Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುತ್ತೂರು ಆರ್.ಟಿ.ಒ ಕಚೇರಿಯಲ್ಲಿ...

ಪುತ್ತೂರು ಆರ್.ಟಿ.ಒ ಕಚೇರಿಯಲ್ಲಿ ಕಿರುಕುಳ, ಶೋಷಣೆ ಮುಕ್ತ ಅಭಿಯಾನಕ್ಕೆ ಸಿದ್ಧತೆ: ಅಮಳ ರಾಮಚಂದ್ರ

ವಾರ್ತಾಭಾರತಿವಾರ್ತಾಭಾರತಿ23 Dec 2020 5:42 PM IST
share

ಪುತ್ತೂರು: ಪುತ್ತೂರು ಪ್ರಾದೇಶಿಕ ಸಾರಿಗೆ ಇಲಾಖೆಯ ಕಚೇರಿಯಲ್ಲಿ ಚಾಲನಾ ಪರೀಕ್ಷೆ ನಿಡುವ ಸಲುವಾಗಿ ಹೋದಾಗ ಆರ್.ಟಿ.ಒ ನೀಡಿದ ಕಿರುಕುಳದ ಕುರಿತು ಮೇಲಾಧಿಕಾರಿಗಳಿಗೆ ದೂರು ನೀಡಿದ ಬಳಿಕ ಪ್ರಕರಣವನ್ನು ಮುಕ್ತಾಯಗೊಳಿಸುವಂತೆ ಪುತ್ತೂರು ಆರ್.ಟಿ.ಒ ಸೇರಿದಂತೆ ಹಲವು ಕಡೆಗಳಿಂದ ಒತ್ತಡ ಬರುತ್ತಿದೆ. ಆದರೆ ನನ್ನಂತೆ ಸಾವಿರಾರು ಮಂದಿ ಸಂತ್ರಸ್ತರ ಪರವಾಗಿ ಮತ್ತು ಅವರ ಬೆಮಬಲದಿಂದ ಇದೀಗ ಶೋಷಣೆ ಮುಕ್ತ ಪುತ್ತೂರು ಅಭಿಯಾನ ನಡೆಸುವುದಾಗಿ ಸಾಮಾಜಿಕ ಕಾರ್ಯಕರ್ತ 'ಶೋಷಣೆ ಮುಕ್ತ ಅಭಿಯಾನ'ದ ಸದಸ್ಯ ಅಮಳ ರಾಮಚಂದ್ರ ಅವರು ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪುತ್ತೂರು ಆರ್.ಟಿ.ಒ  ಕಚೇರಿಯಲ್ಲಿ ನನಗೆ ಆದ ಅನ್ಯಾಯಕ್ಕೆ ಸಂಬಂಧಿಸಿ ನಾನು ಪತ್ರಿಕಾಗೋಷ್ಠಿ  ಮೂಲಕ ಹೇಳಿಕೊಂಡಿರುವ ವಿಚಾರದಿಂದ ಜನಸಾಮಾನ್ಯರಿಂದ ಅಭೂತ ಪೂರ್ವ ಬಂಬಲ ದೊರೆತಿದೆ. ಬಹುತೇಕ ಮಂದಿ ನಮಗೂ ಆರ್.ಟಿ.ಒ  ಕಚೇರಿಯಲ್ಲಿ ಅನ್ಯಾಯ ಆಗಿದೆ ಎಂದು ಹೇಳಿಕೊಂಡಿದ್ದಾರೆ. ಹಾಗಾಗಿ ನನ್ನ ವೈಯುಕ್ತಿಕ ಹೋರಾಟ ಇವತ್ತು ಜನಸಾಮಾನ್ಯರ ಅಭಿಯಾನವಾಗಿ ಮಾರ್ಪಟ್ಟಿದೆ. ಆದರೆ ಈ ನಡುವೆ ನನಗೆ ಅನೇಕ ಮಂದಿಯಿಂದ ಹೋರಾಟವನ್ನು ಹಿಂಪಡೆಯುವಂತೆ ಒತ್ತಡವೂ ಬಂದಿದೆ. ಇದರ ಜೊತೆಗೆ ಆರ್‍ಟಿಒ ಅವರೇ ಖುದ್ದು ನನಗೆ ಅಂಚೆ ರಿಜಿಸ್ಟರ್ ಪೋಸ್ಟ್ ಮಾಡಿ ನೀವು ಕಚೇರಿಗೆ ಖುದ್ದಾಗಿ ಭೇಟಿ ಮಾಡಿ ಪ್ರಕರಣವನ್ನು ಮುಕ್ತಾಯಗೊಳಿಸುವಂತೆ ಕೋರಿದ್ದಾರೆ. ಒಟ್ಟಿನಲ್ಲಿ ಮೇಲಾಧಿಕಾರಿಗಳಿಗೆ ದೂರು ನೀಡಿದ ಬಳಿಕ ನನ್ನ ಮೇಲೆ ವಿವಿಧ ಕಡೆಗಳಿಗಳಿಂದ ಒತ್ತಡ ಹೇರುವ ಪ್ರಯತ್ನ ಆಗುತ್ತಿದೆ. ಆದರೆ ನನ್ನ ಅಭಿಯಾನಕ್ಕೆ ಪುತ್ತೂರಿನ ಜನತೆ ನೀಡಿದ ಅಭೂತಪೂರ್ವ ಬೆಂಬಲ ನನ್ನ ಹೋರಾಟಕ್ಕೆ ಆನೆ ಬಲ ಬಂದಂತಾಗಿದೆ. ಪುತ್ತೂರಿನ ಮಹಾಜನತೆಯ ಪರವಾಗಿ ಈ ಪ್ರಕರಣಕ್ಕೊಂದು ತಾರ್ಕಿಕ ಅಂತ್ಯ ಸಿಗುವ ತನಕ ನನ್ನ ಅಭಿಯಾನ ಮುಂದುವರಿಯುತ್ತದೆ. ಒಬ್ಬ ಸಂತ್ರಸ್ತನಿಂದ ಆರಂಭವಾದ ಈ ಆಭಿಯಾನ ಈಗ ಸಾವಿರಾರು ಸಂತ್ರಸ್ತ ಜನರ ಅಭಿಯಾನವಾಗಿ ರೂಪುಗೊಂಡಿದೆ ಎಂದರು.

ಈ ಪ್ರಕರಣದಲ್ಲಿ ತೀರ್ಮಾನಗಳನ್ನು ತೆಗೆದುಕೊಳ್ಳಲು ಅಧಿಕಾರವಿರುವುದು ನನಗಲ್ಲ. ಬದಲಾಗಿ ಅದು ಪುತ್ತೂರಿನ ಮಹಾಜನತೆಗೆ ಸೇರಿದ್ದು ಎಂಬುದು ನನ್ನ ತೀರ್ಮಾನವಾಗಿದೆ. ಆದ್ದರಿಂದ ಇದು ಜನತೆಯ ಅಭಿಯಾನ. ಈ ಅಭಿಯಾನದ ಮುಂದಿನ ದಾರಿಯನ್ನು ಪುತ್ತೂರಿನ ಮಹಾಜನತೆಯೇ ನಿರ್ದೇಶಿಸಬೇಕೆಂದು ಪ್ರಾರ್ಥಿಸುತ್ತೇನೆ ಎಂದು ಅವರು ಹೇಳಿದರು. 

ಅತೀ ಶೀಘ್ರ ಸಾರಿಗೆ ಅದಾಲತ್ ಆಗಬೇಕು

ಶೋಷಣೆ ಮುಕ್ತ ಪುತ್ತೂರು ಅಭಿಯಾನದ ಸಂಚಾಲಕ ಡಾ. ರಾಘವೇಂದ್ರ ಪ್ರಸಾದ್ ಬಂಗಾರಡ್ಕ ಅವರು ಮಾತನಾಡಿ ಪ್ರಾದೇಶಿಕ ಸಾರಿಗೆ ಇಲಾಖೆಯಲ್ಲಿ ಅತಿ ಶೀಘ್ರವಾಗಿ ಸಾರ್ವಜನಿಕರು ಎಲ್ಲೂ ಪಾಲ್ಗೊಳ್ಳುವಂತೆ ಸಾರಿಗೆ ಅದಾಲತ್ ನಡೆಸಬೇಕು. ಬಾಡಿ ಕ್ಯಾಮರಾ ಅಳವಡಿಸಬೇಕು. ಆರ್‍ಟಿಒದಲ್ಲಿ ನಡೆಯುವ ಎಲ್ಲಾ ಪರೀಕ್ಷೆಗಳ ವೀಡಿಯೋ ಚಿತ್ರೀಕರಣ ಮಾಡಬೇಕು. ಕಚೇರಿಯ ಎಲ್ಲಾ ದಾಖಲೆಗಳು ಡಿಜಿಟಲೀಕರಣ ಮಾಡಬೇಕು. ಜನಸಾಮಾನ್ಯರೊಂದಿಗೆ ಅಧಿಕಾರಿಗಳು ಸೌಜನ್ಯವಾಗಿ ಮಾತನಾಡಬೇಕು. ಏಜೆಂಟು ವ್ಯವಹಾರ ನಿಲ್ಲಿಸಬೆಕು ಎಂದು ಅವರು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಅಭಿಯಾನದ ಸದಸ್ಯ ಜಾನ್ ಸಿರಿಲ್ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X