Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಮಿಕರ ಕಲ್ಯಾಣದ ಬಗ್ಗೆ ಚಿಂತಿಸಲು...

ಕಾರ್ಮಿಕರ ಕಲ್ಯಾಣದ ಬಗ್ಗೆ ಚಿಂತಿಸಲು ಮಿಷ್ಟ್ರಾನ್ ಘಟನೆ ಪಾಠವಾಗಲಿ : ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ

ವಾರ್ತಾಭಾರತಿವಾರ್ತಾಭಾರತಿ24 Dec 2020 2:10 PM IST
share

ಬೆಂಗಳೂರು, ಡಿ. 24: ಪ್ರಜಾಪ್ರಭುತ್ವದಲ್ಲಿ  ಕಾರ್ಮಿಕರ ಹಕ್ಕುಗಳನ್ನು ರಕ್ಷಿಸುವ ಹೊಣೆ ಸರಕಾರದ ಜವಾಬ್ದಾರಿಯಾಗಿದೆ. ಆದರೆ ಸರಕಾರಗಳು ಇಂದು ಬಹು ರಾಷ್ಟ್ರೀಯ ಬೃಹತ್ ಹೂಡಿಕೆದಾರ ಉದ್ಯಮದ ಪರವಾಗಿ ವಕಾಲತ್ತು ವಹಿಸಿದ ವಕೀಲನೆಂಬಂತೆ ವರ್ತಿಸುವುದಲ್ಲದೆ, ಕಾರ್ಮಿಕರ ನ್ಯಾಯಬದ್ಧ ಬೇಡಿಕೆಯನ್ನು ಕೂಡಾ ಪರಿಗಣಿಸದೆ ಅವರನ್ನು ಆರೋಪಿಗಳಾಗಿಸುವ ಕೇಂದ್ರ ಸರ್ಕಾರದ ಧೋರಣೆ ಮತ್ತು ಅದರಲ್ಲೇ ಸಹಮತ ತೋರುವ ರಾಜ್ಯ ಸರ್ಕಾರದ ನಿಲುವು ಬಹಳ ಅಪಾಯಕಾರಿಯಾಗಿದೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ದ.ಕ. ಜಿಲ್ಲಾಧ್ಯಕ್ಷ ಅಡ್ವೋಕೇಟ್ ಸರ್ಫ್ ರಾಝ್ ಹೇಳಿದ್ದಾರೆ.

ಇತ್ತೀಚೆಗೆ ಸಂಭವಿಸಿದ ಮಿಷ್ಟ್ರಾನ್ ಘಟನೆಯ ಉದಾಹರಣೆಯನ್ನೇ ತೆಗೆದುಕೊಂಡರೆ ಗುತ್ತಿಗೆಯ ಆಧಾರದಲ್ಲಿ ಕೆಲಸ ಮಾಡುವ ನೌಕರರಿಗೆ  ಎಲ್ಲಾ ತಿಂಗಳುಗಳಲ್ಲಿಯೂ ಸರಿಯಾಗಿ ವೇತನ ನೀಡದೆ ಹೇಗೆ ಸತಾಯಿಸುತ್ತಿದ್ದರು ಎಂಬುವುದಕ್ಕೆ ಸ್ಪಷ್ಟ ನಿದರ್ಶನವಾಗಿದೆ ಎಂದು ಅವರು ಹೇಳಿದರು.

ಬೃಹತ್ ಉದ್ಯಮದ ಪರ ಬ್ಯಾಟ್ ಬೀಸುವ ಕೇಂದ್ರ ಸರ್ಕಾರದ ಧೋರಣೆ ಮತ್ತು ಅದರಲ್ಲೇ ಸಹಮತ ತೋರುವ ರಾಜ್ಯ ಸರ್ಕಾರ ತಮ್ಮ ಇಂತಹ ಧೋರಣೆಗಳನ್ನು ಬಿಟ್ಟು ಕಾರ್ಮಿಕರ ಕಲ್ಯಾಣದ ಬಗ್ಗೆ ಚಿಂತಿಸಲು ಮತ್ತು ಯಾವುದೇ ವಿವಾದ ವಿಷಯಗಳಲ್ಲಿ ಬೇಜವಾಬ್ದಾರಿ ಹೇಳಿಕೆಗಳನ್ನು ನೀಡದೆ ವಸ್ತುಸ್ಥಿತಿಯನ್ನು ಸರಿಯಾಗಿ ಅರಿಯುವ ಪ್ರಯತ್ನ ಮಾಡಬೇಕು. ಮಿಷ್ಟ್ರಾನ್ ಘಟನೆ ಸರಕಾರಕ್ಕೆ  ಪಾಠವಾಗಬೇಕು ಮಾತ್ರವಲ್ಲ ಮುಂದೆ ಅಂತಹ ಪ್ರಮಾದಗಳು ಸಂಭವಿಸದೆ ಕಾರ್ಮಿಕರ ಮತ್ತು ಎಲ್ಲಾ ನಾಗರಿಕರ ಹಕ್ಕನ್ನು ರಕ್ಷಿಸುವಲ್ಲಿ ಸರಕಾರವು ಹೆಚ್ಚು ಬದ್ಧವಾಗಿರಬೇಕು ಎಂದರು.

ಆ್ಯಪಲ್ ಸಂಸ್ಥೆಯ ಪ್ರಾಮಾಣಿಕ ಸತ್ಯಶೋಧನಾ ವರದಿಯಿಂದ ಇಂದು ಅಮಾಯಕ ಕಾರ್ಮಿಕರಿಗೆ ನ್ಯಾಯ ಸಿಗುವಂತಹ ಸನ್ನಿವೇಶವನ್ನು ಹೊಂದಿದ್ದೇ ವಿನಃ ಸರಕಾರವು ಈ ವಿವಾದದಲ್ಲಿ ಬಡ ನೌಕರರ ಪರವಾಗಿ ಮುತುವರ್ಜಿ ವಹಿಸದಿರುವುದು ವಿಷಾದಕರ, ಮಾತ್ರವಲ್ಲ ಮಾಧ್ಯಮ ಗಳು ಮತ್ತು ರಾಜಕಾರಣಿಗಳ ಮಾತುಗಳು ಕೂಡಾ ನ್ಯಾಯವನ್ನು ಬಯಸಿ ಬೀದಿಗಿಳಿದ ಕಾರ್ಮಿಕರ ವಿರುದ್ಧವಾಗಿತ್ತು ಎಂದವರು ಹೇಳಿದರು.

ಇದೀಗ  ನೈಟ್ ಕರ್ಪ್ಯೂ, ಲಾಕ್ ಡೌನ್ ಮುಂತಾದ ಪದದ ಬಳಕೆಗಳು ಮತ್ತೆ ಆರಂಭವಾಗಿದ್ದು, ಕಳೆದ ಸಲದಂತೆ ಈ ಬಾರಿ ಯಾವುದೇ ರೀತಿಯಲ್ಲಿ ಜನಸಾಮಾನ್ಯರ ಬದುಕಿನಲ್ಲಿ ಚೆಲ್ಲಾಟವಾಡುವುದನ್ನು ಸರಕಾರ ನಿಲ್ಲಿಸಬೇಕು. ಹೊಸ ಸೋಂಕು ಹರಡಿದೆ ಎನ್ನಲಾಗುವ ಪಾಶ್ಚಾತ್ಯ  ರಾಷ್ಟ್ರಗಳಲ್ಲಿ ನೆಲೆಸಿರುವ ಅನಿವಾಸಿ ಭಾರತೀಯರಿಗೆ ಇಲ್ಲಿಗೆ ಬರಲು ಪೂರ್ಣ ಅವಕಾಶ ನೀಡಿದ ಮೇಲೆ ವಿದೇಶೀ ವಿಮಾನಗಳನ್ನು ನಿರ್ಬಂಧಿಸುವುದು ಒಂದು ರಾಜಕೀಯ ಪ್ರಹಸನ ಮಾತ್ರ. ಆದ್ದರಿಂದ ರೋಗ ಹರಡುವಿಕೆಯಿಂದ ತಡೆಗಟ್ಟುವಲ್ಲಿ ಮಾತ್ರವಲ್ಲದೆ ಸರಕಾರದ ದ್ವಂದ್ವ ನೀತಿಯ ಬಗ್ಗೆಯೂ, ಮಾಧ್ಯಮರಂಗವು ಜನಜಾಗೃತಿಗೊಳಿಸಲು ಮುಂದಾಗಬೇಕಾಗಿದೆ ಎಂದು ಸರ್ಫ್ ರಾಝ್ ಹೇಳಿಕೆ ನೀಡಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X