Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕರ್ನಾಟಕ ಸೇರಿದಂತೆ ಐದು ರಾಜ್ಯಗಳು...

ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಹೆಚ್ಚುವರಿ 16,728 ಕೋ.ರೂ.ಸಾಲವೆತ್ತಲು ಕೇಂದ್ರದ ಒಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ20 Dec 2020 9:03 PM IST
share
ಕರ್ನಾಟಕ ಸೇರಿದಂತೆ ಐದು ರಾಜ್ಯಗಳು ಹೆಚ್ಚುವರಿ 16,728 ಕೋ.ರೂ.ಸಾಲವೆತ್ತಲು ಕೇಂದ್ರದ ಒಪ್ಪಿಗೆ

ಹೊಸದಿಲ್ಲಿ,ಡಿ.20: ಉದ್ಯಮಸ್ನೇಹಿ ಕ್ರಮಗಳಲ್ಲಿ ನಿಗದಿತ ಸುಧಾರಣೆಗಳನ್ನು ಪೂರ್ಣಗೊಳಿಸಿರುವುದಕ್ಕಾಗಿ ಕರ್ನಾಟಕ,ಆಂಧ್ರಪ್ರದೇಶ,ತೆಲಂಗಾಣ,ತಮಿಳುನಾಡು ಮತ್ತು ಮಧ್ಯಪ್ರದೇಶ ಈ ಐದು ರಾಜ್ಯಗಳಿಗೆ ಮುಕ್ತ ಮಾರುಕಟ್ಟೆಗಳಿಂದ 16,728 ಕೋ.ರೂ.ಗಳ ಹೆಚ್ಚುವರಿ ಸಾಲವೆತ್ತಲು ಅನುಮತಿಯನ್ನು ನೀಡಲಾಗಿದೆ ಎಂದು ಕೇಂದ್ರ ವಿತ್ತ ಸಚಿವಾಲಯವು ರವಿವಾರ ತಿಳಿಸಿದೆ.

ರಾಜ್ಯಗಳು ಹೆಚ್ಚುವರಿ ಸಾಲಗಳನ್ನು ಪಡೆದುಕೊಳ್ಳಲು ಅನುಮತಿಯೊಂದಿಗೆ ಅವು ತೆಗೆದುಕೊಳ್ಳುವ ಉದ್ಯಮ ಸ್ನೇಹಿ ಸುಧಾರಣೆಗಳನ್ನು ತಳುಕು ಹಾಕಲು ಕೇಂದ್ರವು ಕಳೆದ ಮೇ ತಿಂಗಳಿನಲ್ಲಿ ನಿರ್ಧರಿಸಿತ್ತು.

ಜಿಲ್ಲಾಮಟ್ಟದ ಉದ್ಯಮ ಸುಧಾರಣೆ ಕ್ರಿಯಾ ಯೋಜನೆಯ ಮೊದಲ ಮೌಲ್ಯಮಾಪನ,ವಿವಿಧ ಚಟುವಟಿಕೆಗಳಿಗಾಗಿ ಉದ್ಯಮಗಳು ಪಡೆದುಕೊಂಡಿರುವ ನೋಂದಣಿ ಪ್ರಮಾಣಪತ್ರಗಳು,ಅನುಮೋದನೆಗಳು ಮತ್ತು ಪರವಾನಿಗೆಗಳ ನವೀಕರಣದ ಅಗತ್ಯಗಳ ನಿವಾರಣೆ ಇವು ಈ ಸುಧಾರಣೆಗಳಲ್ಲಿ ಸೇರಿವೆ.

ಕೋವಿಡ್-19 ಸಾಂಕ್ರಾಮಿಕದಿಂದಾಗಿ ರಾಜ್ಯಗಳ ಹೆಚ್ಚುವರಿ ಹಣಕಾಸು ಅಗತ್ಯಗಳನ್ನು ಈಡೇರಿಸಲು ವಿತ್ತೀಯ ಹೊಣೆಗಾರಿಕೆ ಮತ್ತು ಮುಂಗಡಪತ್ರ ವ್ಯವಸ್ಥಾಪನೆ ಕಾಯ್ದೆಯಡಿ ರಾಜ್ಯಗಳ ಜಿಡಿಪಿಯ ಶೇ.3ರಷ್ಟಿದ್ದ ಅವುಗಳ ಸಾಲ ಮಿತಿಯನ್ನು ಇನ್ನೂ ಶೇ.2ರಷ್ಟು ಹೆಚ್ಚಿಸಲು ಕೇಂದ್ರವು ಕಳೆದ ಮೇ ತಿಂಗಳಿನಲ್ಲಿ ನಿರ್ಧರಿಸಿತ್ತು. ಆದರೆ ಇದಕ್ಕಾಗಿ ರಾಜ್ಯಗಳು ‘ಒಂದು ದೇಶ ಒಂದು ಪಡಿತರ ಚೀಟಿ ’ ವ್ಯವಸ್ಥೆಯ ಅನುಷ್ಠಾನ,ಉದ್ಯಮ ಸ್ನೇಹಿ ಸುಧಾರಣೆಗಳು,ನಗರ ಸ್ಥಳೀಯ ಸಂಸ್ಥೆ/ಜನೋಪಯೋಗಿ ಸೇವೆಗಳ ಸುಧಾರಣೆಗಳು ಮತ್ತು ವಿದ್ಯುತ್ ಕ್ಷೇತ್ರ ಸುಧಾರಣೆಗಳು ಸೇರಿದಂತೆ ನಾಲ್ಕು ನಿಗದಿತ ಷರತ್ತುಗಳನ್ನು ಸೂಚಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕಿವೆ. ಇಂತಹ ರಾಜ್ಯಗಳು ಪ್ರತಿ ಸುಧಾರಣೆಯನ್ನು ಪೂರ್ಣಗೊಳಿಸಲು ತಮ್ಮ ಜಿಡಿಪಿಯ ಶೇ.0.25ರಷ್ಟು ಹೆಚ್ಚುವರಿ ಸಾಲದ ಸೌಲಭ್ಯಕ್ಕೆ ಅರ್ಹವಾಗುತ್ತವೆ. ಈ ಸೌಲಭ್ಯದಡಿ ರಾಜ್ಯಗಳು ಎಲ್ಲ ನಾಲ್ಕೂ ಸುಧಾರಣೆಗಳನ್ನು ಪೂರ್ಣಗೊಳಿಸಿದರೆ 2.14 ಲ.ಕೋ.ರೂ.ವರೆಗೆ ಹೆಚ್ಚುವರಿ ಸಾಲಗಳನ್ನು ಪಡೆದುಕೊಳ್ಳಬಹುದು.

ಈವರೆಗೆ 10 ರಾಜ್ಯಗಳು ಒಂದು ದೇಶ ಒಂದು ಪಡಿತರ ಚೀಟಿ ವ್ಯವಸ್ಥೆಯನ್ನು,ಐದು ರಾಜ್ಯಗಳು ಉದ್ಯಮ ಸ್ನೇಹಿ ಕ್ರಮಗಳನ್ನು ಮತ್ತು ಎರಡು ರಾಜ್ಯಗಳು ಸ್ಥಳೀಯ ಸಂಸ್ಥೆ ಸುಧಾರಣೆಗಳನ್ನು ಪೂರ್ಣಗೊಳಿಸಿವೆ ಎಂದು ವಿತ್ತ ಸಚಿವಾಲಯವು ಹೇಳಿಕೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X