Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮತಾಂತರ ವಿರೋಧಿ ಕಾನೂನಿನಡಿ...

ಮತಾಂತರ ವಿರೋಧಿ ಕಾನೂನಿನಡಿ ಬಂಧಿತರಾಗಿದ್ದ ಸಹೋದರರಿಬ್ಬರ ಬಿಡುಗಡೆಗೆ ನ್ಯಾಯಾಲಯ ಆದೇಶ

ವಾರ್ತಾಭಾರತಿವಾರ್ತಾಭಾರತಿ20 Dec 2020 10:09 AM IST
share
ಮತಾಂತರ ವಿರೋಧಿ ಕಾನೂನಿನಡಿ ಬಂಧಿತರಾಗಿದ್ದ ಸಹೋದರರಿಬ್ಬರ ಬಿಡುಗಡೆಗೆ ನ್ಯಾಯಾಲಯ ಆದೇಶ

ಲಕ್ನೋ, ಡಿ.20: ಉತ್ತರ ಪ್ರದೇಶ ಸರಕಾರ ಹೊಸದಾಗಿ ಜಾರಿಗೆ ತಂದಿರುವ ಧಾರ್ಮಿಕ ಮತಾಂತರ ತಡೆ ಕಾಯ್ದೆಯಡಿ ಈ ತಿಂಗಳು ಬಂಧಿಸಿದ್ದ ಇಬ್ಬರನ್ನು ಶನಿವಾರ ನ್ಯಾಯಾಲಯ ಆದೇಶದ ಮೇರೆಗೆ ಬಿಡುಗಡೆ ಮಾಡಲಾಗಿದೆ.

ವಿವಾಹ, ಬಲವಂತ ಅಥವಾ ಮೋಹದ ಬಲೆ ಮೂಲಕ ಮತಾಂತರ ಮಾಡುವುದನ್ನು ತಡೆಯುವ ಸಲುವಾಗಿ ಉತ್ತರ ಪ್ರದೇಶ ಸರಕಾರ ಇತ್ತೀಚೆಗೆ ಅಧ್ಯಾದೇಶ ಹೊರಡಿಸಿತ್ತು. ಡಿಸೆಂಬರ್ 5ರಂದು ರಶೀದ್ ಅಲಿ, ಅವರ ಪತ್ನಿ ಮುಸ್ಕಾನ್ ಜಹಾನ್ (ಪಿಂಕಿ) ಅವರು ತಮ್ಮ ವಿವಾಹವನ್ನು ನೋಂದಣಿ ಮಾಡಿಸಲು ಮೊರಾದಾಬಾದ್ ನ್ಯಾಯಾಲಯಕ್ಕೆ ಆಗಮಿಸಿದ್ದಾಗ ಸ್ಥಳೀಯ ಸಂಘ ಪರಿವಾರದ ಕಾರ್ಯಕರ್ತರು ನ್ಯಾಯಾಲಯ ಆವರಣಕ್ಕೆ ಬಂದು ಒತ್ತಾಯಪೂರ್ವಕವಾಗಿ ದಂಪತಿಯನ್ನು ಪೊಲೀಸ್ ಠಾಣೆಗೆ ಒಯ್ದಿದ್ದರು. ಆರೋಪಿ ರಶೀದ್ ತಮ್ಮ ಧಾರ್ಮಿಕ ಹಿನ್ನೆಲೆಯನ್ನು ಮರೆಮಾಚಿ ಹಿಂದೂ ವ್ಯಕ್ತಿಯಂತೆ ನಟಿಸಿ ಪಿಂಕಿಯನ್ನು ಮೋಹದ ಬಲೆಗೆ ಬೀಳಿಸಿದ್ದ ಎಂದು ಯುವತಿಯ ತಾಯಿ ಆಪಾದಿಸಿದ್ದಾಗಿ ಪೊಲೀಸರು ಹೇಳಿಕೆ ನೀಡಿದ್ದರು.

ಬಳಿಕ ರಶೀದ್ ಹಾಗೂ ಅವರ ಸಹೋದರ ಮುಹಮ್ಮದ್ ಸಲೀಂ ಅವರನ್ನು ಹೊಸ ಕಾಯ್ದೆಯ ಸೆಕ್ಷನ್ 3ರಡಿ ಬಂಧಿಸಿ, ಜಹಾನ್ ಅವರನ್ನು ಆಶ್ರಯಧಾಮಕ್ಕೆ ಸೇರಿಸಲಾಗಿತ್ತು. ರಶೀದ್ ವಿರುದ್ಧ ಯುವತಿಯ ತಾಯಿ ಮಾಡಿರುವ ಆರೋಪ ಸುಳ್ಳು ಎಂದು ಮ್ಯಾಜಿಸ್ಟ್ರೇಟ್ ಮುಂದೆ ಸ್ಪಷ್ಟಪಡಿಸಿದ್ದ ಯುವತಿ, ತನ್ನ ಸ್ವಇಚ್ಛೆಯಿಂದ ರಶೀದ್‌ನನ್ನು ವಿವಾಹವಾಗಿ ಇಸ್ಲಾಂಗೆ ಮತಾಂತರ ಹೊಂದಿರುವುದಾಗಿ ಬಹಿರಂಗಪಡಿಸಿದ್ದರು.

"ಮಹಿಳೆಯ ಹೇಳಿಕೆ ಆಧಾರದಲ್ಲಿ ನ್ಯಾಯಾಲಯ ರಶೀದ್ ಹಾಗೂ ಆತನ ಸಹೋದರನ ಬಿಡುಗಡೆಗೆ ಆದೇಶ ನೀಡಿದೆ. ವಯಸ್ಕಳಾಗಿರುವ ಆಕೆ ರಶೀದ್‌ನನ್ನು ಸ್ವ ಇಚ್ಛೆಯಿಂದ ವಿವಾಹವಾಗಿ ಯಾವುದೇ ಒತ್ತಡ ಇಲ್ಲದೇ ಇಸ್ಲಾಂಗೆ ಮತಾಂತರಗೊಂಡಿದ್ದಾಳೆ" ಎಂದು ಮೊರಾದಾಬಾದ್ ಎಸ್ಪಿ ವಿ.ಎಸ್.ಮಿಶ್ರಾ ಹೇಳಿದ್ದಾರೆ.

ವೈಯಕ್ತಿಕ ಬಾಂಡ್ ಆಧಾರದಲ್ಲಿ ಇಬ್ಬರನ್ನೂ ಬಿಡುಗಡೆ ಮಾಡಲಾಗಿದ್ದು, ಪೊಲೀಸರು ತನಿಖಾ ವರದಿ ಸಲ್ಲಿಸಿದ ಬಳಿಕ ಪ್ರಕರಣ ರದ್ದುಪಡಿಸಲಾಗುವುದು ಎಂದು ಅವರು ವಿವರಿಸಿದರು.

ಡಿಸೆಂಬರ್ 15ರಂದು ಆಶ್ರಯಧಾಮದಿಂದ ಬಿಡುಗಡೆಯಾದ ಬಳಿಕ 22 ವರ್ಷದ ಮಹಿಳೆ, ಅಧಿಕಾರಿಗಳ ವಿರುದ್ಧ ನಿರ್ಲಕ್ಷ್ಯ ಆರೋಪ ಹೊರಿಸಿ, ತನ್ನ ಗರ್ಭಪಾತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂದು ದೂರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X