Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಂವಿಧಾನದ ಅರಿವಿರುವವರು ಗೋಹತ್ಯೆ ನಿಷೇದ...

ಸಂವಿಧಾನದ ಅರಿವಿರುವವರು ಗೋಹತ್ಯೆ ನಿಷೇದ ಕಾಯ್ದೆಯನ್ನು ವಿರೋಧಿಸಲ್ಲ: ಸಿ.ಟಿ. ರವಿ

ವಾರ್ತಾಭಾರತಿವಾರ್ತಾಭಾರತಿ20 Dec 2020 7:38 PM IST
share
ಸಂವಿಧಾನದ ಅರಿವಿರುವವರು ಗೋಹತ್ಯೆ ನಿಷೇದ ಕಾಯ್ದೆಯನ್ನು ವಿರೋಧಿಸಲ್ಲ: ಸಿ.ಟಿ. ರವಿ

ಚಿಕ್ಕಮಗಳೂರು, ಡಿ.20: ಸಂವಿಧಾನದ ಬಗ್ಗೆ ಯಾರಿಗೆ ಶ್ರದ್ಧೆ ಮತ್ತು ತಿಳುವಳಿಕೆ ಇರುತ್ತದೆಯೋ ಅವರು ಗೋಹತ್ಯೆ ನಿಷೇದ ಕಾಯ್ದೆಯನ್ನು ವಿರೋಧಿಸುವುದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರೇ ಗೋಹತ್ಯೆ ನಿಷೇದದ ಬಗ್ಗೆ ಸಂವಿಧಾನದಲ್ಲಿ ಪ್ರಸ್ತಾಪ ಮಾಡಿದ್ದಾರೆ. ಅವರ ನಂತರ 1964ರಲ್ಲಿ ಗೋಹತ್ಯೆ ನಿಷೇದ ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಸದ್ಯ ಈ ಕಾಯ್ದೆಯನ್ನು ರಾಜ್ಯ ಸರಕಾರ ಮತ್ತಷ್ಟು ಬಲಗೊಳಿಸಿದೆ ಎಂದ ಅವರು, 1964ರಲ್ಲಿ ಜನಸಂಘ, ಬಿಜೆಪಿ ಆಡಳಿತದಲ್ಲಿ ಇರಲಿಲ್ಲ, 1950-51ರಲ್ಲಿ ಸಂವಿಧಾನದಲ್ಲಿ ಈ ಕಾಯ್ದೆ ಸೇರಿಸುವಾಗ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಸಲಹೆ ನೀಡಿದ್ದು, ಬಿಜೆಪಿ ಅಲ್ಲ, ಮೋದಿಯೂ ಅಲ್ಲ, ಈ ದೇಶದ ಸಂಸ್ಕೃತಿ, ಜಾನುವಾರುಗಳ ಪ್ರಾಮುಖ್ಯತೆಯಿಂದಾಗಿ ಅಂಬೇಡ್ಕರ್ ಗೋ ಹತ್ಯೆ ನಿಷೇದ ಕಾಯ್ದೆಯನ್ನು ಸಂವಿಧಾನದಲ್ಲಿ ಉಲ್ಲೇಖ ಮಾಡಿದ್ದಾರೆ ಎಂದರು.

ಗೋವು ಎಲ್ಲಾ ರೀತಿಯಿಂದಲೂ ದೇಶಕ್ಕೆ ಬಲ ನೀಡಿದೆ. ನಮ್ಮ ಜೀವನ ಗೋವಿನೊಂದಿಗೆ ಸಮ್ಮಿಲನಗೊಂಡಿದೆ. ಹಾಗಾಗಿ ಸಂವಿಧಾನದಲ್ಲಿ ಗೋಹತ್ಯೆ ನಿಷೇದದ ಪ್ರಸ್ತಾಪ ಮಾಡಲಾಗಿದೆ. ಕಾಂಗ್ರೆಸ್‍ನವರು ಇತಿಹಾಸವನ್ನು ಮರೆತಿದ್ದಾರೆ. ಈಗಿರುವ ಕಾಂಗ್ರೆಸ್‍ಗೂ ಹಿಂದಿನ ಕಾಂಗ್ರೆಸ್‍ಗೂ ಸಂಬಂಧವಿಲ್ಲ. ಜೋಡೆತ್ತು ಅವರ ಪಕ್ಷದ ಗುರುತಾಗಿತ್ತು. ಹಸು ಕರು ಆ ಪಕ್ಷದ ಗುರುತಾಗಿತ್ತು. ಯಾವ ಪಕ್ಷ ಹಸುವಿನ ಗುರುತು ಇಟ್ಟುಕೊಂಡಿತ್ತೋ ಆ ಪಕ್ಷ ಗೋಹತ್ಯೆ ನಿಷೇದದ ಬಗ್ಗೆ ಈಗ ಆಕ್ಷೇಪ ಎತ್ತುತ್ತಿದೆ ಎಂದು ಸಿ.ಟಿ.ರವಿ ಟೀಕಿಸಿದರು.

ಕಾಂಗ್ರೆಸ್‍ನವರು ಆಹಾರ ಪದ್ಧತಿ ಬಗ್ಗೆ ಮಾತನಾಡುತ್ತಿದ್ದಾರೆ. ಸಮುದ್ರದ ಕೆಲ ಮೀನುಗಳಿಗೆ ಮನುಷ್ಯರನ್ನು ತಿನ್ನುವ ಸಂಪ್ರದಾಯವಿದೆ. ನಾಳೆ ಮನುಷ್ಯರನ್ನೇ ತಿನ್ನುವುದನ್ನು ಆಹಾರ ಪದ್ಧತಿ ಎಂದರೆ ಸಿದ್ದರಾಮಯ್ಯ ಅವರು ಈ ವಾದವನ್ನು ಬೆಂಬಲಿಸುತ್ತಾರಾ?, ಸಿದ್ದರಾಮಯ್ಯ ಅವರ ಕುಲದೈವ ಬೀರೇಶ್ವರ ಸ್ವಾಮಿ ಅವರು ಗೋಹತ್ಯೆಯನ್ನು ಸಮರ್ಥನೆ ಮಾಡುತ್ತಾರಾ?, ಬೀರೇಶ್ವರನಾ ವಾಹನ ಯಾವುದು ಎಂದು ಸಿದ್ದರಾಮಯ್ಯ ತಿಳಿದುಕೊಳ್ಳಲಿ. ಇದರಿಂದ ಇವರ ಮೂಲ ಸಂಸ್ಕೃತಿ ಯಾವುದು, ಓಟಿಗಾಗಿ ಇರುವ ಸಂಸ್ಕೃತಿ ಯಾವುದು ಎಂದು ತಿಳಿಯುತ್ತದೆ ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X