Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಯಸ್ಕ ಮಹಿಳೆ ವಿವಾಹದ ನಂತರ...

ವಯಸ್ಕ ಮಹಿಳೆ ವಿವಾಹದ ನಂತರ ಸ್ವಇಚ್ಛೆಯಿಂದ ಮತಾಂತರಗೊಂಡರೆ ನ್ಯಾಯಾಲಯದ ಹಸ್ತಕ್ಷೇಪವಿಲ್ಲ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ22 Dec 2020 4:04 PM IST
share
ವಯಸ್ಕ ಮಹಿಳೆ ವಿವಾಹದ ನಂತರ ಸ್ವಇಚ್ಛೆಯಿಂದ ಮತಾಂತರಗೊಂಡರೆ ನ್ಯಾಯಾಲಯದ ಹಸ್ತಕ್ಷೇಪವಿಲ್ಲ: ಹೈಕೋರ್ಟ್

ಕೊಲ್ಕತ್ತಾ: ವಯಸ್ಕ ಮಹಿಳೆಯೊಬ್ಬಳು ವಿವಾಹವಾದ ನಂತರ ಸ್ವಇಚ್ಛೆಯಿಂದ ಇನ್ನೊಂದು ಧರ್ಮಕ್ಕೆ ಮತಾಂತರಗೊಂಡಲ್ಲಿ ನ್ಯಾಯಾಲಯಗಳು ಹಸ್ತಕ್ಷೇಪ ನಡೆಸುವಂತಿಲ್ಲ ಎಂದು ಕೊಲ್ಕತ್ತಾ ಹೈಕೋರ್ಟ್ ಸೋಮವಾರ ಪುನರುಚ್ಛರಿಸಿದೆ.

ನಾಪತ್ತೆಯಾಗಿರುವ ತನ್ನ 19 ವರ್ಷದ ಪುತ್ರಿಯನ್ನು ಪತ್ತೆ ಹಚ್ಚುವಂತೆ ಕೋರಿ ವ್ಯಕ್ತಿಯೊಬ್ಬರು ಸಲ್ಲಿಸಿದ ಅಪೀಲಿನ ಮೇಲೆ ವಿಚಾರಣೆ ನಡೆಸಿದ ಜಸ್ಟಿಸ್ ಸಂಜಿಬ್ ಬ್ಯಾನರ್ಜಿ ಹಾಗೂ ಜಸ್ಡಿಸ್ ಅರಿಜಿತ್ ಬ್ಯಾನರ್ಜಿ ಅವರ ಪೀಠ ಮೇಲಿನಂತೆ ಹೇಳಿದೆ.

ಈ ನಿರ್ದಿಷ್ಟ ಪ್ರಕರಣದಲ್ಲಿ ನಾಪತ್ತೆಯಾದ ಯುವತಿ ಪತ್ತೆಯಾದಾಗ ಆಕೆ ವಿವಾಹಿತಳಾಗಿದ್ದಳಲ್ಲದೆ ತನ್ನ ಪತಿಯ ಧರ್ಮಕ್ಕೆ ಮತಾಂತರಗೊಂಡಿದ್ದಳು. ತಾನು ಸ್ವಇಚ್ಛೆಯಿಂದ ಹೀಗೆ ಮಾಡಿದ್ದಾಗಿ ಹಾಗೂ ಹೆತ್ತವರ ಮನೆಗೆ ವಾಪಸಾಗಲು ಇಚ್ಛಿಸುತ್ತಿಲ್ಲ ಎಂದು ಆಕೆ ಪೊಲೀಸರೆದುರು ಹೇಳಿಕೆ ನೀಡಿದ್ದಳು.

"ಆಕೆಗೆ 19 ವರ್ಷ ವಯಸ್ಸು. ಆಕೆ ತನಗಿಷ್ಟವಾದ ವ್ಯಕ್ತಿಯನ್ನು ವಿವಾಹವಾಗಿದ್ದಾಳೆ ಹಾಗೂ ಆಕೆಗೆ ತನ್ನ ಹೆತ್ತವರ ಮನೆಗೆ ಮರಳಲು ಇಚ್ಛೆಯಿಲ್ಲ ಎಂದು ತಿಳಿಯುತ್ತದೆ. ವಯಸ್ಕ ಮಹಿಳೆಯೊಬ್ಬಳು ಆಕೆಯ ಇಚ್ಛೆಯಂತೆ ವಿವಾಹವಾಗಿ ನಂತರ  ಮತಾಂತರಗೊಳ್ಳಲು ನಿರ್ಧರಿಸಿ ಹಾಗೂ ಹೆತ್ತವರ ಮನೆಗೆ ವಾಪಸಾಗದೇ ಇರಲು ನಿರ್ಧರಿಸಿದರೆ ಈ ವಿಚಾರದಲ್ಲಿ ಹಸ್ತಕ್ಷೇಪ ನಡೆಸುವ ಹಾಗಿಲ್ಲ,'' ಎಂದು ಕೋರ್ಟ್ ಸ್ಪಷ್ಟ ಪಡಿಸಿದೆ.

ಆದರೆ ಆಕೆ ಒತ್ತಡಕ್ಕೊಳಗಾಗಿ ಹೇಳಿಕೆ ನೀಡಿರಬಹುದು ಎಂದು ಆಕೆಯ ತಂದೆ ಶಂಕೆ ವ್ಯಕ್ತಪಡಿಸಿದ್ದರಿಂದ ಯುವತಿ ಮ್ಯಾಜಿಸ್ಟ್ರೇಟ್ ಮುಂದೆ ಎರಡನೇ ಹೇಳಿಕೆ ನೀಡಿ ತಾನು ಯಾರದ್ದೇ ಒತ್ತಡ ಅಥವಾ ಪ್ರಭಾವಕ್ಕೊಳಗಾಗಿಲ್ಲ ಎಂದು ತಿಳಿಸಿದರೂ ಆಕೆಯ ತಂದೆಗೆ ಇದರಿಂದ ಸಮಾಧಾನವಾಗಿಲ್ಲ ಎನ್ನಲಾಗಿದೆ.

"ಸ್ಪಷ್ಟ ವರದಿ ನೀಡಿದ ನಂತರವೂ ತಂದೆಗೆ ಸಂದೇಹವಿದೆ,'' ಎಂದು  ಹೇಳಿದ ನ್ಯಾಯಾಲಯ ಅದೇ ಸಮಯ "ಈ ವಿಚಾರದಲ್ಲಿ ನ್ಯಾಯಾಲಯ ಹಸ್ತಕ್ಷೇಪ ನಡೆಸುವಂತಿಲ್ಲ" ಎಂದು ತಿಳಿಸಿದೆ.

ತಂದೆಯ ಸಂದೇಹವನ್ನು ದೂರ ಮಾಡುವ ಸಲುವಾಗಿ ಹೆಚ್ಚುವರಿ ಪಬ್ಲಿಕ್ ಪ್ರಾಸಿಕ್ಯೂಟರ್ ಸಾಯ್ಬುಲ್ ಬಾಪುಲಿ ಅವರು ಈ ಕುರಿತು ನ್ಯಾಯಾಲಯಕ್ಕೆ ಡಿಸೆಂಬರ್ 24ರಂದು ವರದಿ ಸಲ್ಲಿಸುವಂತಾಗಲು ಅವರನ್ನು ಅವರ ಕಚೇರಿಯಲ್ಲಿ ಭೇಟಿಯಾಗುವಂತೆ ಯುವತಿಗೆ ಸೂಚಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X