Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೂಪಾಂತರಿತ ಕೊರೋನ ಭಾರತದಲ್ಲಿ...

ರೂಪಾಂತರಿತ ಕೊರೋನ ಭಾರತದಲ್ಲಿ ಪತ್ತೆಯಾಗಿಲ್ಲ: ಕೇಂದ್ರ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ22 Dec 2020 10:10 PM IST
share
ರೂಪಾಂತರಿತ ಕೊರೋನ ಭಾರತದಲ್ಲಿ ಪತ್ತೆಯಾಗಿಲ್ಲ: ಕೇಂದ್ರ ಸ್ಪಷ್ಟನೆ

ಹೊಸದಿಲ್ಲಿ,ಡಿ.22: ಬ್ರಿಟನ್‌ನಲ್ಲಿ ಪತ್ತೆ.ಯಾಗಿರುವಂತಹ ರೂಪಾಂತರಗೊಂಡ ಹಾಗೂ ಹೆಚ್ಚು ವೇಗವಾಗಿ ಹರಡುವ ಸಾಮರ್ಥ್ಯವಿರುವ ಕೊರೋನ ವೈರಸ್‌ನ ಹೊಸ ಪ್ರಭೇದವು ಭಾರತದಲ್ಲಿ ಈವರೆಗೆ ಕಂಡುಬಂದಿಲ್ಲವೆಂದು ಕೇಂದ್ರ ಸರಕಾರ ಸ್ಪಷ್ಟಪಡಿಸಿದೆ.

ಕೇಂದ್ರ ನೀತಿ ಆಯೋಗದ ಸದಸ್ಯ ಡಾ.ವಿ.ಕೆ. ಪಾಲ್ ಮಂಗಳವಾರ ಸುದ್ದಿಗಾರರ ಜೊತೆ ಮಾತನಾಡುತ್ತಾ ಈ ವಿಷಯ ತಿಳಿಸಿದರು. ಭಾರತದಲ್ಲಿ ಹಾಗೂ ಇತರ ದೇಶಗಳಲ್ಲಿ ಅಭಿವೃದ್ಧಿಪಡಿಸಲಾಗಿರುವ ಲಸಿಕೆಗಳ ಸಾಮರ್ಥ್ಯದ ಮೇಲೆ ರೂಪಾಂತರಿತ ಕೊರೋನ ವೈರಸ್ ಯಾವುದೇ ಪರಿಣಾಮವನ್ನು ಉಂಟು ಮಾಡಲಾರದು ಎಂದವರು ಹೇಳಿದ್ದಾರೆ.

ನೂತನ ಪ್ರಭೇದದ ಕೊರೋನ ವೈರಸ್‌ನ ಹರಡುವಿಕೆಯನ್ನು ತಡೆಯಲು ಭಾರತ ಹಾಗೂ ಇತರ 25 ದೇಶಗಳು ಬ್ರಿಟನ್‌ಗೆ ಆಗಮಿಸುವ ಹಾಗೂ ನಿರ್ಗಮಿಸುವ ವಿಮಾನಗಳಿಗೆ ಡಿಸೆಂಬರ್ 31ರವರೆಗೆ ನಿಷೇಧ ಹೇರಿವೆ.

ವಿದೇಶದಿಂದ ಆಗಮಿಸುವ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆ ಕಡ್ಡಾಯ

ಇತರ ದೇಶಗಳಿಂದಲೂ ಆಗಮಿಸುವ ಪ್ರಯಾಣಿಕರಿಗೆ ಪ್ರಮಾಣಿತ ಕಾರ್ಯಾಚರಣಾ ವಿಧಾನ (ಎಸ್‌ಓಪಿ)ಗಳನ್ನು ಕೂಡಾ ಕೇಂದ್ರ ಸರಕಾರ ಪ್ರಕಟಿಸಿದೆ. ಆ ಪ್ರಕಾರ ವಿದೇಶದಿಂದ ಆಗಮಿಸುವ ಎಲ್ಲಾ ಪ್ರಯಾಣಿಕರಿಗೆ ಆರ್‌ಟಿ-ಪಿಸಿಆರ್ ಪರೀಕ್ಷೆಯನ್ನು ಕಡ್ಡಾಯಗೊಳಿಸಲಾಗಿದೆ. ಪರೀಕ್ಷೆಯಲ್ಲಿ ಕೋವಿಡ್-19 ಪಾಸಿಟಿವ್ ಆದವರನ್ನು ಕೂಡಲೇ ಪ್ರತ್ಯೇಕವಾಗಿ ಇರಿಸಲಾಗುವುದು. ಸೋಂಕಿತರೊಂದಿಗೆ ಸಂಪರ್ಕಕ್ಕೆ ಬಂದ ಇತರ ಪ್ರಯಾಣಿಕರನ್ನು ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಲಾಗುವುದು. ವಿಮಾನದಲ್ಲಿ ಸೋಂಕಿತ ಪ್ರಯಾಣಿಕನ ಆಸನವಿರುವ ಮೂರು ಸಾಲುಗಳಲ್ಲಿ ಆಸೀನರಾಗಿರುವ ಇತರ ಪ್ರಯಾಣಿಕರನ್ನು ಸಂಪರ್ಕಕ್ಕೆ ಬಂದವರೆಂದು ಪರಿಗಣಿಸಲಾಗುವುದು.

ಎರಡು ಪ್ರತ್ಯೇಕ ವಿಮಾನಗಳಲ್ಲಿ ಲಂಡನ್‌ನಿಂದ ಸೋಮವಾರ ರಾತ್ರಿ ಭಾರತಕ್ಕೆ ಆಗಮಿಸಿದ 8 ಪ್ರಯಾಣಿಕರಿಗೆ ಕೋವಿಡ್-19 ಸೋಂಕು ತಗಲಿರುವುದು ದೃಢಪಟ್ಟಿದೆ. ಆದರೆ ಇಂದು ಬೆಳಗ್ಗೆ ದಿಲ್ಲಿಗೆ ಆಗಮಿಸಿದ ಬ್ರಿಟಿಶ್ ಏರ್‌ವೇಸ್‌ನ ವಿಮಾನದಲ್ಲಿದ್ದ ಯಾವುದೇ ಪ್ರಯಾಣಿಕರಲ್ಲಿ ಸೋಂಕು ಪತ್ತೆಯಾಗಿಲ್ಲವೆಂದು ತಿಳಿದುಬಂದಿದೆ.

 ರೂಪಾಂತರಿತ ಕೊರೋನ ವೈರಸ್‌ಗೆ ಶೇ.70ರಷ್ಟು ಅಧಿಕ ಹರಡುವ ಸಾಮರ್ಥ್ಯ

 ರೂಪಾಂತರಗೊಂಡ ಕೊರೋನ ವೈರಸ್, ಕನಿಷ್ಠ ಪಕ್ಷ ಶೇ.70ರಷ್ಟು ಹೆಚ್ಚು ಸುಲಭವಾಗಿ ಹರಡುವ ಸಾಮರ್ಥ್ಯವನ್ನು ಹೊಂದಿದೆಯೆನ್ನಲಾಗಿದೆ. ರೂಪಾಂತರ ಗೊಂಡಿರುವ ಕೊರೋನ ವೈರಸ್‌ನಿಂದಾಗಿ ಕಳೆದ ಕೆಲವು ವಾರಗಳಲ್ಲಿ ಬ್ರಿಟನ್‌ನಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಭಾರೀ ಹೆಚ್ಚಳ ಕಂಡುಬಂದಿದೆ. ಈ ರೂಪಾಂತರಿತ ವೈರಸ್‌ಗೆ ಮಾರುಕಟ್ಟೆಗೆ ಬಿಡುಗಡೆಗೊಳ್ಳುತ್ತಿರುವ ಕೋವಿಡ್-19 ಲಸಿಕೆಗಳು ಪರಿಣಾಮಕಾರಿಯಾಗಲಾರದು ಎಂಬ ಆತಂಕವೂ ವಿಜ್ಞಾನಿಗಳಲ್ಲಿ ಉಂಟಾಗಿದೆ.

  ವಿಶ್ವ ಆರೋಗ್ಯ ಸಂಸ್ಥೆಯ ಪ್ರಧಾನ ವಿಜ್ಞಾನಿ ಸೌಮ್ಯಾ ಸ್ವಾಮಿನಾಥನ್ ಅವರು ರೂಪಾಂತರಿತ ಕೊರೋನ ವೈರಸ್ (ಬಿ.1.1.7) ಈಗಾಗಲೇ ಇತರ ದೇಶಗಳಿಗೂ ಪ್ರವೇಶಿಸಿದೆಯೆಂದು ಹೇಳಿದ್ದಾರೆ. ಇಟಲಿ, ಆಸ್ಟ್ರೇಲಿಯ, ಡೆನ್ಮಾರ್ಕ್ ಹಾಗೂ ನೆದರ್‌ಲ್ಯಾಂಡ್‌ನಲ್ಲಿ ಅದು ಕಾಣಿಸಿಕೊಂಡಿದೆಯೆಂದು ಅವರು ಹೇಳಿದ್ದಾರೆ. ದ.ಆಫ್ರಿಕದಲ್ಲಿ ಕೊರೋನ ವೈರಸ್‌ನ ಇನ್ನೊಂದು ಹೊಸ ಪ್ರಭೇದವು ಕಂಡುಬಂದಿದೆಯೆಂದು ಸೌಮ್ಯಾ ತಿಳಿಸಿದ್ದಾರೆ.ಈಗಾಗಲೇ ಮಾರುಕಟ್ಟೆಗೆ ಬಿಡುಗಡೆಯಾಗಿರುವ ಕೋವಿಡ್-19 ಲಸಿಕೆಯು ರೂಪಾಂತರಗೊಂಡ ಕೊರೋನ ವೈರಸ್ ಮೇಲೆ ಪರಿಣಾಮಕಾರಿಯಾಗದೆ ಇರುವ ಸಾಧ್ಯತೆ ತೀರಾ ಕಡಿಮೆ ಎಂದು ಅವರು ಅಭಿಪ್ರಾಯಿಸಿದ್ದಾರೆ.

ಈ ಮಧ್ಯೆ ಫೈಝರ್-ಬಯೋ ಎನ್‌ಟೆಕ್ ಸಿದ್ಧಪಡಿಸಿರುವ ಲಸಿಕೆಯು ನೂತನ ವೈರಸ್ ವಿರುದ್ಧ ರಕ್ಷಣೆಯನ್ನು ನೀಡುವ ಸಾಮರ್ಥ್ಯ ಹೊಂದಿರುವ ಸಾಧ್ಯತೆ ಅತ್ಯಧಿಕವಾಗಿದೆ ಎಂದು ಬಯೋ ಎನ್‌ಟೆಕ್‌ನ ಸಹಸಂಸ್ಥಾಪಕ ಉಗುರ್ ಸಾಹಿನ್ ತಿಳಿಸಿದ್ದಾರೆ. ಹೇಳಿದ್ದಾರೆ. ಫೈಝರ್ ಲಸಿಕೆ ಈಗಾಗಲೇ ಅಮೆರಿಕ ಹಾಗೂ ಯುರೋಪ್ ಒಕ್ಕೂಟದ ರಾಷ್ಟ್ರಗಳಲ್ಲಿ ಬಿಡುಗಡೆಗೊಂಡಿದೆ. ಭಾರತದಲ್ಲಿಯೂ ತುರ್ತುಬಳಕೆಗೆ ಪರಿಶೀಲನೆಯಲ್ಲಿರುವ ಮೂರು ಕೋವಿಡ್-19 ಲಸಿಕೆಗಳ ಪೈಕಿ ಫೈಝರ್ ಲಸಿಕೆ ಕೂಡಾ ಒಂದಾಗಿದೆ.

ಬ್ರಿಟನ್‌ನಿಂದ ಏರ್ ಇಂಡಿಯಾ ವಿಮಾನದ ಮೂಲಕ ಆಹ್ಮದಾಬಾದ್ ವಿಮಾನದಲ್ಲಿ ಬಂದಿಳಿದ ನಾಲ್ವರು ಪ್ರಯಾಣಿಕರಲ್ಲೂ ಕೋವಿಡ್-19 ಪತ್ತೆಯಾಗಿರುವುದಾಗಿ ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X