Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗುರು- ಶನಿ ಗ್ರಹಗಳ ಅಪರೂಪದ ಜೋಡಿ :...

ಗುರು- ಶನಿ ಗ್ರಹಗಳ ಅಪರೂಪದ ಜೋಡಿ : ಉಡುಪಿ ಪಿಪಿಸಿಯಲ್ಲಿ ವೀಕ್ಷಣೆ

ವಾರ್ತಾಭಾರತಿವಾರ್ತಾಭಾರತಿ21 Dec 2020 9:49 PM IST
share
ಗುರು- ಶನಿ ಗ್ರಹಗಳ ಅಪರೂಪದ ಜೋಡಿ : ಉಡುಪಿ ಪಿಪಿಸಿಯಲ್ಲಿ ವೀಕ್ಷಣೆ

ಉಡುಪಿ, ಡಿ.21: ಆಕಾಶದಲ್ಲಿ 20 ವರ್ಷಗಳಿಗೊಮ್ಮೆ ಗೋಚರಿಸುವ ಖಗೋಳ ವಿಸ್ಮಯ ಗುರು-ಶನಿ ಸಮಾಗಮವನ್ನು ಇಂದು ಸಂಜೆ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನ ಆವರಣದಲ್ಲಿ ಖಗೋಳ ವೀಕ್ಷಕರು  ನೋಡಿ ಸಂಭ್ರಮಿಸಿದರು.

ಉಡುಪಿ ಪೂರ್ಣ ಪ್ರಜ್ಞಾ ಹವ್ಯಾಸಿ ಖಗೋಳ ವೀಕ್ಷಕರ ಸಂಘದ ವತಿಯಿಂದ ವ್ಯವಸ್ಥೆ ಮಾಡಲಾದ 3 ಟೆಲಿಸ್ಕೋಪ್‌ಗಳಲ್ಲಿ 200 ಮಂದಿ ಸಾರ್ವಜನಿಕರು ಈ ಖಗೋಳ ಕೌತುಕವನ್ನು ವೀಕ್ಷಿಸಿದರು. ಒಂದು ಟೆಲಿಸ್ಕೋಪನ್ನು ಯುಟ್ಯೂಬ್ ಲೈವ್ ಸ್ಟ್ರೀಮ್ ಇರಿಸಲಾಗಿತ್ತು. 

ಪಿಪಿಸಿ ನಿವೃತ್ತ ಪ್ರಾಂಶುಪಾಲ, ಖಗೋಳ ತಜ್ಞ ಡಾ.ಎ.ಪಿ ಭಟ್, ಬೆಂಗಳೂರು ಜವಹಾರ್‌ಲಾಲ್ ನೆಹರು ತಾರಾಲಯದ ಮಾಜಿ ನಿರ್ದೇಶಕ ಡಾ.ಬಿ.ಎಸ್ ಶೈಲಜಾ ಸಾರ್ವಜನಿಕರಿಗೆ ಗುರು-ಶನಿ ಸಮಾಗಮದ ಬಗ್ಗೆ ಮಾಹಿತಿ ನೀಡಿದರು. ಪೂರ್ಣಪ್ರಜ್ಞ ಕಾಲೇಜು ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ ಮೊಹಮ್ಮದ್ ಅಶೀಂ ಗುರು-ಶನಿ ಕೋನಾಂತರವನ್ನು ಮಾಪನ ಮಾಡಿದ್ದರು.

ಈ ಬಗ್ಗೆ ವಿವರಣೆ ನೀಡಿದ ಪೂರ್ಣಪ್ರಜ್ಞಾ ಕಾಲೇಜಿನ  ಭೌತಶಾಸ್ತ್ರ ಉಪನ್ಯಾಸಕ ಅತುಲ್ ಭಟ್, ಗುರು ಹಾಗು ಶನಿಯ ತುಂಬಾ ಹತ್ತಿರದಲ್ಲಿ ಕಾಣುವ ಈ ವಿಶೇಷ ವಿದ್ಯಮಾನವನ್ನು ಗ್ರೇಟ್ ಕಂಜಂಕ್ಷನ್ ಕರೆಯಲಾಗುತ್ತದೆ. ಭೂಮಿಯಿಂದ ಸೂರ್ಯನಿಗಿರುವ ದೂರದ (ಖಗೋಳಮಾನ), 5 ರಷ್ಟು  ದೂರದಲ್ಲಿ ಗುರುಗ್ರಹವಿದ್ದು ಇದು ಸೂರ್ಯನ ಸುತ್ತ ಪರಿಭ್ರಮಿಸಲು  11.86 ವರ್ಷಗಳು ಬೇಕು. ಶನಿಯು, ಭೂಮಿ ಹಾಗು ಸೂರ್ಯನ ಅಂತರದ 2 ರಷ್ಟು ಅಂತರವಿದ್ದು, ಪರಿಭ್ರಮಿಸಲು 29.46 ವರ್ಷಗಳನ್ನು ತೆಗೆದುಕೊಳ್ಳುತ್ತದೆ ಎಂದರು.

ಈ ಎರಡು ಗ್ರಹಗಳು ಸಮೀಪಿಸಲು ಕನಿಷ್ಠ 20 ವರ್ಷಗಳು ಬೇಕು.ಈ ಗ್ರಹಗಳು ಒಂದೇ ಸಮತಲದಲ್ಲಿ ಪರಿಭ್ರಮಿಸುವುದಿಲ್ಲ. ಹಾಗು ಪ್ರತಿ ಸಮಾಗಮದಲ್ಲಿ ಅವುಗಳ ನಡುವಿನ ಅಂತರ ಬದಲಾಗುತ್ತಿರುತ್ತದೆ.  ಶನಿ ಗ್ರಹ ಸೂರ್ಯನ ಸುತ್ತ ಸುತ್ತಲೂ 19 ವರ್ಷ ತೆಗೆದುಕೊಂಡರೇ, ಗುರು ಗ್ರಹ 11 ವರ್ಷ ತೆಗೆದುಕೊಳ್ಳಲಿದೆ. ಇದು ಭೂಮಿಗೆ ಹತ್ತಿರವಾಗಿ ಕಾಣಿಸುವುದು 20 ವರ್ಷಕ್ಕೆ ಮಾತ್ರ. ಈ ಹಿಂದೆ 2000 ಇಸವಿಯಲ್ಲಿ ಕೋನಾಂತರ 1 ಡಿಗ್ರಿಗಿಂತ ಹೆಚ್ಚು ಕಾಣಿಸಿದ್ದು, ಈ ಸಲ 0.1 ಡಿಗ್ರಿ ಅಂತರದಲ್ಲಿ ಗೋಚರವಾಗಿದೆ ಎಂದು ಅವರು ತಿಳಿಸಿದರು.

ಈ ಹಿಂದೆ ಇಷ್ಟೇ ಹತ್ತಿರ 1624 ವರ್ಷದ ಹಿಂದೆ ಗುರು ಮತ್ತು ಶನಿಗ್ರಹ ಸಾಮಿಪ್ಯವಾಗಿತ್ತು. ಸೂರ್ಯನ ಹತ್ತಿರ ಇದ್ದುದರಿಂದ ಇದು ಗೋಚರಿಸಿ ರಲಿಲ್ಲ. ಬಳಿಕ 794 ವರ್ಷದ ಹಿಂದೆ ಭೂಮಿ ಮೇಲೆ ಇಷ್ಟು ಹತ್ತಿರದಿಂದ ಗೋಚರವಾಗಿದೆ. ಮುಂದಿನ 2040 ಮತ್ತು 2080 ರಲ್ಲಿ ಈ ಸಮಾಗಮವನ್ನು ಕಣ್ತುಂಬಿಕೊಳ್ಳಬಹುದು ಎಂದು ಅವರು ಮಾಹಿತಿ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X