Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೈತರು, ಕಾರ್ಮಿಕರು, ಸಂಘಟನೆಗಳ...

ರೈತರು, ಕಾರ್ಮಿಕರು, ಸಂಘಟನೆಗಳ ಒಗ್ಗಟ್ಟಿನ ಹೋರಾಟದಿಂದ ಮಾತ್ರ ಖಾಸಗೀಕರಣ ತಡೆಯಲು ಸಾಧ್ಯ: ಶೈಲೇಂದ್ರ ದುಬೆ

ವಾರ್ತಾಭಾರತಿವಾರ್ತಾಭಾರತಿ23 Dec 2020 4:20 PM IST
share
ರೈತರು, ಕಾರ್ಮಿಕರು, ಸಂಘಟನೆಗಳ ಒಗ್ಗಟ್ಟಿನ ಹೋರಾಟದಿಂದ ಮಾತ್ರ ಖಾಸಗೀಕರಣ ತಡೆಯಲು ಸಾಧ್ಯ: ಶೈಲೇಂದ್ರ ದುಬೆ

ಬೆಂಗಳೂರು : ಕೇಂದ್ರ ಸರಕಾರದ ಖಾಸಗೀಕರಣದ ನೀತಿಯನ್ನು ತಡೆಯಲು ರೈತರು, ಕಾರ್ಮಿಕರು ಹಾಗೂ ಸಂಘಟನೆಗಳ ಒಗ್ಗಟ್ಟಿನ ಹೋರಾಟದ ಅಗತ್ಯವಿದ್ದು, ದೇಶಾದ್ಯಂತ ಸಂಘಟಿತ ಹೋರಾಟಕ್ಕೆ ಸಜ್ಜಾಗಬೇಕಾಗಿದೆ ಎಂದು ಆಲ್‌ ಇಂಡಿಯಾ ಫೆಡರೇಷನ್‌ ಪವರ್‌ ಇಂಜಿನೀಯರ್ಸ್‌ ಫೆಡರೇಷನ್‌ ಅಧ್ಯಕ್ಷ ಶೈಲೇಂದ್ರ ದುಬೆ ಕರೆ ನೀಡಿದ್ದಾರೆ. 

ಬುಧವಾರ ಭಾರತೀಯ ವಿದ್ಯುತ್‌ ಕಾಯ್ದೆ -2003ಕ್ಕೆ ತಿದ್ದುಪಡಿ ಹಾಗೂ ವಿದ್ಯುತ್‌ ವಿತರಣಾ ಕಂಪೆನಿಗಳನ್ನು ಖಾಸಗೀಕರಣಗೊಳಿಸುವ ಪ್ರಸ್ತಾವನೆಯನ್ನು ವಿರೋಧಿಸುವ ಬಗ್ಗೆ ಇಲ್ಲಿನ ಕೆಇಬಿ ಇಂಜಿನೀಯರ್ಸ್‌ ಅಸೋಷಿಯೇಷನ್‌ ರಜತ ಮಹೋತ್ಸವ ಸಭಾಂಗಣದಲ್ಲಿ ಕರ್ನಾಟಕ ವಿದ್ಯುತ್‌ ಮಂಡಳಿ ನೌಕರರ ಸಂಘಗಳ ಒಕ್ಕೂಟ ಆಯೋಜಿಸಿದ್ದ ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ ಅವರು ಭಾಗವಹಿಸಿ ಮಾತನಾಡಿದರು. 

ಕೇಂದ್ರ ಸರಕಾರ ಸರಕಾರಿ ಸೌಮ್ಯದ ಬಹುತೇಕ ಕಂಪನಿಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಲಾಭ ಮಾಡುತ್ತಿರುವ ವಿದ್ಯುತ್‌ ಕಂಪನಿಗಳನ್ನೂ ಕೂಡಾ ಖಾಸಗಿಯವರ ಪಾಲು ಮಾಡಲು ಕಾಯ್ದೆಗೆ ತಿದ್ದುಪಡಿ ತರುತ್ತಿದೆ. ದೇಶದ ಜನರ ತೆರಿಗೆ ಹಣದಿಂದ ನಿರ್ಮಿಸಿರುವ ಮೂಲಭೂತ ಸೌಲಭ್ಯಗಳನ್ನು ಖಾಸಗಿಯವರ ಪಾಲು ಮಾಡುವ ಮೂಲಕ ಅವರಿಗೆ ಲಾಭ ಮಾಡಿಕೊಡುವ ಹುನ್ನಾರ ಇದರ ಹಿಂದೆ ಇದೆ ಎಂದು ಆರೋಪಿಸಿದರು.

ಈಗಾಗಲೇ ಖಾಸಗೀ ಫ್ರಾಂಚೈಸಿಗಳ ಮೂಲಕ ನೀಡಿದ್ದ ವಿದ್ಯುತ್‌ ಸರಬರಾಜು ಕಂಪೆನಿಗಳು ವಿಫಲವಾಗಿವೆ. ಅಲ್ಲದೆ, ದೇಶದ ಬಡವರು ಹಾಗೂ ಮುಖ್ಯವಾಗಿ ರೈತರಿಗೆ ಸಬ್ಸಿಡಿ ದರದಲ್ಲಿ ವಿದ್ಯುತ್‌ ನೀಡುವಂತಹ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿರುವ ವಿದ್ಯುತ್‌ ಮಂಡಳಿಗಳನ್ನು ಖಾಸಗಿ ಅವರ ಪಾಲು ಮಾಢುವುದು ಸರಿಯಲ್ಲ. ಇದರ ವಿರುದ್ದ ದೇಶಾದ್ಯಂತ ರೈತರು, ಕಾರ್ಮಿಕರು ಹಾಗೂ ಸಂಘಟನೆಗಳ ಸಂಘಟಿತ ಪ್ರಯತ್ನದ ಹೋರಾಟಕ್ಕೆ ಸಜ್ಜಾಗಬೇಕಾಗಿದೆ ಎಂದು ಹೇಳಿದರು.

ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಮಾತನಾಡಿ, ಕೇಂದ್ರ ಸರಕಾರ ಹಲವಾರು ಕಾಯ್ದೆಗಳನ್ನು ಜನಾಭಿಪ್ರಾಯ ಸಂಗ್ರಹ ಮಾಡದೆ ಜಾರಿಗೊಳಿಸುವ ಮೂಲಕ ಸ್ವಾತಂತ್ರ್ಯಹರಣ ಮಾಡಲು ಹೊರಟಿದೆ. ದೆಹಲಿಯಲ್ಲಿ ಕಳೆದ 25 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟದಲ್ಲಿ ಪ್ರಮುಖವಾದ ಅಂಶ ವಿದ್ಯುತ್‌ ರಂಗದ ಖಾಸಗೀಕರಣವೂ ಸೇರಿದೆ. ಖನಿಜ, ಸಾರಿಗೆ, ರೈಲು, ವಿಮಾನ, ಅಂತ್ಯರಿಕ್ಷ, ಬಾಹ್ಯಾಕಾಶ ಹೀಗೆ ಎಲ್ಲಾ ಕ್ಷೇತ್ರಗಳನ್ನೂ ಖಾಸಗೀಯವರ ಪಾಲು ಮಾಡಲು ಕೇಂದ್ರ ಸರಕಾರ ಮುಂದಾಗಿದೆ. ಇದು ಸ್ವಾತಂತ್ರ್ಯಪೂರ್ವ ಬ್ರಿಟೀಷ್‌ ಕಂಪನಿ ಆಡಳಿತದ ಬದಲಿಗೆ ಕಾರ್ಪೋರೇಟ್‌ ಕಂಫನಿಗಳ ಅಧಿಕಾರಕ್ಕೆ ಬಂದಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇಶದಲ್ಲಿ ಕ್ವಿಟ್‌ ಇಂಡಿಯಾ ಚಳುವಳಿಯ ಮಾದರಿಯಲ್ಲಿ ದೇಶದ ಕಾರ್ಮಿಕರು, ರೈತರು, ದಲಿತರು ಹಾಗೂ ಸಂಘಟನೆಗಳು ಸರಕಾರದ ಈ ಖಾಸಗೀ ಪರ ಧೋರಣೆಯ ಬಗ್ಗೆ ಬೀದಿಗೆ ಇಳಿಯಬೇಕಾಗಿದೆ. ದೇಶದಲ್ಲಿ ಉತ್ಪಾದನೆ ಹಾಗೂ ವಿತರಣಾ ಕ್ಷೇತ್ರ ಖಾಸಗೀಯವರ ಪಾಲಾಗುತ್ತಿದೆ. ವಿದ್ಯುತ್‌ ಶಕ್ತಿ ನಮ್ಮದು ನಮ್ಮ ಪೋಷಕರ ಬಂಡವಾಳ ಹಾಗೂ ಶ್ರಮ ಇದರಲ್ಲಿ ಇದೆ. ಅದನ್ನು ದಾನ ನೀಡುವ ಹಾಗೆ ಖಾಸಗೀಯವರಿಗೆ ಲಾಭ ಮಾಡಲು ಕೇಂದ್ರ ಸರಕಾರ ಹೊರಟಿದ್ದಾರೆ. ದೇಶದ ನಾಗರೀಕರಿಗೆ ಸಿಗಬೇಕಾದ ಲಾಭ ಇದನ್ನು ಖಾಸಗೀಯವರ ಪಾಲು ಮಾಡುವ ಯತ್ನದ ವಿರುದ್ದ ಸಂಘರ್ಷಕ್ಕೆ ನಾವು ಸಿದ್ದರಿದ್ದೇವೆ. 2003 ಕಾಯ್ದೆಗೆ ತಿದ್ದುಪಡಿಯನ್ನು ಕೈಬಿಡಬೇಕು ಇಲ್ಲವೆ ದೆಹಲಿ ಮಾದರಿಯ ಹೋರಾಟಕ್ಕೆ ನಾವು ದೇಶಾದ್ಯಂತ ಸಜ್ಜಾಗಬೇಕಾಗಿದೆ ಎಂದು ಹೇಳಿದರು.

ಆಲ್‌ ಇಂಡಿಯಾ ಫೆಡರೇಷನ್‌ ಆಫ್‌ ಎಲೆಕ್ಟ್ರಸಿಟಿ ಎಂಪ್ಲಾಯೀಸ್‌ ಅಶೋಸಿಯೇಷನ್‌ ನ ಪ್ರಧಾನ ಕಾರ್ಯದರ್ಶಿ ಮೋಹನ್‌ ಶರ್ಮಾ ಮಾತನಾಡಿ, ದೇಶದಲ್ಲಿ ಲಾಭ ಮಾಢುತ್ತಿರುವ ವಿದ್ಯುತ್‌ ಕಂಪನಿಗಳನ್ನು ಖಾಸಗಿಯವರ ಪಾಲು ಹಾಗೂ ನಷ್ಟದಲ್ಲಿರುವ ವಿದ್ಯುತ್‌ ಕಂಪನಿ ಗಳನ್ನು ಸರಕಾರವೇ ಉಳಿಸಿಕೊಳ್ಳುವ ಪ್ರಸ್ಥಾವನೆ ಈ ಕಾಯ್ದೆಯಲ್ಲಿದೆ. ಅಲ್ಲದೆ, ಕಾಯ್ದೆಗೆ ಅಂಕಿತ ಬೀಳುವ ಮುನ್ನವೇ ಹಲವಾರು ರಾಜ್ಯಗಳಲ್ಲಿ ಖಾಸಗೀಕರಣಕ್ಕೆ ಪ್ರಸ್ಥಾವನೆಯನ್ನು ಹೋರಡಿಸಲಾಗಿದೆ. ಇದು ನಮ್ಮೆಲ್ಲರ ಹುಬ್ಬೇರಿಸುವಂತೆ ಮಾಡಿದೆ. ಇಂತಹ ಜನವಿರೋಧಿ ಕಾಯ್ದೆಗಳ ವಿರುದ್ದ ದೇಶಾದ್ಯಂತ ಹೋರಾಟಕ್ಕೆ ಸಜ್ಜಾಗಬೇಕಾಗಿದೆ. ಈ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳಲ್ಲೂ ವಿಚಾರ ಸಂಕಿರಣಗಳನ್ನು ಆಯೋಜಿಸುವುದರ ಮೂಲಕ ಜಾಗೃತಿ ಮೂಡಿಸುವ ಕಾರ್ಯವನ್ನು ಮಾಡಲಿದ್ದೇವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಲರಾಮ್‌, ಪ್ರಧಾನ ಕಾರ್ಯದರ್ಶಿ ಕವಿಪ್ರನಿ ನೌಕರರ ಸಂಘ, ಕರ್ನಾಟಕ ವಿದ್ಯುತ್‌ ಮಂಡಳಿ ನೌಕರರ ಸಂಘಗಳ ಒಕ್ಕೂಟ ಅಧ್ಯಕ್ಷ ಟಿ ಆರ್‌ ರಾಮಕೃಷ್ಣಯ್ಯ, ಕಾರ್ಯದರ್ಶಿ  ಟಿ ಎಂ ಶಿವಪ್ರಕಾಶ್‌ ಸೇರಿದಂತೆ ದೇಶದ ವಿವಿಧ ಭಾಗಗಳಿಂದ ಆಗಮಿಸಿದ್ದ ಪ್ರತಿನಿಧಿಗಳು ಹಾಗೂ ವಿದ್ಯುತ್‌ ಮಂಡಳಿಯ ಅಧಿಕಾರಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X