Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬ್ರಿಟನ್‌ನಿಂದ ಉಡುಪಿ ಜಿಲ್ಲೆಗೆ ಆಗಮಿಸಿದ...

ಬ್ರಿಟನ್‌ನಿಂದ ಉಡುಪಿ ಜಿಲ್ಲೆಗೆ ಆಗಮಿಸಿದ 8 ಮಂದಿಯ ಕೊರೋನ ವರದಿ ನೆಗೆಟಿವ್: ಡಿಎಚ್ಓ

ವಾರ್ತಾಭಾರತಿವಾರ್ತಾಭಾರತಿ23 Dec 2020 1:29 PM IST
share
ಬ್ರಿಟನ್‌ನಿಂದ ಉಡುಪಿ ಜಿಲ್ಲೆಗೆ ಆಗಮಿಸಿದ 8 ಮಂದಿಯ ಕೊರೋನ ವರದಿ ನೆಗೆಟಿವ್: ಡಿಎಚ್ಓ

ಉಡುಪಿ, ಡಿ. 23: ರೂಪಾಂತರಗೊಂಡ ಕೊರೋನ ವೈರಸ್ ಕಂಡು ಬಂದಿರುವ ಬ್ರಿಟನ್ ಹಾಗೂ ಇತರ ದೇಶಗಳಿಂದ ಉಡುಪಿ ಜಿಲ್ಲೆಗೆ ಆಗಮಿಸಿರುವ ಹಿನ್ನೆಲೆಯಲ್ಲಿ ಕೊರೋನ ಪರೀಕ್ಷೆಗೆ ಒಳಪಟ್ಟ ಎಂಟು ಮಂದಿಯ ವರದಿಯು ನೆಗೆಟಿವ್ ಬಂದಿದೆ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸುಧೀರ್ ಚಂದ್ರ ಸೂಡಾ ತಿಳಿಸಿದ್ದಾರೆ.

ಇಲಾಖೆಯ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.21ರಂದು ಐವರು ಬ್ರಿಟನ್‌ನ ಲಂಡನ್, ಇಬ್ಬರು ಕೆನಾಡದ ಟೊರೆಂಟೊ, ಒಬ್ಬರು ಐರ್ಲೆಂಡ್‌ನ ಡಬ್ಲಿನ್‌ನಿಂದ ಆಗಮಿಸಿದ ಕುಂದಾಪುರದ ಒಬ್ಬರು, ಉಡುಪಿಯ ನಾಲ್ವರು, ಕಾರ್ಕಳ ತಾಲೂಕಿನ ಮೂವರ ಗಂಟಲು ದ್ರವವನ್ನು ಡಿ.22ರಂದು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಡಿ.23 ರಂದು ಈ ಎಲ್ಲ ಎಂಟು ಮಂದಿಯ ವರದಿಯು ನೆಗೆಟಿವ್ ಬಂದಿದೆ ಎಂದು ಹೇಳಿದರು.

ಈ ಎಂಟು ಮಂದಿ 14 ದಿನಗಳ ಕಾಲ ಹೋಮ್ ಕ್ವಾರಂಟೈನ್‌ನಲ್ಲಿದ್ದು, 14 ದಿನದ ನಂತರ ಮತ್ತೆ ಇವರ ಗಂಟಲು ದ್ರವ ಪರೀಕ್ಷೆ ಮಾಡಲಾಗು ವುದು. ಈ ಮಧ್ಯೆ ಇವರಲ್ಲಿ ಯಾವುದೇ ರೋಗದ ಲಕ್ಷ್ಮಣಗಳು ಕಂಡು ಬಂದರೆ, ಕೂಡಲೇ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗುವುದು. ಇವರ ವರದಿಯು ಪಾಸಿಟಿವ್ ಬಾರದ ಕಾರಣ ಪ್ರಾಥಮಿಕ ಸಂಪರ್ಕ ಮಾಡಿದವರನ್ನು ಗುರುತಿಸುವ ಅಗತ್ಯ ಇರುವುದಿಲ್ಲ ಎಂದರು.

ಎಲ್ಲ ದೇಶದವರ ಬಗ್ಗೆ ನಿಗಾ

ಉಡುಪಿ ಜಿಲ್ಲೆಗೆ ವಿದೇಶದಿಂದ ಆಗಮಿಸುವ ಎಲ್ಲರ ಬಗ್ಗೆಯೂ ಹೆಚ್ಚು ನಿಗಾ ವಹಿಸಲಾಗುತ್ತಿದೆ. ಅಂತಾರಾಷ್ಟ್ರೀಯ ಪ್ರವಾಸ ಮಾಡಿ ಬರುವವರನ್ನು ಕೂಡಲೇ ಪತ್ತೆ ಹಚ್ಚಿ, ಪರೀಕ್ಷೆಗೆ ಒಳಪಡಿಸಿ, 14 ದಿನಗಳ ಕಡ್ಡಾಯ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗುತ್ತದೆ ಎಂದು ಅವರು ತಿಳಿಸಿದರು.

ಇವರಲ್ಲಿ ಪಾಸಿಟಿವ್ ಕಂಡುಬಂದರೆ ಅವರನ್ನು ಆಸ್ಪತ್ರೆಗೆ ಅಥವಾ ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲಾಗುವುದು. ಡಿ.21ಕ್ಕಿಂತ ಮೊದಲು ವಿದೇಶದಿಂದ ಜಿಲ್ಲೆಗೆ ಬಂದವರ ಬಗ್ಗೆ ನಮಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಡಿ.22ರಂದು ಬಂದಿರುವ ಮಾರ್ಗಸೂಚಿ ಪ್ರಕಾರ ಕೊರೋನ ಪರೀಕ್ಷೆ, 14 ಹೋಮ್ ಕ್ವಾರಂಟೈನ್ ಮತ್ತು ಆ ನಂತರ ಮತ್ತೊಮ್ಮೆ ಪರೀಕ್ಷೆ ಮಾಡಲಾಗುವುದು ಎಂದು ಅವರು ಹೇಳಿದರು.

ಈಗಾಗಲೇ ವಿಮಾನಯಾನ ಆರಂಭ ಸ್ಥಗಿತಗೊಂಡಿರುವುದರಿಂದ ಇನ್ನು ಸದ್ಯಕ್ಕೆ ಬ್ರಿಟನ್ ದೇಶದಿಂದ ಯಾರು ಬರುವವರಿಲ್ಲ ಎಂಬುದು ತಿಳಿದುಬಂದಿದೆ. ಈ ಸಂಬಂಧ ಸರಕಾರದಿಂದ ಹೊಸ ಮಾರ್ಗಸೂಚಿ ಬಂದರೆ ಅದನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುವುದು. ಈ ಹೊಸ ಕಾಯಿಲೆಯಲ್ಲೂ ಕೊರೋನದ ಲಕ್ಷಣಗಳೇ ಕಂಡುಬರುತ್ತದೆ. ಲಕ್ಷ್ಮಣ ಇರಬಹುದು ಮತ್ತು ಇಲ್ಲದೆ ಇರಬಹುದು. ಜಿಲ್ಲೆಗೆ ಆಗಮಿಸಿರುವ 8 ಮಂದಿಯ ಹಿಸ್ಟರಿ ಪರೀಶಿಲನೆ ಮಾಡಿ ದಾಗ ಇವರಲ್ಲಿ ಯಾರಿಗೂ ಯಾವುದೇ ಲಕ್ಷ್ಮಣಗಳು ಇಲ್ಲ ಎಂದು ಅವರು ಮಾಹಿತಿ ನೀಡಿದರು.

ಪಾಸಿಟಿವ್ ಬಂದರೆ ಜೀನ್ ಪರೀಕ್ಷೆ

ವಿದೇಶದಿಂದ ಆಗಮಿಸುವ ಎಲ್ಲರನ್ನು ಜಿಲ್ಲೆಯಲ್ಲಿ ಕೊರೋನ ಟೆಸ್ಟ್‌ಗೆ ಒಳಪಡಿಸಲಾಗುತ್ತದೆ. ಒಂದು ವೇಳೆ ಇವರಲ್ಲಿ ಸೋಂಕು ದೃಢಪಟ್ಟರೆ, ಅವರ ಮಾದರಿಯನ್ನು ಜೀನ್ ಪರೀಕ್ಷೆಗಾಗಿ ಬೆಂಗಳೂರಿನ ನ್ಯಾಷನಲ್ ಇಸ್ಟಿಟ್ಯೂಟ್ ಆಫ್ ವೈರೋಲಜಿ (ಎನ್‌ಐವಿ)ಗೆ ಕಳುಹಿಸಿಕೊಡಲಾಗುವುದು. ಇದರಿಂದ ಅವರಲ್ಲಿ ಯಾವ ಪ್ರಬೇಧದ ಕೊರೋನ ಇದೆ ಎಂಬುದು ದೃಢಪಡಿಸಬಹುದು ಎಂದು ಡಿಎಚ್‌ಓ ಡಾ. ಸುಧೀರ್ ಚಂದ್ರ ಸೂಡಾ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X