Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಾರುಕಟ್ಟೆಗೆ ಕೊರೋನ ಮಾರ್ಗಸೂಚಿ: ಮಾಸ್ಕ್...

ಮಾರುಕಟ್ಟೆಗೆ ಕೊರೋನ ಮಾರ್ಗಸೂಚಿ: ಮಾಸ್ಕ್ ಕಡ್ಡಾಯ, ಗ್ರಾಹಕರು ಅಂತರ ಕಾಯ್ದುಕೊಳ್ಳಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ23 Dec 2020 11:52 PM IST
share

ಬೆಂಗಳೂರು, ಡಿ.23: ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುವ ಭೀತಿಯಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲ ವಾಣಿಜ್ಯ ಮಳಿಗೆಗಳು ಆರು ಅಡಿ ಅಂತರಗಳಲ್ಲಿ ಕಡ್ಡಾಯವಾಗಿ ಚೌಕಾಕಾರ ಅಥವಾ ವೃತ್ತಾಕಾರದ ಗುರುತುಗಳನ್ನು ಹಾಕುವುದು, ಮಾಸ್ಕ್ ಪಾಲಿಸುವುದು, ಗ್ರಾಹಕರು ಅಂತರ ಕಾಯ್ದುಕೊಳ್ಳುವಂತೆ ಕಾಪಾಡಿಕೊಳ್ಳಬೇಕೆಂದು ಆರೋಗ್ಯ ಇಲಾಖೆ ಸೂಚಿಸಿದೆ.

ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಇಲಾಖೆಯು, ಮಾರುಕಟ್ಟೆಗಳಲ್ಲಿ ಸೋಂಕು ಹರಡುವಿಕೆ ತಡೆಗೆ ಅನುಸರಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ತಿಳಿಸಿದೆ. ಹಿರಿಯ ನಾಗರಿಕರು, ಗರ್ಭಿಣಿ ಮಹಿಳೆಯರು ಮತ್ತು ಮಕ್ಕಳು ಅಗತ್ಯವಿರುವ ಸಂದರ್ಭಗಳಲ್ಲಿ ಹೊರತುಪಡಿಸಿ ಬೇರೆ ಸಂದರ್ಭಗಳಲ್ಲಿ ಮಾರುಕಟ್ಟೆಗಳಿಗೆ ಭೇಟಿ ನೀಡುವುದರ ಬಗ್ಗೆ ಮಾರ್ಗದರ್ಶನ ನೀಡಲಾಗಿದೆ. ಆರು ಅಡಿಗಳ ಭೌತಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಕೈಯನ್ನು ಸ್ವಚ್ಛಗೊಳಿಸುವುದು ಉತ್ತೇಜಿಸಬೇಕಿದೆ ಎಂದು ತಿಳಿಸಲಾಗಿದೆ.

ದೈನಂದಿನ ಚಟುವಟಿಕೆ ಪ್ರಾರಂಭಿಸುವ ಮುನ್ನ ಶೇ. 1ರಷ್ಟು ಪ್ರಮಾಣದಲ್ಲಿ ಸೋಡಿಯಂ ನೈಟ್ರೇಟ್ ದ್ರಾವಣದಿಂದ ಅಥವಾ ಗ್ರಹ ಬಳಕೆಯ ಮಾರ್ಜಕದಿಂದ ಮಳಿಗೆಗಳನ್ನು ಸ್ವಚ್ಛಪಡಿಸಲು ಮಾಲಕರು ಕ್ರಮವಹಿಸಬೇಕು. ಪ್ರವೇಶ ದ್ವಾರದಲ್ಲಿಯೇ ಸೋಂಕು ನಿವಾರಕ ದ್ರಾವಣ (ಸ್ಯಾನಿಟೈಸರ್) ಇಡಬೇಕು. ನಿಯಮಿತ ನಿಗಾವಣೆಯನ್ನು ಮಾಡಲು ಮಾರುಕಟ್ಟೆ ಮಾಲಕರ ಸಂಘಟನೆಗಳು ಉಪ ಸಮಿತಿಗಳನ್ನು ರಚಿಸಬೇಕು. ಮಾರುಕಟ್ಟೆಗಳ ಆಗಮನ ದ್ವಾರ ಮತ್ತು ಇನ್ನಿತರ ಪ್ರವೇಶ ದ್ವಾರದಲ್ಲಿ ಸಾಮೂಹಿಕ ಥರ್ಮಲ್ ಸ್ಕ್ಯಾನಿಂಗ್ ವ್ಯವಸ್ಥೆಯಾಗಬೇಕು ಎಂದು ತಿಳಿಸಲಾಗಿದೆ.

ನಿಯಮ ಪಾಲಿಸದಿದ್ದಲ್ಲಿ ದಂಡ: ಮುಖಗವಸನ್ನು ಖರೀದಿಸಲು ಸಾಧ್ಯವಾಗದವರಿಗೆ ಉಚಿತವಾಗಿ ಮುಖಗವಸುಗಳನ್ನು ನೀಡುವುದು ಮತ್ತು ಅದನ್ನು ಬಳಸಲು ಮಾಲಕರು ಉತ್ತೇಜಿಸಬೇಕು. ದೈಹಿಕ ಅಂತರ ಮಾನದಂಡಗಳನ್ನು ಪಾಲನೆ ಮಾಡದಿರುವವರಿಗೆ ಹಾಗೂ ಮಾಸ್ಕ್ ಹಾಕದವರಿಗೆ ದಂಡ ವಿಧಿಸಲಾಗುವುದು. ದಿನಬಿಟ್ಟು ದಿನ ಮಾರುಕಟ್ಟೆ, ಮಳಿಗೆ ತೆರೆಯಲಿರುವ ಕ್ರಮಗಳನ್ನು ಆಲೋಚಿಸಬೇಕು ಎಂದು ಸುತ್ತೋಲೆಯಲ್ಲಿ ಸೇರಿದ್ದು, ನಿಯಮಗಳು ಪಾಲನೆಯಾಗದಿದ್ದಲ್ಲಿ ಮಾಲಕರಿಗೆ ದಂಡ ವಿಧಿಸಲಾಗುವುದು. ಹೆಚ್ಚಿನ ಪ್ರಕರಣಗಳು ವರದಿಯಾದಲ್ಲಿ ಮಾರುಕಟ್ಟೆ ಮುಚ್ಚಲಾಗುವುದು ಎಂದು ಎಚ್ಚರಿಸಲಾಗಿದೆ.

ಸಾರ್ವಜನಿಕವಾಗಿ ಜನದಟ್ಟಣೆ ಆಗದಂತೆ ನೋಡಿಕೊಳ್ಳಲು ಮಾರ್ಷಲ್‍ಗಳು, ಗೃಹರಕ್ಷಕ ದಳಗಳು ಮತ್ತು ಸ್ವಯಂ ಸೇವಕರ ಸೇವೆ ಬಳಸಿಕೊಳ್ಳಬೇಕು. ದೈನಂದಿನ ಬಳಕೆಯ ವಸ್ತುಗಳ ಖರೀದಿಗೆ ಆನ್‍ಲೈನ್ ವ್ಯವಸ್ಥೆಯನ್ನು ಉತ್ತೇಜಿಸಬೇಕು. ಸರಕಾರದ ಮಾರ್ಗಸೂಚಿಗಳನ್ನು ಮಾಲಕರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X