Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಭಾರತ ಕ್ರಿಕೆಟ್ ತಂಡದಲ್ಲಿ ಒಬ್ಬೊಬ್ಬರಿಗೆ...

ಭಾರತ ಕ್ರಿಕೆಟ್ ತಂಡದಲ್ಲಿ ಒಬ್ಬೊಬ್ಬರಿಗೆ ಒಂದೊಂದು ನಿಯಮ: ಗವಾಸ್ಕರ್ ಆರೋಪ

"ನನ್ನ ಮೇಲೆ ನಂಬಿಕೆ ಇಲ್ಲದಿದ್ದರೆ ಅಶ್ವಿನ್, ನಟರಾಜನ್‌ರನ್ನು ಕೇಳಿ"

ವಾರ್ತಾಭಾರತಿವಾರ್ತಾಭಾರತಿ24 Dec 2020 1:12 PM IST
share
ಭಾರತ ಕ್ರಿಕೆಟ್ ತಂಡದಲ್ಲಿ ಒಬ್ಬೊಬ್ಬರಿಗೆ ಒಂದೊಂದು ನಿಯಮ: ಗವಾಸ್ಕರ್ ಆರೋಪ

ಹೊಸದಿಲ್ಲಿ: ಭಾರತೀಯ ಕ್ರಿಕೆಟ್ ಆಡಳಿತದ ವಿರುದ್ಧ ಹರಿಹಾಯ್ದ ಭಾರತದ ಮಾಜಿ ನಾಯಕ ಹಾಗೂ ಬ್ಯಾಟಿಂಗ್ ದಂತಕತೆ ಸುನೀಲ್ ಗವಾಸ್ಕರ್, ಭಾರತದ ಡ್ರೆಸ್ಸಿಂಗ್ ರೂಮ್‌ನಲ್ಲಿ ಒಬ್ಬೊಬ್ಬರಿಗೆ ಒಂದೊಂದು ನಿಯಮವಿದೆ ಎಂದರು. ಎಡಗೈ ವೇಗದ ಬೌಲರ್ ಟಿ.ನಟರಾಜನ್ ಅವರ ಉದಾಹರಣೆ ನೀಡಿದ ಗವಾಸ್ಕರ್, ಹೊಸಬರು ಈ ನಿಯಮಗಳ ಕುರಿತು ಅಚ್ಚರಿಪಡುತ್ತಾರೆ ಎಂದಿದ್ದಾರೆ.

ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ವಿರಾಟ್ ಕೊಹ್ಲಿಗೆ ರಜೆ ನೀಡಿ, ಈಗಾಗಲೇ ಮಗುವಿನ ತಂದೆಯಾಗಿರುವ ನಟರಾಜನ್‌ಗೆ ರಜೆ ನೀಡದ ತಂಡದ ಆಡಳಿತದ ವಿಭಿನ್ನ ನಿಯಮವನ್ನು ಬೆಟ್ಟು ಮಾಡಿರುವ ಗವಾಸ್ಕರ್, ಇಂತಹ ನಿಯಮಗಳಿಂದ ನಟರಾಜನ್‌ಗೆ ಅಚ್ಚರಿಯಾಗಿರಬಹುದು. ಅವರು ಹೊಸ ಆಟಗಾರನಾಗಿರುವ ಕಾರಣ ಏನೂ ಹೇಳುವಂತಿಲ್ಲ. ಎಡಗೈ ಬೌಲರ್ ನಟರಾಜನ್ ಚೊಚ್ಚಲ ಟ್ವೆಂಟಿ-20 ಪಂದ್ಯದಲ್ಲಿ ಪರಿಣಾಮಕಾರಿ ಪ್ರದರ್ಶನ ನೀಡಿದ್ದರು. ಹಾರ್ದಿಕ್ ಪಾಂಡ್ಯ ಅವರು ಸರಣಿಶ್ರೇಷ್ಠ ಪ್ರಶಸ್ತಿಯನ್ನು ನಟರಾಜನ್‌ರೊಂದಿಗೆ ಹಂಚಿಕೊಂಡಿದ್ದರು. ನಟರಾಜನ್ ಐಪಿಎಲ್ ಪ್ಲೇ ಆಫ್ ಪಂದ್ಯ ನಡೆಯುತ್ತಿದ್ದಾಗಲೇ ಹೆಣ್ಣು ಮಗುವಿಗೆ ಅಪ್ಪನಾಗಿದ್ದರು. ನಟರಾಜನ್‌ಗೆ ಆಸ್ಟ್ರೇಲಿಯದಲ್ಲಿ ಟೆಸ್ಟ್ ಸರಣಿಗಾಗಿ ಉಳಿಯುವಂತೆ ತಿಳಿಸಲಾಗಿತ್ತು. ಅಷ್ಟಕ್ಕೂ ನಟರಾಜನ್ ಭಾರತೀಯ ಟೆಸ್ಟ್ ತಂಡದ ಭಾಗವಾಗಿರಲಿಲ್ಲ. ಅವರು ನೆಟ್ ಬೌಲರ್ ಆಗಿದ್ದರು. ಜನವರಿ ಮೂರನೇ ವಾರದಲ್ಲಿ ಟೆಸ್ಟ್ ಸರಣಿ ಮುಗಿದ ಬಳಿಕವಷ್ಟೇ ನಟರಾಜನ್ ಸ್ವದೇಶಕ್ಕೆ ವಾಪಸಾಗಲಿದ್ದಾರೆ. ಆಗ ಅವರು ತನ್ನ ಮಗಳನ್ನು ಮೊದಲ ಬಾರಿ ನೋಡಬಹುದು. ನಾಯಕ ಕೊಹ್ಲಿ ಅವರು ಮೊದಲ ಟೆಸ್ಟ್ ಪಂದ್ಯ ಮುಗಿದ ತಕ್ಷಣವೇ ಭಾರತಕ್ಕೆ ವಾಪಸಾಗಲು ಅನುಮತಿ ನೀಡಲಾಗಿದೆ ಎಂದು ಗವಾಸ್ಕರ್ ಕಾಲಂನಲ್ಲಿ ಬರೆದಿದ್ದಾರೆ.

ಅಶ್ವಿನ್ ಅವರು ತಂಡದ ಮೀಟಿಂಗ್ ವೇಳೆ ಮನಸ್ಸು ಬಿಚ್ಚಿ ಮಾತನಾಡುತ್ತಾರೆ. ಅವರು ಒಂದು ಪಂದ್ಯದಲ್ಲಿ ವಿಕೆಟ್ ಪಡೆಯದೇ ಇದ್ದರೆ ಮುಂದಿನ ಪಂದ್ಯದಲ್ಲಿ ಅವರಿಗೆ ಸ್ಥಾನ ನೀಡಲಾಗುವುದಿಲ್ಲ. ಹಿರಿಯ ಬ್ಯಾಟ್ಸ್‌ಮನ್‌ಗೆ ಹೀಗೆ ಮಾಡಲಾಗುವುದಿಲ್ಲ. ಇದು ಭಾರತೀಯ ಕ್ರಿಕೆಟ್‌ನ ಈಗಿನ ಸ್ಥಿತಿ. ಒಬ್ಬೊಬ್ಬರಿಗೆ ಒಂದೊಂದು ನಿಯಮಗಳಿವೆ. ನನ್ನ ಮೇಲೆ ನಂಬಿಕೆ ಬಾರದಿದ್ದರೆ ರವಿಚಂದ್ರನ್ ಅಶ್ವಿನ್ ಹಾಗೂ ಟಿ.ನಟರಾಜನ್‌ರಲ್ಲಿ ಕೇಳಿ ಎಂಬ ವಾಕ್ಯದೊಂದಿಗೆ ಗವಾಸ್ಕರ್ ತಮ್ಮ ಅಂಕಣಬರಹ ಮುಗಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X