Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಾತುಕತೆಗೆ ಸಿದ್ಧ, ನಿಶ್ಚಿತ ಪರಿಹಾರ...

ಮಾತುಕತೆಗೆ ಸಿದ್ಧ, ನಿಶ್ಚಿತ ಪರಿಹಾರ ಬೇಕು: ರೈತ ನಾಯಕರು

"ಸರಕಾರದ ಪತ್ರದಲ್ಲಿ ಹೊಸದೇನಿಲ್ಲ"

ವಾರ್ತಾಭಾರತಿವಾರ್ತಾಭಾರತಿ21 Dec 2020 10:31 PM IST
share
ಮಾತುಕತೆಗೆ ಸಿದ್ಧ, ನಿಶ್ಚಿತ ಪರಿಹಾರ ಬೇಕು: ರೈತ ನಾಯಕರು

ಹೊಸದಿಲ್ಲಿ,ಡಿ.21: ಸರಕಾರವು ‘ನಿಶ್ಚಿತ ಪರಿಹಾರ’ದ ಕೊಡುಗೆಯನ್ನು ಮುಂದಿರಿಸುವವರೆಗೆ ಮಾತುಕತೆಗೆ ತಾವು ಸದಾ ಸಿದ್ಧರಿದ್ದೇವೆ ಎಂದು ಸೋಮವಾರ ಇಲ್ಲಿ ತಿಳಿಸಿದ ರೈತ ನಾಯಕರು,ಆದರೆ ಮುಂದಿನ ಸುತ್ತಿನ ಮಾತುಕತೆಗಳಿಗೆ ದಿನಾಂಕವನ್ನು ಕೋರಿ ಕೇಂದ್ರವು ತಮಗೆ ಬರೆದಿರುವ ಇತ್ತೀಚಿನ ಪತ್ರದಲ್ಲಿ ಹೊಸದೇನಿಲ್ಲ ಎಂದು ಹೇಳಿದರು.

‘ನೂತನ ಕೃಷಿ ಕಾನೂನುಗಳಿಗೆ ತಿದ್ದುಪಡಿಗಳನ್ನು ತರುವ ತನ್ನ ಹಿಂದಿನ ಪ್ರಸ್ತಾವದ ಕುರಿತು ಮಾತುಕತೆ ನಡೆಸಲು ತಾನು ಬಯಸಿರುವುದಾಗಿ ಮತ್ತು ಇನ್ನೊಂದು ಸುತ್ತಿನ ಮಾತುಕತೆಗಳಿಗಾಗಿ ದಿನಾಂಕವನ್ನು ತಿಳಿಸುವಂತೆ ಸರಕಾರವು ತನ್ನ ಪತ್ರದಲ್ಲಿ ಉಲ್ಲೇಖಿಸಿದೆ. ಪ್ರಸ್ತಾವವನ್ನು ನಾವು ಈಗಾಗಲೇ ತಿರಸ್ಕರಿಸಿದ್ದೇವೆ. ಸರಕಾರದ ಪತ್ರಕ್ಕೆ ಹೇಗೆ ಉತ್ತರಿಸಬೇಕು ಎಂಬ ಬಗ್ಗೆ ನಾವೀಗ ಚರ್ಚಿಸುತ್ತಿದ್ದೇವೆ ’ ಎಂದು ಭಾರತೀಯ ಕಿಸಾನ್ ಯೂನಿಯನ್(ಬಿಕೆಯು) ನಾಯಕ ರಾಕೇಶ್ ಟಿಕಾಯತ್ ಸುದ್ದಿಸಂಸ್ಥೆಗೆ ತಿಳಿಸಿದರು.

ಈ ಮೊದಲು ಡಿ.9ಕ್ಕೆ ನಿಗದಿಯಾಗಿದ್ದ ಮಾತುಕತೆಗಳು ರದ್ದುಗೊಂಡಿದ್ದವು.

ರವಿವಾರ 40 ರೈತ ನಾಯಕರಿಗೆ ಬರೆದಿರುವ ಪತ್ರದಲ್ಲಿ ಕೃಷಿ ಸಚಿವಾಲಯದ ಜಂಟಿ ಕಾರ್ಯದರ್ಶಿ ವಿವೇಕ್ ಅಗರವಾಲ್ ಅವರು, ರೈತರು ಎತ್ತಿರುವ ಎಲ್ಲ ಕಳವಳಗಳಿಗೆ ಸೂಕ್ತ ಪರಿಹಾರವನ್ನು ಕಂಡುಕೊಳ್ಳಲು ಸರಕಾರವು ಮುಕ್ತ ಮನಸ್ಸಿನಿಂದ ಎಲ್ಲ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ತಿಳಿಸಿದ್ದಾರೆ.

ಸಾವಿರಾರು ರೈತರು ನೂತನ ಕೃಷಿಕಾನೂನುಗಳನ್ನು ವಿರೋಧಿಸಿ ಕಳೆದ 24 ದಿನಗಳಿಂದಲೂ ದಿಲ್ಲಿಯ ಗಡಿಕೇಂದ್ರಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

‘ದಿನಾಂಕವೊಂದನ್ನು ನೀಡುವಂತೆ ಸರಕಾರವು ನಮಗೆ ಸೂಚಿಸಿರುವುದರಲ್ಲಿ ಯಾವುದೇ ಅರ್ಥವಿಲ್ಲ. ಸರಕಾರವು ನಮ್ಮ ಅಹವಾಲು ಆಲಿಸಬೇಕೆಂದು ನಾವು ದಿನವಿಡೀ ಇಲ್ಲಿ ಕುಳಿತಿದ್ದೇವೆ. ವ್ಯಸ್ತ ಕಾರ್ಯಕ್ರಮಗಳನ್ನು ಹೊಂದಿರುವುದು ಅವರು. ಅವರೇ ದಿನಾಂಕವನ್ನು ಸೂಚಿಸಬೇಕು ಅಥವಾ ಇಲ್ಲಿ ನಮ್ಮ ಶಿಬಿರಗಳಿಗೆ ಬರಬೇಕು, ನಾವು ಹೇಗೆ ವಾಸವಿದ್ದೇವೆ ಎನ್ನುವುದನ್ನು ನೋಡಬೇಕು ಮತ್ತು ಮಾತುಕತೆಗಳನ್ನು ನಡೆಸಬೇಕು ಎಂದು ಅಖಿಲ ಭಾರತ ಕಿಸಾನ್ ಸಮಿತಿ(ಪಂಜಾಬ)ಯ ಸಹಾಯಕ ಕಾರ್ಯದರ್ಶಿ ಕಾಶ್ಮೆರ್ ಸಿಂಗ್ ಹೇಳಿದರು.

ಸರಕಾರದೊಂದಿಗೆ ಮಾತುಕತೆಗೆ ನಾವು ಸದಾ ಸಿದ್ಧರಿದ್ದೇವೆ,ಆದರೆ ಅದು ನಿಶ್ಚಿತ ಪರಿಹಾರದೊಂದಗೆ ಬರಬೇಕು ಎಂದು ದ್ವಾಬಾ ಕಿಸಾನ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಅಮರಜೀತ್ ಸಿಂಗ್ ರಾರ್ರಾ ಹೇಳಿದರು.

  ಮುಂದಿನ ಕ್ರಿಯಾ ಯೋಜನೆಯ ಬಗ್ಗೆ ಚರ್ಚಿಸಲು ರೈತ ನಾಯಕರು ಮಂಗಳವಾರ ಸಭೆ ಸೇರುವ ನಿರೀಕ್ಷೆಯಿದೆ ಎಂದು ಕ್ರಾಂತಿಕಾರಿ ಕಿಸಾನ್ ಯೂನಿಯನ್‌ನ ಗುರ್ಮೀತ್ ಸಿಂಗ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X