುದರ ಕುರಿತು ಚರ್ಚಿಸಿದ್ದಾರೆ. ಇದು ಈಗಿನ ದಲಿತ ಹೋರಾಟಗಾರರಿಗೆ ಮಾರ್ಗದರ್ಶಿ ಆಗಬಹುದೆಂದು ಅವರು ಹೇಳಿದ್ದಾರೆ.

ಕಾರ್ಯಕ್ರಮದಲ್ಲಿ ಲೇಖಕ ಅಬ್ದುಲ್ ರೆಹಮಾನ್ ಪಾಷ, ಜನವಾದಿ ಮಹಿಳಾ ಸಂಘಟನೆಯ ಕೆ.ಎಸ್.ವಿಮಲಾ, ದಲಿತ ಹೋರಾಟಗಾರರಾದ ಡಾ.ಡಿ.ಜಿ.ಸಾಗರ್, ಮೋಹನ್‍ರಾಜ್, ಲಕ್ಷ್ಮೀನಾರಾಯಣ ನಾಗವಾರ, ಮಾವಳ್ಳಿ ಶಂಕರ್, ಗೋಪಾಲಕೃಷ್ಣ ಅರಳಹಳ್ಳಿ, ಡಾ.ರತಿರಾವ್, ಗುರುಪ್ರಸಾದ್ ಕೆರಗೋಡು ಮತ್ತಿತರರಿದ್ದರು.

ಜನಪರ ಹೋರಾಟಗಳನ್ನು ಕೇವಲ ಏಕಮುಖಿ ಸಿದ್ಧಾಂತದ ಮೂಸೆಯಿಂದ ನೋಡದೆ, ಸೈದ್ಧಾಂತಿಕ ಭಿನ್ನಾಭಿಪ್ರಾಯಗಳನ್ನು ಮೀರಿ, ಜನಪರ ಆಶಯಗಳಿಗಾಗಿ ನಡೆಯುವ ಹೋರಾಟಗಳನ್ನು ಸಕಾರಾತ್ಮಕವಾಗಿ ಮೌಲ್ಯೀಕರಣ ಮಾಡಬೇಕಾಗಿದೆ. ಆಗ ಮಾತ್ರ ಐಕ್ಯ ಹೋರಾಟವನ್ನು ಸಶಕ್ತವಾಗಿ ಮುನ್ನಡೆಸಲು ಸಾಧ್ಯ.

-ಬಂಜಗೆರೆ ಜಯಪ್ರಕಾಶ್, ಚಿಂತಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X