Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬ್ಯಾಟಿಂಗ್‌ನಲ್ಲಿ ರಾಹುಲ್ ಸ್ಥಾನ ಸ್ಥಿರ,...

ಬ್ಯಾಟಿಂಗ್‌ನಲ್ಲಿ ರಾಹುಲ್ ಸ್ಥಾನ ಸ್ಥಿರ, ಕೊಹ್ಲಿಗೆ 7ನೇ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ23 Dec 2020 11:47 PM IST
share
ಬ್ಯಾಟಿಂಗ್‌ನಲ್ಲಿ ರಾಹುಲ್ ಸ್ಥಾನ ಸ್ಥಿರ, ಕೊಹ್ಲಿಗೆ 7ನೇ ಸ್ಥಾನ

ಐಸಿಸಿ ಟ್ವೆಂಟಿ-20 ಬ್ಯಾಟ್ಸ್‌ಮನ್‌ಗಳ ರ್ಯಾಂಕಿಂಗ್‌ನಲ್ಲಿ ವಿಕೆಟ್ ಕೀಪರ್- ಬ್ಯಾಟ್ಸ್‌ಮನ್ ಲೋಕೇಶ್ ರಾಹುಲ್ ಮೂರನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಏಳನೇ ಸ್ಥಾನಕ್ಕೆ ಏರಿದ್ದಾರೆ.

ವಾಸ್ತವವಾಗಿ  ರಾಹುಲ್ ಮತ್ತು ಕೊಹ್ಲಿ ಇವರನ್ನು ಹೊರತುಪಡಿಸಿ ಬ್ಯಾಟ್ಸ್ ಮನ್, ಬೌಲರ್‌ಗಳು ಮತ್ತು ಆಲ್‌ರೌಂಡರ್‌ಗಳ ವಿಭಾಗಗಳಲ್ಲಿ ಆಟಗಾರರ ಶ್ರೇಯಾಂಕದ ಅಗ್ರ -10 ಪಟ್ಟಿಯಲ್ಲಿ ಭಾರತದ ಯಾರಿಗೂ ಸ್ಥಾನ ಪಡೆಯಲು ಸಾಧ್ಯವಾಗಿಲ್ಲ.

816 ಅಂಕಗಳೊಂದಿಗೆ ರಾಹುಲ್ ಈ ಪಟ್ಟಿಯಲ್ಲಿ ಡೇವಿಡ್ ಮಲನ್ (915) ಮತ್ತು ಬಾಬರ್ ಆಝಮ್ (820) ಹಿಂದೆ ಇದ್ದರೆ, ಕೊಹ್ಲಿ 697 ಅಂಕಗಳನ್ನು ಹೊಂದಿದ್ದಾರೆ.

ಎಲ್ಲಾ ಮೂರು ಸ್ವರೂಪಗಳಲ್ಲಿ ಕೊಹ್ಲಿ ಟಾಪ್ -10 ರೊಳಗೆ ಸ್ಥಾನ ಪಡೆದಿದ್ದಾರೆ. ಏಕದಿನ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನದಲ್ಲಿ ಮತ್ತು ಟೆಸ್ಟ್ ಬಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.

ನ್ಯೂಝಿಲ್ಯಾಂಡ್‌ನ ಓಪನರ್ ಟಿಮ್ ಸೀಫರ್ಟ್ ಮತ್ತು ವೇಗದ ಬೌಲರ್ ಟಿಮ್ ಸೌಥಿ ಪಾಕಿಸ್ತಾನ ವಿರುದ್ಧದ ಸರಣಿಯಲ್ಲಿ 2-1 ಗೆಲುವಿನ ಬಳಿಕ ವೃತ್ತಿಜೀವನದ ಅತ್ಯುತ್ತಮ ಸ್ಥಾನಗಳನ್ನು ಗಳಿಸಿದ್ದಾರೆ.

ತವರು ಸರಣಿಯಲ್ಲಿ ಉತ್ತಮ ರನ್ ಗಳಿಸಿದ ನಂತರ ಸೀಫರ್ಟ್ ವೃತ್ತಿಜೀವನದ ಅತ್ಯುತ್ತಮ ಒಂಬತ್ತನೇ ಸ್ಥಾನಕ್ಕೆ ತಲುಪಿದ್ದಾರೆ. ಸೀಫರ್ಟ್ 176 ರನ್ ಗಳಿಸಿದ್ದರು. ಸೌಥಿ ಆರು ವಿಕೆಟ್‌ಗಳನ್ನು ಪಡೆದು ಏಳನೇ ಸ್ಥಾನಕ್ಕೆ ಏರಿದ್ದಾರೆ.

ಸೀಫರ್ಟ್ ಹ್ಯಾಮಿಲ್ಟನ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ 63 ಎಸೆತಗಳಲ್ಲಿ ಔಟಾಗದೆ 84 ರನ್ ಗಳಿಸಿದ್ದ ಸೀಫರ್ಟ್ ಈ ವರ್ಷದ ಆಗಸ್ಟ್‌ನಲ್ಲಿ 32ನೇ ಶ್ರೇಯಾಂಕವನ್ನು ಹೊಂದಿದ್ದರು.

ಸೌಥಿ ಸರಣಿಯಲ್ಲಿ 6 ವಿಕೆಟ್ ಪಡೆದಿದ್ದರು. ಈ ಪೈಕಿ 4 ವಿಕೆಟ್‌ಗಳನ್ನು ಎರಡನೇ ಪಂದ್ಯದಲ್ಲಿ ಪಡೆದಿದ್ದರು. ಸೌಥಿ ತಮ್ಮ ವೃತ್ತಿಜೀವನದ ಅವಧಿಯಲ್ಲಿ ಎಲ್ಲಾ ಮೂರು ಸ್ವರೂಪಗಳಲ್ಲಿ ಅಗ್ರ 10 ಸ್ಥಾನಗಳನ್ನು ಗಳಿಸಿದ್ದಾರೆ, ಟೆಸ್ಟ್‌ನಲ್ಲಿ ನಾಲ್ಕನೇ ಮತ್ತು ಏಕದಿನ ಪಂದ್ಯಗಳಲ್ಲಿ ಒಂಬತ್ತನೇ ಸ್ಥಾನದಲ್ಲಿದ್ದಾರೆ.

 ಟ್ವೆಂಟಿ-20 ಬೌಲರ್ ಮತ್ತು ಆಲ್‌ರೌಂಡರ್‌ಗಳ ಅಗ್ರ ಶ್ರೇಯಾಂಕವನ್ನು ಕ್ರಮವಾಗಿ ಅಫ್ಘಾನಿಸ್ತಾನ ಜೋಡಿ ರಶೀದ್ ಖಾನ್ ಮತ್ತು ಮುಹಮ್ಮದ್ ನಬಿ ಪಡೆದಿದ್ದಾರೆ.

ಐಸಿಸಿ ಪುರುಷರ ಟ್ವೆಂಟಿ-20 ತಂಡ ಶ್ರೇಯಾಂಕದಲ್ಲಿ ಪಾಕಿಸ್ತಾನ ಮೂರು ಅಂಕಗಳನ್ನು ಕಳೆದುಕೊಂಡಿದೆ ಮತ್ತು ನ್ಯೂಝಿಲ್ಯಾಂಡ್ ಮೂರು ಅಂಕಗಳನ್ನು ಗಳಿಸಿದೆ. ಈ ಎರಡೂ ತಂಡಗಳು ಕ್ರಮವಾಗಿ ನಾಲ್ಕನೇ ಮತ್ತು ಆರನೇ ಸ್ಥಾನವನ್ನು ಉಳಿಸಿಕೊಂಡಿದೆ.

275 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಇಂಗ್ಲೆಂಡ್ ತಂಡ ರ್ಯಾಂಕಿಂಗ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯ (272) ಮತ್ತು ಭಾರತ (268) ನಂತರದ ಸ್ಥಾನದಲ್ಲಿವೆ.

ವಾರ್ನರ್ ಎರಡನೇ ಟೆಸ್ಟ್‌ಗೂ ಅಲಭ್ಯ

ಭಾರತ ವಿರುದ್ಧದ ಏಕದಿನ ಸರಣಿಯಲ್ಲಿ ಗಾಯಗೊಂಡಿರುವ ಡೇವಿಡ್ ವಾರ್ನರ್ ಸಂಪೂರ್ಣವಾಗಿ ಚೇತರಿಸಿಕೊಂಡಿಲ್ಲ. ಈ ಕಾರಣದಿಂದಾಗಿ ಎರಡನೇ ಟೆಸ್ಟ್ ಪಂದ್ಯಕ್ಕೂ ಲಭ್ಯರಿಲ್ಲ.

 ಭಾರತ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಡೇವಿಡ್ ವಾರ್ನರ್ ಮತ್ತು ಸೀನ್ ಅಬಾಟ್ ಮತ್ತೆ ಆಸ್ಟ್ರೇಲಿಯ ಟೆಸ್ಟ್ ತಂಡಕ್ಕೆ ಸೇರಲಿದ್ದಾರೆ.

ಬಾಕ್ಸಿಂಗ್ ಡೇ ಟೆಸ್ಟ್‌ಗೆ ಹೆಚ್ಚುವರಿ ಆಟಗಾರರನ್ನು ಸೇರಿಸಿಕೊಳ್ಳದೆ ಮೊದಲ ಪಂದ್ಯದಲ್ಲಿ ಆಡಿರುವ ಆಟಗಾರರನ್ನೇ ಮುಂದುವರಿಸಲು ಆಸ್ಟ್ರೇಲಿಯ ತೀರ್ಮಾನಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X