Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇವಾಲಯದ ಹುಂಡಿಗಳ ನಿರ್ವಹಣೆ ಖಾಸಗಿಯವರು...

ದೇವಾಲಯದ ಹುಂಡಿಗಳ ನಿರ್ವಹಣೆ ಖಾಸಗಿಯವರು ಮಾಡುವಂತಿಲ್ಲ: ಸರಕಾರ ಆದೇಶ

ವಾರ್ತಾಭಾರತಿವಾರ್ತಾಭಾರತಿ20 Dec 2020 5:41 PM IST
share
ದೇವಾಲಯದ ಹುಂಡಿಗಳ ನಿರ್ವಹಣೆ ಖಾಸಗಿಯವರು ಮಾಡುವಂತಿಲ್ಲ: ಸರಕಾರ ಆದೇಶ

ಬೆಂಗಳೂರು, ಡಿ. 20: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಅಧಿಸೂಚಿತ ದೇವಾಲಯಗಳಲ್ಲಿ ನಡೆಯುವ ವಿಶೇಷ ಜಾತ್ರೆ/ಉತ್ಸವದ ಸಮಯದಲ್ಲಿ ಹುಂಡಿಗಳ ನಿರ್ವಹಣೆಯನ್ನು ಖಾಸಗಿಯವರು ಮಾಡುವಂತಿಲ್ಲ ಎಂದು ರಾಜ್ಯ ಸರಕಾರ ಸುತ್ತೋಲೆ ಹೊರಡಿಸಿದೆ.

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಅಧಿಸೂಚಿತ ದೇವಾಲಯಗಳಲ್ಲಿ ನಡೆಯಲಿರುವ ಜಾತ್ರೆ, ರಥೋತ್ಸವ, ಉತ್ಸವ ಹಾಗೂ ಇತರೆ ವಿಶೇಷ ಕಾರ್ಯಕ್ರಮಗಳಂದು ಖಾಸಗಿ ವ್ಯಕ್ತಿಗಳು ಹುಂಡಿಗಳನ್ನು ಇಟ್ಟು ಅದರಿಂದ ಸಂಗ್ರಹವಾಗುವ ಹಣವನ್ನು ನಿರ್ವಹಿಸುತ್ತಿರುವ ಬಗ್ಗೆ ಹಲವಾರು ದೂರುಗಳು ಬಂದ ಹಿನ್ನೆಲೆ ರಾಜ್ಯ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997ರ ಕಲಂ 69 (ಬಿ ) ಪ್ರಕಾರ ಈ ಆದೇಶ ಹೊರಡಿಸಿದೆ.

ಆದೇಶ ಏನು ಹೇಳುತ್ತದೆ: ಯಾವೊಬ್ಬ ವ್ಯಕ್ತಿ, ಸಂಸ್ಥೆ, ಸೇವಾ ಸಮಿತಿ ಅಥವಾ ಅಭಿವೃದ್ಧಿ ಸಂಸ್ಥೆ ನೋಂದಾಯಿತವಾಗಿರಲಿ, ನೋಂದಾಯಿತವಾಗಿಲ್ಲದಿರಲಿ, ನಿಯಮಿಸಲಾದ ಪ್ರಾಧಿಕಾರದಿಂದ ಅದು ಮಂಜೂರಾತಿ ಪಡೆದ ಹೊರತು ಅಧಿಸೂಚಿತ ಸಂಸ್ಥೆಯ ಅಥವಾ ಘೋಷಿತ ಸಂಸ್ಥೆಯ ಹೆಸರಿನಲ್ಲಿ ಯಾವುದೇ ಉದ್ದೇಶಕ್ಕಾಗಿ ಸೇವಾ ನಿಧಿಯನ್ನು ಅಥವಾ ದೇಣಿಗೆಯನ್ನು ಸಂಗ್ರಹಿಸಲು ಹಕ್ಕನ್ನು ಹೊಂದಿರತಕ್ಕದ್ದಲ್ಲ.
ಹೀಗಾಗಿ, ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ಅಧಿಸೂಚಿತ ದೇವಾಲಯಗಳಲ್ಲಿ ಇನ್ನು ಮುಂದೆ ಮತ್ತು ಈಗಾಗಲೇ ಅಳವಡಿಸಿರುವ ಹುಂಡಿಗಳೊಂದಿಗೆ ಜಾತ್ರೆ, ರಥೋತ್ಸವ, ಉತ್ಸವ ಹಾಗೂ ವಿಶೇಷ ಕಾರ್ಯಕ್ರಮಗಳಂದು ಖಾಸಗಿ ವ್ಯಕ್ತಿಗಳು ಹುಂಡಿಗಳಿಂದ ಹಾಗೂ ಇತರೆ ಯಾವುದೇ ನಿಯಮದ ಅಡಿಯಲ್ಲಿ ಹಣವನ್ನು ಸಂಗ್ರಹಿಸಲು ಕಡ್ಡಾಯವಾಗಿ ಅವಕಾಶ ನೀಡತಕ್ಕದ್ದಲ್ಲ.

ಒಂದು ವೇಳೆ ಅಂತಹ ಪ್ರಕರಣಗಳು ಕಂಡುಬಂದಲ್ಲಿ ಸಂಬಂಧಪಟ್ಟ ವ್ಯಕ್ತಿಗಳ ವಿರುದ್ಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಸಂಬಂಧಿಸಿದ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು, ಆಡಳಿತಾಧಿಕಾರಿಗಳು, ವ್ಯವಸ್ಥಾಪನಾ ಸಮಿತಿಯವರು ಕೂಡಲೇ ಕ್ರಮ ಕೈಗೊಳ್ಳಲು ಸೂಚಿಸಿದೆ.

ಈಗಾಗಲೇ ಹೊರಡಿಸಲಾಗಿರುವ ಸುತ್ತೋಲೆಗಳನ್ವಯ, ಹುಂಡಿ ಹಣವನ್ನು ದೇವಾಲಯದ ಖಾತೆಗೆ ಜಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಗಳು, ಆಡಳಿತಾಧಿಕಾರಿಗಳು, ವ್ಯವಸ್ಥಾಪನಾ ಸಮಿತಿಯವರಿಗೆ ಸೂಚಿಸಿದೆ.
 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X