Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನವಭಾರತವು ಆತ್ಮ ನಿರ್ಭರ ಪರಿಕಲ್ಪನೆಯಡಿ...

ನವಭಾರತವು ಆತ್ಮ ನಿರ್ಭರ ಪರಿಕಲ್ಪನೆಯಡಿ ವೇಗವಾಗಿ ಸಾಗುತ್ತಿದೆ: ಪ್ರಧಾನಿ ಮೋದಿ

ವಾರ್ತಾಭಾರತಿವಾರ್ತಾಭಾರತಿ19 Dec 2020 10:18 PM IST
share
ನವಭಾರತವು ಆತ್ಮ ನಿರ್ಭರ ಪರಿಕಲ್ಪನೆಯಡಿ ವೇಗವಾಗಿ ಸಾಗುತ್ತಿದೆ: ಪ್ರಧಾನಿ ಮೋದಿ

ಹೊಸದಿಲ್ಲಿ, ಡಿ.19: ಉತ್ಪಾದನಾ ಕ್ಷೇತ್ರದಿಂದ ತೆರಿಗೆ ಪದ್ಧತಿಯವರೆಗೆ ಸರಕಾರ ತಂದಿರುವ ಸುಧಾರಣಾ ಕ್ರಮಗಳು ಭಾರತವೇ ಏಕೆ ಎಂಬ ಜಾಗತಿಕ ಗ್ರಹಿಕೆಯನ್ನು ಭಾರತ ಯಾಕಾಗಬಾರದು ಎಂದು ಬದಲಾಯಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಕೈಗಾರಿಕೆಗಳ ಒಕ್ಕೂಟ ‘ಅಸೋಚಮ್’ನ ಸ್ಥಾಪನಾ ದಿನಾಚರಣೆಯ ಸಪ್ತಾಹದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರು ತಿಂಗಳ ಹಿಂದೆ ಸರಕಾರ ತಂದಿರುವ ಕೃಷಿ ಕಾಯ್ದೆಗಳು ರೈತರಿಗೆ ಲಾಭ ತರಲು ಆರಂಭಿಸಿವೆ ಎಂದರು.

ಈ ಹಿಂದೆ ಭಾರತದಲ್ಲಿ ಹೂಡಿಕೆ ಮಾಡುವಾಗ ‘ಭಾರತದಲ್ಲಿ ಯಾಕೆ’ ಎಂಬ ಪ್ರಶ್ನೆ ಹೂಡಿಕೆದಾರರಲ್ಲಿ ಮೂಡುತ್ತಿತ್ತು. ಕಳೆದ ಸುಮಾರು 6 ವರ್ಷಗಳಿಂದ ತಂದಿರುವ ಸುಧಾರಣಾ ಕ್ರಮಗಳು ಮತ್ತದರ ಪರಿಣಾಮಗಳಿಂದ ಈ ಗ್ರಹಿಕೆ ‘ಭಾರತದಲ್ಲಿ ಯಾಕಾಗಬಾರದು’ ಎಂದು ಬದಲಾಗಿದೆ. ಅಪ್ರಚಲಿತ ಸುಮಾರು 1,500 ಕಾನೂನುಗಳನ್ನು ರದ್ದುಗೊಳಿಸಿ, ಇಂದಿನ ಪರಿಸ್ಥಿತಿಗೆ ಮತ್ತು ಹೂಡಿಕೆಗೆ ಪೂರಕವಾದ ಹೊಸ ಕಾನೂನುಗಳನ್ನು ಅಳವಡಿಸಲಾಗಿದೆ. ಈ ಹಿಂದೆ ಭಾರತದಲ್ಲಿ ಇದ್ದ ಅಧಿಕ ತೆರಿಗೆ ದರವನ್ನು ಬದಲಿಸಿದ್ದು ಈಗ ಸ್ಪರ್ಧಾತ್ಮಕವಾದ ಕಾರ್ಪೊರೇಟ್ ತೆರಿಗೆ ಜಾರಿಗೊಳಿಸಲಾಗಿದೆ . ಈ ಹಿಂದೆ ಸರಕಾರಿ ಕಚೇರಿಗಳಲ್ಲಿ ಅತಿಯಾದ ಸಂಕೀರ್ಣತೆ, ನಿಯಮದಿಂದಾಗಿ ಕಾರ್ಯ ವಿಳಂಬವಾಗಿ ಸಾಗುತ್ತಿತ್ತು. ಆದರೆ ಈ ಸ್ಥಿತಿಯೂ ಬದಲಾಗಿದೆ. ಹೊಸ ಕಲ್ಪನೆ, ಬದಲಾವಣೆಗೆ ಅವಕಾಶವೇ ಇಲ್ಲದ ಕಾಲವೊಂದಿತ್ತು. ಆದರೆ ಈಗ ನವೋದ್ಯಮಗಳಿಗೆ ಪ್ರೋತ್ಸಾಹ , ಅವಕಾಶ ಮತ್ತು ನೆರವು ನೀಡುವ ವಾತಾವರಣವಿದೆ. ಇದರಿಂದ ವಿದೇಶೀ ಹೂಡಿಕೆದಾರರು ‘ಭಾರತದಲ್ಲಿ ಯಾಕಾಗಬಾರದು ? ಎಂದು ವಿಶ್ವಾಸದಿಂದ ಹೇಳುವಂತಾಗಿದೆ. ಈ ಹಿಂದೆ ಸರಕಾರದ ಹಸ್ತಕ್ಷೇಪ ಹೆಚ್ಚಿತ್ತು. ಆದರೆ ಈಗ ಖಾಸಗಿ ಕ್ಷೇತ್ರದ ಮೇಲೆ ಸರಕಾರ ವಿಶ್ವಾಸವಿರಿಸಿದೆ. ನವಭಾರತವು ಆತ್ಮನಿರ್ಭರ ಪರಿಕಲ್ಪನೆಯಡಿ ವೇಗವಾಗಿ ಮುನ್ನಡೆಯುತ್ತಿದೆ ಎಂದು ಪ್ರಧಾನಿ ಹೇಳಿದರು.

ಉತ್ಪಾದನೆ ಮತ್ತು ನಿರ್ಮಾಣ ಸಂಬಂಧಿತ ಪ್ರೋತ್ಸಾಹಕ ಕ್ರಮಗಳ ಬಗ್ಗೆ ಸರಕಾರ ಗಮನ ಕೇಂದ್ರೀಕರಿಸಿದೆ. ಭಾರತದ ಅರ್ಥವ್ಯವಸ್ಥೆಯ ಬಗ್ಗೆ ಜಾಗತಿಕವಾಗಿ ವಿಶ್ವಾಸ ವೃದ್ಧಿಸಿದೆ. ಕೊರೋನ ಸೋಂಕಿನ ಸಂದರ್ಭದಲ್ಲೂ ದಾಖಲೆ ಪ್ರಮಾಣದ ವಿದೇಶಿ ನೇರ ಹೂಡಿಕೆ ಮತ್ತು ವಿದೇಶಿ ಬಂಡವಾಳ ಹೂಡಿಕೆ ಇದಕ್ಕೆ ಸಾಕ್ಷಿಯಾಗಿದೆ ಎಂದು ಮೋದಿ ಹೇಳಿದರು. ಸಂಶೋಧನೆ ಮತ್ತು ಅಭಿವೃದ್ಧಿ (ಆರ್ ಮತ್ತು ಡಿ) ಕ್ಷೇತ್ರದಲ್ಲಿ ಖಾಸಗಿ ಹೂಡಿಕೆ ಹೆಚ್ಚಬೇಕಾಗಿದೆ. ಅಮೆರಿಕದಲ್ಲಿ ಆರ್ ಮತ್ತು ಡಿ ಕ್ಷೇತ್ರದ 70% ಹೂಡಿಕೆ ಖಾಸಗಿ ಕ್ಷೇತ್ರದಿಂದ ಬರುತ್ತದೆ. ಆದರೆ ಭಾರತದಲ್ಲಿ ಖಾಸಗಿ ಕ್ಷೇತ್ರದ ಪಾಲು ಕೇವಲ 30% ಮಾತ್ರ. ಐಟಿ, ಔಷಧ ಉತ್ಪಾದನೆ ಮತ್ತು ಸಾರಿಗೆ ಕ್ಷೇತ್ರದಲ್ಲೂ ಹೂಡಿಕೆ ಹೆಚ್ಚಬೇಕಾಗಿದೆ. ಕೈಗಾರಿಕೆಗಳು ಉತ್ತಮ ಸಾಂಸ್ಥಿಕ ಆಡಳಿತ ಮತ್ತು ಲಾಭ ಹಂಚಿಕೆ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X