Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಟಿಎಪಿಸಿಎಂಎಸ್‍ನ ವಾರ್ಷಿಕ ಮಹಾಸಭೆಯಲ್ಲಿ...

ಟಿಎಪಿಸಿಎಂಎಸ್‍ನ ವಾರ್ಷಿಕ ಮಹಾಸಭೆಯಲ್ಲಿ ಹೈಡ್ರಾಮ: ಕಟ್ಟಡ ಏರಿ ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಅಧ್ಯಕ್ಷ

ಅವ್ಯವಹಾರದ ತನಿಖೆ ವಿಚಾರದಲ್ಲಿ ಗದ್ದಲ

ವಾರ್ತಾಭಾರತಿವಾರ್ತಾಭಾರತಿ21 Dec 2020 9:12 PM IST
share
ಟಿಎಪಿಸಿಎಂಎಸ್‍ನ ವಾರ್ಷಿಕ ಮಹಾಸಭೆಯಲ್ಲಿ ಹೈಡ್ರಾಮ: ಕಟ್ಟಡ ಏರಿ ಆತ್ಮಹತ್ಯೆಗೆ ಯತ್ನಿಸಿದ ಮಾಜಿ ಅಧ್ಯಕ್ಷ

ಮೂಡಿಗೆರೆ, ಡಿ.21: ಇಲ್ಲಿನ ಟಿಎಪಿಸಿಎಂಎಸ್‍ನ ವಾರ್ಷಿಕ ಮಹಾಸಭೆ ಸೋಮವಾರ ಪಟ್ಟಣದ ರೈತ ಭವನದಲ್ಲಿ ನಡೆದಿದ್ದು, ಸಭೆಯಲ್ಲಿ ಹಿಂದಿನ ಆಡಳಿತ ಅವಧಿಯಲ್ಲಿ ಅವ್ಯವಹಾರ ನಡೆದಿದೆ, ಈ ಬಗ್ಗೆ ಹಿಂದಿನ ಸಭೆಯಲ್ಲಿ ತನಿಖೆ ನಡೆಸಲು ತೀರ್ಮಾನಿಸಲಾಗಿತ್ತು ಎಂದು ಸಂಘದ ಅಧ್ಯಕ್ಷ ಬಿ.ಎನ್.ಜಯಂತ್ ಸಭೆಗೆ ತಿಳಿಸಿದಾಗ, ಸಭೆಯಲ್ಲಿ ಗೊಂದಲ ಏರ್ಪಟ್ಟು ಆಡಳಿತ ಮತ್ತು ವಿರೋಧ ಪಕ್ಷದ ಸದಸ್ಯರ ನಡುವೆ ಗದ್ದಲ ಉಂಟಾಯಿತು. ಈ ವೇಳೆ ಸಂಘದ ಮಾಜಿ ಅಧ್ಯಕ್ಷ ಲಕ್ಷ್ಮಣಗೌಡ ಎಂಬವರು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರೈತ ಭವನದ ಕಟ್ಟಡ ಏರಿದ್ದರಿಂದ ಸ್ಥಳದಲ್ಲಿದ್ದವರು ಭಾರೀ ಆತಂಕಕ್ಕೆ ಒಳಗಾಗಿದ್ದ ಘಟನೆ ನಡೆಯಿತು.

ಈ ಹಿಂದೆ ರೈತ ಭವನ ನಿರ್ಮಾಣದಲ್ಲಿ ಸುಮಾರು 30 ಲಕ್ಷಕ್ಕೂ ಹೆಚ್ಚು ಹಣ ದುರುಪಯೋಗ ನಡೆಸಲಾಗಿದೆ ಎಂಬ ಆರೋಪಗಳಿದ್ದು, ಹಿಂದಿನ ಆಡಳಿತ ಮಂಡಳಿಯಲ್ಲಿ ಇದರ ಬಗ್ಗೆ ಒಕ್ಕೊರಲಿನಿಂದ ಖಂಡನೆಯಾಗಿದೆ. ಮುಖಭಂಗದಿಂದ ನಿರ್ದೇಶಕರಾಗಿದ್ದ ಲಕ್ಷ್ಮಣಗೌಡ ರಾಜಿನಾಮೆ ಸಲ್ಲಿಸಿದ್ದರು. ಪ್ರಸಕ್ತ ಆಡಳಿತ ಮಂಡಳಿಯಲ್ಲಿ ಅವ್ಯವಹಾರದ ತನಿಖೆಗೆ ಸಹಕಾರ ಕಾಯ್ದೆ 64ಬಿ ಅಡಿಯಲ್ಲಿ ತನಿಖೆ ನಡೆಸಲು ಅನುಮತಿ ನೀಡಲಾಗಿದ್ದು, ಇದನ್ನು ವಿರೋಧಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಸಭೆ ಮಧ್ಯೆ ರೈತ ಭವನದ ಮೇಲೇರಿ ಸುಮಾರು 2 ಗಂಟೆಗಳ ಕಾಲ ಕಟ್ಟಡ ತುದಿಯಲ್ಲಿ ನಿಂತು ಅತ್ತಿತ್ತ ತಿರುಗುತ್ತ ಕೆಳಗಿರುವವರಿಗೆ ಸಾಯುವುದಾಗಿ ಬೆದರಿಕೆ ಹಾಕಿದರು.

ಅಗ್ನಿಶಾಮಕ ಮತ್ತು ಪೊಲೀಸ್ ಇಲಾಖೆ ಆಗಮಿಸಿತ್ತಾದರೂ ಆತ್ಮಹತ್ಯೆ ಸಮಯದಲ್ಲಿ ರಕ್ಷಿಸುವಂತಹ ಯಾವುದೇ ಸಾಧನಗಳು ಇವರಲ್ಲಿರಲಿಲ್ಲ, ಮನವೊಲಿಸುವ ಪ್ರಯತ್ನ ನಡೆಸಲಾಯಿತು. ರಕ್ಷಿಸಲು ಸಮೀಪ ಹೋಗುವವರಿಗೆ ನಿಮ್ಮನ್ನೂ ಎಳೆದುಕೊಂಡು ಕೆಳಕ್ಕೆ ಹಾರುತ್ತೇನೆ ಎಂದು ಬೆದರಿಕೆ ಕೂಡಾ ಹಾಕುತ್ತಿದ್ದರು. ಇದರಿಂದ ನಾಟಕೀಯ ಪ್ರಸಂಗ ಮುಂದುವರಿಯಿತು. ಕೊನೆಗೆ ರೈತ ಭವನದ ಮೇಲ್ವಿಚಾರಕ ಮಹೇಶ್ ಹಿಂಭಾಗದಿಂದ ಕಾಣಿಸದಂತೆ ತೆರಳಿ ಅವರ ರಕ್ಷಣೆ ಮಾಡಿದರು. ನಂತರ ಸರ್ವ ಸದಸ್ಯರ ಸಭೆಯನ್ನು ಆಡಳಿತ ಮಂಡಳಿ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.

ಅಧ್ಯಕ್ಷ ಬಿ.ಎನ್.ಜಯಂತ್‍ ಮಾತನಾಡಿ, 2019ರಲ್ಲಿ ನಡೆದಿದ್ದ ಮಹಾಸಭೆಯಲ್ಲಿ ಟಿಎಪಿಸಿಎಂಎಸ್‍ನ ಹಿಂದಿನ ಆಡಳಿತ ಮಂಡಳಿಯವರು ನಡೆಸಿದ ಅವ್ಯವಹಾರದ ತನಿಖೆ ನಡೆಸಬೇಕೆಂದು ನಿರ್ಣಯ ಕೈಗೊಳ್ಳಲಾಗಿತ್ತು. ಅದನ್ನು ಇಂದಿನ ಸಭೆಯಲ್ಲಿ ಓದಿ ಹೇಳುವಾಗ ಮಾಜಿ ಅಧ್ಯಕ್ಷರೊಬ್ಬರು ಏಕಾಏಕಿ ಸಭೆಯಿಂದ ಹೊರ ಹೋಗಿ ಆತ್ಮಹತ್ಯೆಯ ನಾಟಕವಾಡಿ, ದಾರಿ ತಪ್ಪಿಸಲು ಮುಂದಾಗಿದ್ದಾರೆ. ಮಹಾಸಭೆಯ ತೀರ್ಮಾನವನ್ನು ಇನ್ನೊಂದು ಮಹಾಸಭೆಯಲ್ಲಿಯೇ ಮತ್ತೆ ನಿರ್ಣಯ ಕೈಗೊಂಡು ತೀರ್ಮಾನ ಮಾಡಬೇಕಿದೆ. ಇದು ಸಹಕಾರ ಇಲಾಖೆ ನಿಬಂಧನೆಯಾಗಿದೆ. ಅವ್ಯವಹಾರ ನಡೆಸದಿದ್ದರೆ ತನಿಖೆಗೆ ಒಪ್ಪಿಗೆ ಸೂಚಿಸಬೇಕಿತ್ತು. ಆತ್ಮಹತ್ಯೆ ಮಾಡಿಕೊಳ್ಳುವ ಅಗತ್ಯವಿರಲಿಲ್ಲ ಎಂದು ತಿಳಿಸಿದರು.

ಟಿಎಪಿಸಿಎಂಎಸ್ ಉಪಾಧ್ಯಕ್ಷ ಎಂ.ಎಲ್. ಕಲ್ಲೇಶ್ ನಿರ್ದೇಶಕರಾದ ರಂಜನ್ ಅಜಿತ್ ಕುಮಾರ್, ಎಂ.ವಿ.ಜಗದೀಶ್, ಓ.ಜಿ.ರವಿ, ಕೆ.ಪಿ.ಭಾರತಿ, ವಿ.ಕೆ.ಶಿವೇಗೌಡ, ಉತ್ತಮ್‍ಕುಮಾರ್, ಎಂ.ಎಲ್.ಅಭಿಜಿತ್, ಎಚ್.ಜಿ.ಸಂದರ್ಶ, ರೇಣುಕಾ ಉಪೇಂದ್ರ, ಡಿ.ಜಗನ್ನಾಥ್, ಸುರೇಶ್, ರೈತ ಸಂಘದ ರಾಜ್ಯ ಕಾರ್ಯದರ್ಶಿ ಮಂಜುನಾಥ್ ಗೌಡ, ಕೆ.ವೆಂಕಟೇಶ್ ಮತ್ತಿತರರಿದ್ದರು.

ಸಂಸ್ಥೆಯ ಮಾಜಿ ಅದ್ಯಕ್ಷರು ಹಿರಿಯ ಜೀವ, ಕಟ್ಟಡದಿಂದ ಕೆಳಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಲ್ಲಿ ಸಂಸ್ಥೆಗೆ ಕೆಟ್ಟ ಹೆಸರು ಬರುತ್ತದೆ, ಇದನ್ನು ತಡೆಯಬೇಕೆಂದು ಪ್ರಾಣದ ಹಂಗು ತೊರೆದು ಕಾಪಾಡಿದ್ದೇನೆ.
- ಮಹೇಶ, ರೈತ ಭವನ ಮೇಲ್ವಿಚಾರಕ.

ಹಾಸ್ಯಾಸ್ಪದ ಘಟನೆ
ರಕ್ಷಣೆ ಮಾಡಿದ ಸಂದರ್ಭದಲ್ಲಿ ಲಕ್ಷ್ಮಣ ಗೌಡ ಅವರನ್ನು ಕೆಳಕ್ಕೆ ಇಳಿಸಲು ಏಣಿಯನ್ನು ಬಳಸಿದ್ದು, ಕೆಳಕ್ಕೆ ಇಳಿಯುವಾಗ ಏಣಿ ಗಟ್ಟಿ ಇದೆಯಲ್ಲವೇ ಎಂದು ಏಣಿಯನ್ನು ತುಳಿದು ನೋಡಿದ್ದು ನೆರೆದವರನ್ನು ನಗೆಗಡಲಲ್ಲಿ ತೇಲಿಸಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X