Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜ.1ರಿಂದ ಫಾಸ್ಟ್‌ಟ್ಯಾಗ್ ಕಡ್ಡಾಯ: ನಗದು...

ಜ.1ರಿಂದ ಫಾಸ್ಟ್‌ಟ್ಯಾಗ್ ಕಡ್ಡಾಯ: ನಗದು ಪಾವತಿ ಪಥದಲ್ಲಿ ಸಂಚಾರ ಬಂದ್

ವಾರ್ತಾಭಾರತಿವಾರ್ತಾಭಾರತಿ19 Dec 2020 9:25 PM IST
share
ಜ.1ರಿಂದ ಫಾಸ್ಟ್‌ಟ್ಯಾಗ್ ಕಡ್ಡಾಯ: ನಗದು ಪಾವತಿ ಪಥದಲ್ಲಿ ಸಂಚಾರ ಬಂದ್

ಬೆಂಗಳೂರು, ಡಿ.19: ದೇಶದಾದ್ಯಂತ ಫಾಸ್ಟ್‌ಟ್ಯಾಗ್ ಕಡ್ಡಾಯಗೊಳಿಸಿದ ಬಳಿಕ, ಇದೀಗ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೊಸ ವರ್ಷದಿಂದ ಟೋಲ್‍ಪ್ಲಾಜಾಗಳಲ್ಲಿ ನಗದು ಪಾವತಿ ಪಥ ರದ್ದು ಮಾಡಲಾಗುತ್ತಿದ್ದು, ಕಡ್ಡಾಯವಾಗಿ ಫಾಸ್ಟ್‌ಟ್ಯಾಗ್ ಮೂಲಕವೇ ಶುಲ್ಕ ಪಾವತಿಸಬೇಕಾಗಿದೆ.

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್ ಶುಲ್ಕ ಪಾವತಿಸಲು ಫಾಸ್ಟ್ಯಾಗ್ ಕಡ್ಡಾಯ ಮಾಡಿದರೂ, ಅದರ ಬಗ್ಗೆ ನಿರ್ಲಕ್ಷ್ಯ ವಹಿಸಿದ ವಾಹನ ಮಾಲಕರು ಹೊಸ ವರ್ಷದಿಂದ ಟೋಲ್ ಪ್ಲಾಜಾ ದಾಟುವುದು ಕಷ್ಟವಾಗಲಿದೆ. 2021ರ ಜನವರಿ 1ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಶುಲ್ಕ ಪಾವತಿ ಪಥ ರದ್ದು ಮಾಡಲಾಗುತ್ತಿದ್ದು, ಫಾಸ್ಟ್ಯಾಗ್ ಮೂಲಕವೇ ಶುಲ್ಕ ಪಾವತಿಸಬೇಕಿದೆ.

ಟೋಲ್‍ಪ್ಲಾಜಾಗಳಲ್ಲಿನ ವಾಹನ ದಟ್ಟಣೆ ಕಡಿಮೆ ಮಾಡುವುದು, ಇಂಧನ ಉಳಿತಾಯ ಸೇರಿ ಇನ್ನಿತರ ಕಾರಣಗಳಿಂದಾಗಿ 2020 ರ ಜನವರಿ 15 ರಿಂದ ಟೋಲ್ ಶುಲ್ಕವನ್ನು ಫಾಸ್ಟ್‌ಟ್ಯಾಗ್ ಮೂಲಕ ಪಾವತಿಸುವ ವ್ಯವಸ್ಥೆ ಜಾರಿಗೊಳಿಸಿ, ಕಡ್ಡಾಯ ಮಾಡಲಾಗಿತ್ತು. ಆದರೆ, ಸಾರ್ವಜನಿಕರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಫಾಸ್ಟ್‌ಟ್ಯಾಗ್ ಇಲ್ಲದವರಿಗಾಗಿ ಟೋಲ್‍ಪ್ಲಾಜಾಗಳಲ್ಲಿ ಪ್ರತ್ಯೇಕ ಪಥವನ್ನು ನಿಗದಿ ಮಾಡಲಾಗಿತ್ತು.

ಆ ಮೂಲಕ ಫಾಸ್ಟ್‌ಟ್ಯಾಗ್ ಇಲ್ಲದಿದ್ದರೂ, ನಗದು ಪಾವತಿಸಿ ಸಂಚರಿಸುವ ನಿಯಮವನ್ನು ಜಾರಿ ಮಾಡಿ, ದುಪ್ಪಟ್ಟು ಶುಲ್ಕವನ್ನು ವಸೂಲಿ ಮಾಡಲಾಗುತ್ತಿತ್ತು. ಇದೀಗ, ಸರಕಾರವು ಎಲ್ಲ ಕಡೆಗಳಲ್ಲಿ ಕಡ್ಡಾಯ ಫಾಸ್ಟ್‌ಟ್ಯಾಗ್ ಜಾರಿಗೆ ಮುಂದಾಗಿದ್ದು, ಜ. 1 ರಿಂದ ಎಲ್ಲ ಫಥಗಳನ್ನು ಫಾಸ್ಟ್‌ಟ್ಯಾಗ್ ಪಥವನ್ನಾಗಿ ಮಾಡಲಾಗುತ್ತಿದೆ.

ಶೇ. 10-15 ವಾಹನಗಳಲ್ಲಿಲ್ಲ ಫಾಸ್ಟ್‌ಟ್ಯಾಗ್: ಫಾಸ್ಟ್‌ಟ್ಯಾಗ್ ಕಡ್ಡಾಯದ ನಂತರ ದೇಶದಲ್ಲಿ ಫಾಸ್ಟ್‌ಟ್ಯಾಗ್ ಖರೀದಿ ಹೆಚ್ಚಳವಾಗಿದೆ. ಮೊದಲಿಗೆ 15 ಲಕ್ಷದಷ್ಟಿದ್ದ ಫಾಸ್ಟ್‌ಟ್ಯಾಗ್ ಬಳಕೆದಾರರ ಸಂಖ್ಯೆ ಇದೀಗ 2 ಕೋಟಿಗೂ ಹೆಚ್ಚಿದೆ. ಆದರೆ ಇನ್ನೂ ಶೇ. 10ರಿಂದ 15 ವಾಹನಗಳು ಫಾಸ್ಟ್‌ಟ್ಯಾಗ್ ವ್ಯಾಪ್ತಿಗೆ ಒಳಪಡಬೇಕಿವೆ. ಅಂತಹ ವಾಹನಗಳು ಈಗಲೇ ಫಾಸ್ಟ್‌ಟ್ಯಾಗ್ ಖರೀದಿಸಿ, ನೋಂದಣಿ ಮಾಡಿಕೊಳ್ಳಬೇಕಿದೆ.

ಪಾವತಿಸಬೇಕಾಗುತ್ತದೆ ದುಪ್ಪಟ್ಟು ಶುಲ್ಕ: ಟೋಲ್‍ಪ್ಲಾಜಾಗಳಲ್ಲಿ ನಗದು ರೂಪದಲ್ಲಿ ಟೋಲ್ ಶುಲ್ಕ ಪಾವತಿ ವ್ಯವಸ್ಥೆ ರದ್ದು ಮಾಡುತ್ತಿರುವ ಹಿನ್ನೆಲೆಯಲ್ಲಿ, ಪ್ರತಿ ವಾಹನವೂ ಫಾಸ್ಟ್‌ಟ್ಯಾಗ್ ಪಥದಲ್ಲಿಯೇ ಸಂಚರಿಸಬೇಕಿದೆ. ಒಂದು ವೇಳೆ ಫಾಸ್ಟ್‌ಟ್ಯಾಗ್ ಇಲ್ಲದ ವಾಹನಗಳು ನಿಯಮದಂತೆ ದುಪ್ಪಟ್ಟು ಶುಲ್ಕ ಪಾವತಿಸಿ ಟೋಲ್‍ಪ್ಲಾಜಾಗಳ ಮೂಲಕ ತೆರಳಬೇಕಿದೆ.

ಟೋಲ್ ಶುಲ್ಕ ವಸೂಲಿಯಲ್ಲಿ ಹೆಚ್ಚಳ: ಫಾಸ್ಟ್‌ಟ್ಯಾಗ್ ಕಡ್ಡಾಯ ಆದೇಶ ಜಾರಿ ನಂತರ ಟೋಲ್ ಶುಲ್ಕ ಸಂಗ್ರಹದಲ್ಲೂ ಹೆಚ್ಚಳವಾಗಿದೆ. ಫಾಸ್ಟ್‌ಟ್ಯಾಗ್ ಮುನ್ನ ದೇಶಾದ್ಯಂತ ಪ್ರತಿದಿನ ಸರಾಸರಿ 70 ಕೋಟಿ ರೂ. ಟೋಲ್ ಶುಲ್ಕ ವಸೂಲಿ ಆಗುತ್ತಿತ್ತು. ಆದರೀಗ ಅದು ಸರಾಸರಿ 92 ಕೋಟಿ ರೂ.ಗೆ ಏರಿಕೆಯಾಗಿದೆ. ಇದು 2021ರ ಜನವರಿಯಿಂದ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X