Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಬುಲ್ ಕಲಾಂ ಆಝಾದ್ ಅವರಿಗೆ ಭಾರತ ಮತ್ತು...

ಅಬುಲ್ ಕಲಾಂ ಆಝಾದ್ ಅವರಿಗೆ ಭಾರತ ಮತ್ತು ಭಾರತೀಯತೆಯಲ್ಲಿ ನಂಬಿಕೆಯಿರಲಿಲ್ಲ ಎಂದ ಬಿಜೆಪಿ ಸಚಿವ

‘ದುರದೃಷ್ಟಕರ ಹೇಳಿಕೆ’ ಎಂದು ಪ್ರತಿಕ್ರಿಯಿಸಿದ ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ24 Dec 2020 7:49 PM IST
share
ಅಬುಲ್ ಕಲಾಂ ಆಝಾದ್ ಅವರಿಗೆ ಭಾರತ ಮತ್ತು ಭಾರತೀಯತೆಯಲ್ಲಿ ನಂಬಿಕೆಯಿರಲಿಲ್ಲ ಎಂದ ಬಿಜೆಪಿ ಸಚಿವ

ಹೊಸದಿಲ್ಲಿ,ಡಿ.24: ದೇಶದ ಮೊದಲ ಶಿಕ್ಷಣ ಸಚಿವರಾಗಿದ್ದ ಅಬುಲ್ ಕಲಾಂ ಆಝಾದ್ ಅವರು ಭಾರತ ಮತ್ತು ಭಾರತೀಯತೆಯಲ್ಲಿ ನಂಬಿಕೆಯನ್ನು ಹೊಂದಿರಲಿಲ್ಲ ಎಂಬ ಉತ್ತರ ಪ್ರದೇಶದ ಸಚಿವ ಹಾಗೂ ಬಿಜೆಪಿ ನಾಯಕ ಆನಂದ್ ಸ್ವರೂಪ ಶುಕ್ಲಾ ಅವರ ಹೇಳಿಕೆಯನ್ನು ಕಾಂಗ್ರೆಸ್ ಪಕ್ಷವು ‘ದುರದೃಷ್ಟಕರ ’ಎಂದು ಬಣ್ಣಿಸಿದೆ.

ಬಲಿಯಾದ ಜನನಾಯಕ ಚಂದ್ರಶೇಖರ್ ವಿವಿಯಲ್ಲಿ ಕಾರ್ಯಕ್ರಮವೊಂದನ್ನುದ್ದೇಶಿಸಿ ಮಂಗಳವಾರ ಮಾತನಾಡಿದ್ದ ಶುಕ್ಲಾ,ಆಝಾದ್ ಅವರ ಹೃದಯದಲ್ಲಿ ಭಾರತ ಮತ್ತು ಭಾರತೀಯತೆಗೆ ಸ್ಥಾನವಿರಲಿಲ್ಲ ಎಂದು ಹೇಳಲು ತನಗೆ ಯಾವುದೇ ಹಿಂಜರಿಕೆಯಿಲ್ಲ. ಇಸ್ಲಾಮನ್ನು ಒಪ್ಪಿಕೊಳ್ಳುವಂತೆ ಒತ್ತಡ ಹೇರುತ್ತಿದ್ದ ಮೊಗಲ್ ದೊರೆ ಔರಂಗಜೇಬ್‌ನಿಂದ ತಮ್ಮನ್ನು ರಕ್ಷಿಸುವಂತೆ ಕಾಶ್ಮೀರಿ ಪಂಡಿತರು ಗುರು ತೇಗ್ ಬಹಾದೂರ್ ಅವರನ್ನು ಕೋರಿದ್ದರು. ಗುರುಗಳು ಔರಂಗಜೇಬನ ಬಳಿ ತೆರಳಿದ್ದಾಗ ಅವರ ಶಿರಚ್ಛೇದ ಮಾಡಲಾಗಿತ್ತು. ಈ ಅಂಶವನ್ನು ಚರಿತ್ರೆಯಿಂದ ತೆಗೆದುಹಾಕಲಾಗಿತ್ತು. ಅಕ್ಬರ್‌ನ ಆಡಳಿತ ಕುರಿತು ವಿವರವಾದ ದಾಖಲೆ ಐನ್-ಇ-ಅಕ್ಬರಿಯಲ್ಲಿ ಮತ್ತು ಆಗಿನ ಕಾಲದ ಇತಿಹಾಸಜ್ಞರು ಆತನನ್ನು ಮಹಾನ್ ವ್ಯಕ್ತಿ ಎಂದು ಪರಿಗಣಿಸಿರದಿದ್ದರೂ ಚರಿತ್ರೆಯಲ್ಲಿ ಹಾಗೆ ಬಿಂಬಿಸಲಾಗಿತ್ತು ಎಂದು ಆರೋಪಿಸಿದ್ದರು.

ಶುಕ್ಲಾರ ಹೇಳಿಕೆಗೆ ಪ್ರತಿಕ್ರಿಯಿಸಿದ ಉ.ಪ್ರ.ಕಾಂಗ್ರೆಸ್ ವಕ್ತಾರ ಅಶೋಕ್ ಸಿಂಗ್ ಅವರು,ಇಂತಹ ಹೇಳಿಕೆಗಳು ರಾಜ್ಯದ ಸಚಿವರೊಬ್ಬರ ಬಾಯಿಯಿಂದ ಹೊರಬೀಳುತ್ತಿರುವುದು ದುರದೃಷ್ಟಕರ ಎಂದು ತಿಳಿಸಿದರು.

ಆಝಾದ್ ಸದೃಢ ಶಿಕ್ಷಣ ವ್ಯವಸ್ಥೆಯ ಮೂಲಕ ಬಲಿಷ್ಠ ಭಾರತಕ್ಕೆ ಅಡಿಪಾಯವನ್ನು ಹಾಕಿದ್ದರು. ದೇಶದ ಮೊದಲ ಶಿಕ್ಷಣ ಸಚಿವರಾಗಿ ಗ್ರಾಮೀಣ ಬಡ ವಿದ್ಯಾರ್ಥಿಗಳು ಮತ್ತು ಹೆಣ್ಣುಮಕ್ಕಳಿಗೆ ಶಿಕ್ಷಣವನ್ನು ಒದಗಿಸಲು ಅವರು ಒತ್ತು ನೀಡಿದ್ದರು. ಅವರ ಕುರಿತು ಇಂತಹ ಹೇಳಿಕೆಗಳು ನಗೆ ತರಿಸುತ್ತಿವೆ ಮತ್ತು ಅನಗತ್ಯವಾಗಿವೆ ಎಂದರು.

ಆಝಾದ್ ಹಿರಿಯ ಕಾಂಗ್ರೆಸ್ ನಾಯಕರಾಗಿದ್ದು ಸ್ವಾತಂತ್ರ್ಯ ಹೋರಾಟದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದರು. ಅವರ ಜನ್ಮದಿನವಾದ ಡಿ.11ನ್ನು ಭಾರತದಲ್ಲಿ ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X