Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಚೀನಾದೊಂದಿಗಿನ ಬಿಕ್ಕಟ್ಟಿನ ನಡುವೆ ‘ಫೈರ್...

ಚೀನಾದೊಂದಿಗಿನ ಬಿಕ್ಕಟ್ಟಿನ ನಡುವೆ ‘ಫೈರ್ ಆ್ಯಂಡ್ ಫ್ಯೂರಿ ಕಾರ್ಪ್ಸ್’ ಅನ್ನು ಭೇಟಿಯಾದ ಸೇನಾ ವರಿಷ್ಠ

ವಾರ್ತಾಭಾರತಿವಾರ್ತಾಭಾರತಿ23 Dec 2020 9:59 PM IST
share
ಚೀನಾದೊಂದಿಗಿನ ಬಿಕ್ಕಟ್ಟಿನ ನಡುವೆ ‘ಫೈರ್ ಆ್ಯಂಡ್ ಫ್ಯೂರಿ ಕಾರ್ಪ್ಸ್’ ಅನ್ನು ಭೇಟಿಯಾದ ಸೇನಾ ವರಿಷ್ಠ

ಹೊಸದಿಲ್ಲಿ, ಡಿ. 23: ಸೇನಾ ವರಿಷ್ಠ ಜನರಲ್ ಎಂ.ಎಂ. ನರವಣೆ ಬುಧವಾರ ಪೂರ್ವ ಲಡಾಖ್‌ನ ಎತ್ತರದ ವಿವಿಧ ಮುಂಚೂಣಿ ಪ್ರದೇಶಕ್ಕೆ ಭೇಟಿ ನೀಡಿದರು ಹಾಗೂ ಕಳೆದ 7 ತಿಂಗಳಿಂದ ಚೀನಾದೊಂದಿಗಿನ ಗಡಿ ಬಿಕ್ಕಟ್ಟು ಇರುವ ಈ ವಲಯದಲ್ಲಿ ಸೇನಾ ಸಿದ್ಧತೆಯನ್ನು ಪರಿಶೀಲಿಸಿದರು.

ಜನರಲ್ ನರವಣೆ ಅವರು ರೆಚಿನ್ ಲಾ ಸೇರಿದಂತೆ ವಿವಿಧ ಮುಂಚೂಣಿ ಪ್ರದೇಶಗಳಿಗೆ ಭೇಟಿ ನೀಡಿದರು ಹಾಗೂ ಲಡಾಖ್‌ನ ವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿನ ಪರಿಸ್ಥಿತಿಯ ನೇರ ಮೌಲ್ಯಮಾಪನ ಮಾಡಿದರು ಎಂದು ಸೇನಾ ಮೂಲಗಳು ತಿಳಿಸಿವೆ. ಮೈನಸ್ 0 ಉಷ್ಣಾಂಶ ಇರುವ ಪೂರ್ವ ಲಡಾಖ್‌ನ ವಿವಿಧ ಪರ್ವತಮಯ ಪ್ರದೇಶಗಳಲ್ಲಿ ಯುದ್ಧಕ್ಕೆ ಸನ್ನದ್ಧವಾಗಿರುವ ಸುಮಾರು 50 ಸಾವಿರ ಯೋಧರನ್ನು ನಿಯೋಜಿಸಲಾಗಿದೆ.

ಚೀನಾ ಕೂಡ ಇದೇ ಸಂಖ್ಯೆಯಲ್ಲಿ ಯೋಧರನ್ನು ನಿಯೋಜಿಸಿದೆ ಎಂದು ಅದು ತಿಳಿಸಿದೆ. ‘ಫಯರ್ ಆ್ಯಂಡ್ ಫ್ಯೂರಿ (ಬೆಂಕಿ ಮತ್ತು ಆಕ್ರೋಶ) ಕಾರ್ಪ್ಸ್’ ಎಂದೇ ಜನಪ್ರಿಯವಾಗಿರುವ ಲೇಹ್ ಮೂಲದ 14 ಕಾರ್ಪ್ಸ್‌ನ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಪಿಜಿಕೆ ಮೆನನ್ ಪೂರ್ವ ಲಡಾಖ್ ‌ನ ಪರಿಸ್ಥಿತಿಯ ವಿವಿಧ ಆಯಾಮಗಳ ಬಗ್ಗೆ ಸೇನಾ ವರಿಷ್ಠರಿಗೆ ವಿವರಿಸಿದರು. ತೀವ್ರ ಚಳಿ ಇರುವ ಈ ವಲಯದಲ್ಲಿ ತಳಮಟ್ಟದ ಪರಿಸ್ಥಿತಿ ಪರಿಶೀಲಿಸುವ ಉದ್ದೇಶದೊಂದಿಗೆ ಒಂದು ದಿನದ ಭೇಟಿಗಾಗಿ ಜನರಲ್ ನರವಣೆ ಅವರು ಲಡಾಖ್‌ಗೆ ಬೆಳಗ್ಗೆ 8.30ಕ್ಕೆ ತಲುಪಿದರು ಎಂದು ಮೂಲಗಳು ತಿಳಿಸಿವೆ. ‘‘ವಾಸ್ತವ ನಿಯಂತ್ರಣ ರೇಖೆಯ ಪರಿಸ್ಥಿತಿಯನ್ನು ನೇರವಾಗಿ ಮೌಲ್ಯಮಾಪನ ಮಾಡಲು ರೆಚಿನ್ ಲಾ ಸೇರಿದಂತೆ ‘ಫಯರ್ ಆ್ಯಂಡ್ ಫರಿ ಕಾರ್ಪ್ಸ್’ನ ಮುಂಚೂಣಿ ಪ್ರದೇಶಕ್ಕೆ ಸೇನಾ ವರಿಷ್ಠ ಜನರಲ್ ಎಂ.ಎಂ. ನರವಣೆ ಭೇಟಿ ನೀಡಿದರು. ನಾಲ್ಕು ಪಡೆಗಳು ಕಾರ್ಯಾಚರಣೆಗೆ ಸಿದ್ಧವಾಗಿರುವ ಬಗ್ಗೆ ಅವರಿಗೆ ‘ಫಯರ್ ಆ್ಯಂಡ್ ಫ್ಯೂರಿ ಕಾರ್ಪ್ಸ್’ನ ಕಮಾಂಡರ್ ಹಾಗೂ ಸ್ಥಳೀಯ ಕಮಾಂಡರ್‌ಗಳು ಮಾಹಿತಿ ನೀಡಿದರು’’

ಮುಂಚೂಣಿ ಪ್ರದೇಶದಲ್ಲಿ ನಿಯೋಜಿತ ಪಡೆಗಳೊಂದಿಗೆ ಜನರಲ್ ನರವಣೆ ಅವರು ಸಂವಹನ ನಡೆಸಿದರು ಹಾಗೂ ಮೊದಲಿನ ಉತ್ಸಾಹದಿಂದ ಕಾರ್ಯಾಚರಣೆ ಮುಂದುವರಿಸುವಂತೆ ಅವರಿಗೆ ಸೂಚಿಸಿದರು ಎಂದು ಸೇನೆ ತಿಳಿಸಿದೆ. ಕ್ರಿಸ್ಮಸ್ ಹಿನ್ನೆಲೆಯಲ್ಲಿ ಅವರು ಯೋಧರಿಗೆ ಸಿಹಿ ತಿಂಡಿ ಹಾಗೂ ಕೇಕ್‌ಗಳನ್ನು ವಿತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X