Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಪ್ರಧಾನಿ ಒಲಿ ತುರ್ತು ಸಭೆ, ಸಂಸತ್...

ಪ್ರಧಾನಿ ಒಲಿ ತುರ್ತು ಸಭೆ, ಸಂಸತ್ ವಿಸರ್ಜನೆಗೆ ನೇಪಾಳ ಸಂಪುಟ ಶಿಫಾರಸು

ವಾರ್ತಾಭಾರತಿವಾರ್ತಾಭಾರತಿ20 Dec 2020 1:06 PM IST
share
ಪ್ರಧಾನಿ ಒಲಿ ತುರ್ತು ಸಭೆ, ಸಂಸತ್ ವಿಸರ್ಜನೆಗೆ ನೇಪಾಳ ಸಂಪುಟ ಶಿಫಾರಸು

ಪ್ರಧಾನಿ ಕೆಪಿ ಶರ್ಮ ಒಲಿ ಶಿಫಾರಸಿಗೆ ರಾಷ್ಟ್ರಪತಿ ಸಮ್ಮತಿ

ನೇಪಾಳ ಸಂಸತ್ ವಿಸರ್ಜನೆ , ಎಪ್ರಿಲ್-ಮೇಯಲ್ಲಿ ಚುನಾವಣೆ

ಕಠ್ಮಂಡು, ಡಿ.20: ನೇಪಾಳದಲ್ಲಿ ಅಧಿಕಾರಕ್ಕಾಗಿ ಹಾಲಿ ಮತ್ತು ಮಾಜಿ ಪ್ರಧಾನಿಗಳ ಮಧ್ಯೆ ಸುದೀರ್ಘಾವಧಿಯಿಂದ ನಡೆಯುತ್ತಿದ್ದ ಮುಸುಕಿನ ಗುದ್ದಾಟಕ್ಕೆ ರವಿವಾರ ಅನಿರೀಕ್ಷಿತ ತಿರುವು ದೊರಕಿದೆ. ಹಾಲಿ ಪ್ರಧಾನಿ ಕೆಪಿ ಶರ್ಮ ಒಲಿ ಮಾಡಿದ ಶಿಫಾರಸಿನಂತೆ ರಾಷ್ಟ್ರಪತಿ ಬಿದ್ಯಾದೇವಿ ಭಂಡಾರಿ ನೇಪಾಳ ಸಂಸತ್ತನ್ನು ವಿಸರ್ಜಿಸುವ ಘೋಷಣೆ ಮಾಡಿದ್ದಾರೆ.

ಎಪ್ರಿಲ್- ಮೇ ತಿಂಗಳಿನಲ್ಲಿ ಸಂಸತ್ತಿಗೆ ಮಧ್ಯಾವಧಿ ಚುನಾವಣೆ ನಡೆಯಲಿದೆ ಎಂದು ರಾಷ್ಟ್ರಪತಿಯವರ ಪ್ರಕಟಣೆ ತಿಳಿಸಿದೆ. ನೇಪಾಳದ ಹಾಲಿ ಪ್ರಧಾನಿ ಕೆಪಿ ಶರ್ಮ ಒಲಿ ಮತ್ತು ಮಾಜಿ ಪ್ರಧಾನಿ ಪುಷ್ಪಕಮಲ ದಹಾಲ್ ಪ್ರಚಂಡರ ಮಧ್ಯೆ ಕೆಲ ದಿನಗಳಿಂದ ಅಧಿಕಾರಕ್ಕಾಗಿ ತಿಕ್ಕಾಟ ನಡೆಯುತ್ತಿತ್ತು. ರವಿವಾರ ಒಲಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟದ ತುರ್ತು ಸಭೆಯಲ್ಲಿ ಸಂಸತ್ತು ವಿಸರ್ಜನೆಗೆ ರಾಷ್ಟ್ರಪತಿಗೆ ಶಿಫಾರಸು ಮಾಡುವ ನಿರ್ಧಾರಕ್ಕೆ ಬರಲಾಗಿದೆ ಎಂದು ಆಡಳಿತಾರೂಢ ನೇಪಾಳ ಕಮ್ಯುನಿಸ್ಟ್ ಪಾರ್ಟಿ(ಎನ್‌ಸಿಪಿ)ಯ ಸ್ಥಾಯಿ ಸಮಿತಿಯ ಹಿರಿಯ ಸದಸ್ಯರೊಬ್ಬರು ಹೇಳಿದ್ದಾರೆ.

 ಮಧ್ಯಂತರ ಚುನಾವಣೆಯ ಪ್ರಥಮ ಹಂತ ಎಪ್ರಿಲ್ 30ರಂದು ಮತ್ತು ದ್ವಿತೀಯ ಹಂತದ ಚುನಾವಣೆ ಮೇ 10ರಂದು ನಡೆಯಲಿದೆ. 275 ಸದಸ್ಯ ಬಲದ ನೇಪಾಳ ಸಂಸತ್ತಿಗೆ 2017ರಲ್ಲಿ ಚುನಾವಣೆ ನಡೆದಿದ್ದು ಹಾಲಿ ಸರಕಾರದ ಕಾರ್ಯಾವಧಿ 2022ರವರೆಗೆ ಇತ್ತು. ಎನ್‌ಸಿಪಿಯಲ್ಲೇ ಪಕ್ಷದ ಅಧ್ಯಕ್ಷ, ಹಾಲಿ ಪ್ರಧಾನಿ ಕೆಪಿ ಶರ್ಮ ಒಲಿಯ ನೇತೃತ್ವದ ಬಣ ಹಾಗೂ ಕಾರ್ಯಾಧ್ಯಕ್ಷ ಪ್ರಚಂಡ ನೇತೃತ್ವದ ಬಣದ ಸೃಷ್ಟಿಯಾಗಿದ್ದು ಕಳೆದ ವಾರ ಬಣಗಳ ತಿಕ್ಕಾಟ ಪರಾಕಾಷ್ಟೆಗೇರಿತ್ತು. ಒಲಿಯವರ ನಿರ್ಧಾರ ಪ್ರಜಾಪ್ರಭುತ್ವ ವಿರೋಧಿ, ಸಂವಿಧಾನ ವಿರೋಧಿ ಮತ್ತು ನಿರಂಕುಶ ಕ್ರಮವಾಗಿದೆ ಎಂದು ಎನ್‌ಸಿಪಿಯ ವಕ್ತಾರ ನಾರಾಯಣ್‌ಕಾಜಿ ಶ್ರೇಷ್ಟ ಹೇಳಿದ್ದು, ಪ್ರಕರಣದ ಬಗ್ಗೆ ಚರ್ಚಿಸಲು ಆಡಳಿತಾರೂಢ ಪಕ್ಷದ ಸ್ಥಾಯೀ ಸಮಿತಿಯ ಸಭೆ ನಡೆಯಲಿದೆ ಎಂದಿದ್ದಾರೆ. ಇದು ಅಸಾಂವಿಧಾನಿಕ ಕ್ರಮ ಎಂದು ಎನ್‌ಸಿಪಿಯ ಹಿರಿಯ ಮುಖಂಡ, ಮಾಜಿ ಪ್ರಧಾನಿ ಮಾಧವ್ ಕುಮಾರ್ ನೇಪಾಳ ಟೀಕಿಸಿದ್ದಾರೆ. ಒಲಿಯವರ ನಿರ್ಧಾರದ ಬಗ್ಗೆ ಚರ್ಚಿಸಲು ಎನ್‌ಸಿಪಿ ಮುಖಂಡರು ಪುಷ್ಪಕುಮಾರ್ ಪ್ರಚಂಡರ ನಿವಾಸದಲ್ಲಿ ಸಭೆ ಸೇರಿರುವುದಾಗಿ ವರದಿಯಾಗಿದೆ. ಸಭೆಯಲ್ಲಿ ಮಾಧವ್ ನೇಪಾಳ, ಜಲಂತ ಖನಾಲ್, ನಾರಾಯಣ್ ಶ್ರೇಷ್ಟ ಸಹಿತ ಪ್ರಮುಖರು ಭಾಗವಹಿಸಿದ್ದರು ಎಂದು ಪ್ರಚಂಡ ಅವರ ಮಾಧ್ಯಮ ಸಲಹೆಗಾರ ಬಿಷ್ಣು ಸಪ್ಕೋತ ಹೇಳಿದ್ದಾರೆ. ಈ ಮಧ್ಯೆ, ರವಿವಾರ ಬೆಳಿಗ್ಗೆ ಒಲಿಯವರನ್ನು ಭೇಟಿಯಾಗಲು ಪ್ರಚಂಡ ಮನೆಗೆ ತೆರಳಿದ್ದರೂ ಭೇಟಿಗೆ ಅವಕಾಶ ದೊರಕಿಲ್ಲ ಎಂದು ಪಕ್ಷದ ಮೂಲಗಳು ಹೇಳಿವೆ. ಮಾಜಿ ಪ್ರಧಾನಿ ಡಾ ಬಾಬೂರಾಮ್ ಭಟ್ಟಾರಾಯ್ ಅವರೂ ಕೆಪಿ ಶರ್ಮ ಒಲಿಯವರ ನಿರ್ಧಾರ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದಿದ್ದಾರೆ. ಪ್ರಮುಖ ಪ್ರತಿಪಕ್ಷವಾದ ನೇಪಾಳಿ ಕಾಂಗ್ರೆಸ್ ರವಿವಾರ ಪಕ್ಷದ ಸದಸ್ಯರ ತುರ್ತು ಸಭೆ ಕರೆದಿದೆ.

ಅಸಾಂವಿಧಾನಿಕ ಕ್ರಮ: ತಜ್ಞರ ಅಭಿಮತ

ನೇಪಾಳದ ಸಂವಿಧಾನದ ಪ್ರಕಾರ ಪ್ರಧಾನಿ ಅಥವಾ ಬಹುಮತದ ಸರಕಾರಕ್ಕೆ ಸಂಸತ್ತನ್ನು ವಿಸರ್ಜಿಸುವ ಅವಕಾಶವಿಲ್ಲ. ಯಾವುದೇ ಪಕ್ಷಕ್ಕೂ ಹೊಸ ಸರಕಾರ ರಚಿಸಲು ಸಾಧ್ಯವಿಲ್ಲದ ಸ್ಥಿತಿ ಇಲ್ಲದಿದ್ದರೆ ಮಾತ್ರ ಸಂಸತ್ ವಿಸರ್ಜಿಸಬಹುದು. ಆದ್ದರಿಂದ ಪ್ರಚಂಡ ಅವರ ಬಣ ಈ ನಿರ್ಧಾರವಗನ್ನು ಕೋರ್ಟ್‌ನಲ್ಲಿ ಪ್ರಶ್ನಿಸುವ ಸಾಧ್ಯತೆಯಿದೆ ಎಂದು ಸಂವಿಧಾನ ತಜ್ಞರು ಅಭಿಪ್ರಾಯಪಟ್ಟಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X