Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು-ಕಾಶ್ಮೀರ ಡಿಡಿಸಿ ಚುನಾವಣೆ :278 ...

ಜಮ್ಮು-ಕಾಶ್ಮೀರ ಡಿಡಿಸಿ ಚುನಾವಣೆ :278 ಸ್ಥಾನಗಳಲ್ಲಿ ಕೇವಲ 26 ಸ್ಥಾನಗಳಿಸಿದ ಕಾಂಗ್ರೆಸ್

ಗುಪ್ಕರ್ ಮೈತ್ರಿಕೂಟಕ್ಕೆ ಬೆಂಬಲದ ಸುಳಿವು

ವಾರ್ತಾಭಾರತಿವಾರ್ತಾಭಾರತಿ23 Dec 2020 7:47 PM IST
share
ಜಮ್ಮು-ಕಾಶ್ಮೀರ ಡಿಡಿಸಿ ಚುನಾವಣೆ :278  ಸ್ಥಾನಗಳಲ್ಲಿ ಕೇವಲ 26 ಸ್ಥಾನಗಳಿಸಿದ ಕಾಂಗ್ರೆಸ್

ಹೊಸದಿಲ್ಲಿ,ಡಿ.23: ಜಮ್ಮು-ಕಾಶ್ಮೀರದಲ್ಲಿ ನಡೆದ ಮೊಟ್ಟಮೊದಲ ಜಿಲ್ಲಾ ಅಭಿವೃದ್ಧಿ ಮಂಡಳಿ (ಡಿಡಿಸಿ) ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಕಳಪೆ ಸಾಧನೆಯನ್ನು ಪ್ರದರ್ಶಿಸಿದೆ. ಫಲಿತಾಂಶ ಪ್ರಕಟಗೊಂಡಿರುವ 278 ಸ್ಥಾನಗಳ ಪೈಕಿ ಕೇವಲ 26 ಸ್ಥಾನಗಳನ್ನು ಗೆದ್ದಿರುವ ಅದು ಬಿಜೆಪಿ,ನ್ಯಾಷನಲ್ ಕಾನ್ಫರೆನ್ಸ್ ಮತ್ತು ಪಿಡಿಪಿ ಸೇರಿದಂತೆ ಎಲ್ಲ ಪ್ರಮುಖ ಪಕ್ಷಗಳಿಗಿಂತ ಹಿಂದುಳಿದಿದೆ. ತಾನು ಗುಪ್ಕರ್ ಮೈತ್ರಿಕೂಟವನ್ನು ಬೆಂಬಲಿಸುವ ಸುಳಿವನ್ನು ಕಾಂಗ್ರೆಸ್ ನೀಡಿದೆ. ಫಾರೂಕ್ ಅಬ್ದುಲ್ಲಾ ನೇತೃತ್ವದ ಏಳು ಪಕ್ಷಗಳ ಗುಪ್ಕರ್ ಮೈತ್ರಿಕೂಟ ಅಥವಾ ಗುಪ್ಕರ್ ಘೋಷಣೆಗಾಗಿ ಜನತಾ ಮೈತ್ರಿಕೂಟ (ಪಿಎಜಿಡಿ)ವು 278 ಸ್ಥಾನಗಳ ಪೈಕಿ 110 ಸ್ಥಾನಗಳನ್ನು ಗೆದ್ದುಕೊಂಡಿದೆ.

ಕಾಶ್ಮೀರ ಕಣಿವೆಯಲ್ಲಿ ಮೂರು ಸ್ಥಾನಗಳು ಸೇರಿದಂತೆ 75 ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿಯು ಏಕೈಕ ಅತಿದೊಡ್ಡ ಪಕ್ಷವಾಗಿ ಮೂಡಿಬಂದಿದೆ. ಗುಪ್ಕರ್ ಮೈತ್ರಿಕೂಟದ ಪಾಲುದಾರರ ಪೈಕಿ ಎನ್‌ಸಿ 67,ಪಿಡಿಪಿ 27,ಪೀಪಲ್ಸ್ ಕಾನ್ಫರೆನ್ಸ್ 8,ಜಮ್ಮು-ಕಾಶ್ಮೀರ ಪೀಪಲ್ಸ್ ಮೂವ್‌ಮೆಂಟ್ 3 ಮತ್ತು ಸಿಪಿಎಂ 5 ಸ್ಥಾನಗಳಲ್ಲಿ ಗೆಲುವು ಸಾಧಿಸಿವೆ.

ಚುನಾವಣೆಗೆ ತಾವು ಸಿದ್ಧರಾಗಿರಲಿಲ್ಲ ಎಂದು ಕಾಂಗ್ರೆಸ್ ನಾಯಕರು ಸಮಜಾಯಿಷಿ ನೀಡಿದರೆ,370ನೇ ವಿಧಿಯ ರದ್ದತಿಯಂತಹ ತುರ್ತು ವಿಷಯಗಳ ಕುರಿತು ಕಾಂಗ್ರೆಸ್ ಪಕ್ಷದ ಅಸ್ಪಷ್ಟ ನಿಲುವು ಕೂಡ ಅದರ ಪತನಕ್ಕೆ ಕಾರಣವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಹೇಳಿದ್ದಾರೆ.

ಕಾಂಗ್ರೆಸ್ ಪಕ್ಷದ ಕೆಲವು ಘಟಾನುಘಟಿಗಳು ಸೋಲನ್ನು ಅನುಭವಿಸಿದ್ದಾರೆ. ಜಮ್ಮು-ಕಾಶ್ಮೀರ ಕಾಂಗ್ರೆಸ್ ಅಧ್ಯಕ್ಷ ಗುಲಾಂ ಅಹ್ಮದ್ ಮಿರ್ ಅವರ ಪುತ್ರ ನಸೀರ್ ಅಹ್ಮದ್ ಮಿರ್ ಅವರು ಅನಂತನಾಗ್ ಜಿಲ್ಲೆಯ ವೆರಿನಾಗ್ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಪೀರ್ ಶಾಬಾಝ್ ಅಹ್ಮದ್ ಅವರಿಂದ ಪರಾಭವಗೊಂಡಿದ್ದಾರೆ.

‘ಚುನಾವಣೆಗೆ ಪಕ್ಷವು ಸನ್ನದ್ಧವಾಗಿರಲಿಲ್ಲ. ಗುಪ್ಕರ್ ಮೈತ್ರಿಕೂಟದ ಜೊತೆಗೆ ಸ್ಥಾನ ಹೊಂದಾಣಿಕೆ ಮಾತುಕತೆ ತುಂಬ ಸಮಯವನ್ನು ತೆಗೆದುಕೊಂಡಿತ್ತು. ನಾವು ತುಂಬ ಸಮಯವನ್ನು ವ್ಯರ್ಥ ಮಾಡಿದೆವು ಮತ್ತು ಚುನಾವಣಾ ಸಿದ್ಧತೆಗೆ ನಮ್ಮ ಬಳಿ ಹೆಚ್ಚಿನ ಸಮಯವಿರಲಿಲ್ಲ’ಎಂದು ಜಮ್ಮು-ಕಾಶ್ಮೀರ ಕಾಂಗ್ರೆಸ್‌ನ ಉಪಾಧ್ಯಕ್ಷ ಗುಲಾಂ ನಬಿ ಮೋಂಗಾ ಅವರು ಸುದ್ದಿಸಂಸ್ಥೆಗೆ ತಿಳಿಸಿದರು.

ಕಾಂಗ್ರೆಸ್ ಗುಪ್ಕರ್ ಮೈತ್ರಿಕೂಟದ ಭಾಗವಾಗಿರುವುದಿಲ್ಲ ಎಂದು ಪಕ್ಷದ ಮುಖ್ಯ ವಕ್ತಾರ ರಣದೀಪ ಸುರ್ಜೆವಾಲಾ ಅವರು ನವಂಬರ್‌ನಲ್ಲಿ ಘೋಷಿಸುವವರೆಗೆ ತಾನು ಮೈತಿಕೂಟವನ್ನು ಸೇರಬೇಕೇ ಎಂಬ ಬಗ್ಗೆ ಕಾಂಗ್ರೆಸ್‌ಗೆ ತುಂಬ ಸಮಯ ಸ್ಪಷ್ಟತೆಯಿರ ಲಿಲ್ಲ. ಸುರ್ಜೆವಾಲಾ ಪ್ರಕಟಣೆಯ ಬಳಿಕ ಎನ್‌ಸಿ ಕಾಂಗ್ರೆಸ್‌ನೊಂದಿಗೆ ಸ್ಥಾನ ಹೊಂದಾಣಿಕೆಯ ಎಲ್ಲ ಮಾತುಕತೆಗಳನ್ನು ರದ್ದುಗೊಳಿಸಿತ್ತು. ಆದರೆ ನಂತರ ಮೊದಲ ಎರಡು ಹಂತಗಳ ಚುನಾವಣೆಗಾಗಿ ಕಾಂಗ್ರೆಸ್ ಮತ್ತು ಮೈತ್ರಿಕೂಟ ಏನೋ ಒಡಂಬಡಿಕೆ ಮಾಡಿಕೊಂಡಿರುವಂತೆ ಕಂಡು ಬಂದಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X