Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕೇರಳದಲ್ಲಿ ಹರಡುತ್ತಿರುವ ಶಿಗೆಲ್ಲಾ...

ಕೇರಳದಲ್ಲಿ ಹರಡುತ್ತಿರುವ ಶಿಗೆಲ್ಲಾ ಸೋಂಕು ಅಪಾಯಕಾರಿಯೇ? ರೋಗ ಲಕ್ಷಣಗಳೇನು?

ಇಲ್ಲಿದೆ ಸಂಪೂರ್ಣ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ24 Dec 2020 10:43 PM IST
share
ಕೇರಳದಲ್ಲಿ ಹರಡುತ್ತಿರುವ ಶಿಗೆಲ್ಲಾ ಸೋಂಕು ಅಪಾಯಕಾರಿಯೇ? ರೋಗ ಲಕ್ಷಣಗಳೇನು?

ಕ್ಯಾಲಿಕಟ್,ಡಿ.24: ಕೊರೋನ ವೈರಸ್ ವಿರುದ್ಧ ಹೋರಾಟಗಳು ನಡೆಯುತ್ತಿರುವಂತೆಯೇ ಕೇರಳದ ಕ್ಯಾಲಿಕಟ್ ನಲ್ಲಿ ನೂತನ ಸೋಂಕೊಂದು ಜನರನ್ನು ಭಯಭೀತರನ್ನಾಗಿಸಿದೆ. ಈಗಾಗಲೇ 36 ಮಂದಿಗೆ ಸೋಂಕು ತಗಲಿದ್ದು, 6 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 11 ವರ್ಷದ ಬಾಲಕನೋರ್ವ ಈ ಸೋಂಕಿಗೆ ಬಲಿಯಾದ ಬಳಿಕ ಕ್ಯಾಲಿಕಟ್ ಜಿಲ್ಲಾಡಳಿತವು ತುರ್ತು ಸಭೆಯನ್ನು ಕರೆದಿತ್ತು. ಸದ್ಯ ಈ ಸೋಂಕು ನಿಯಂತ್ರಣದಲ್ಲಿದ್ದು, ಆರೋಗ್ಯ ಕಾರ್ಯಕರ್ತರು ಹಾಗೂ ನಾಗರಿಕರು ಎಚ್ಚರಿಕೆಯಿಂದ ಇರಲು ಜಿಲ್ಲಾಡಳಿತ ಆದೇಶಿಸಿದೆ.

ಶಿಗೆಲ್ಲಾ ಸೋಂಕು ಎಂದರೇನು?

ಶಿಗೆಲ್ಲೋಸಿಸ್ ಅಥವಾ ಶಿಗೆಲ್ಲಾ ಸೋಂಕು ಮನುಷ್ಯನ ಕರುಳಿಗೆ ಬಾಧಿಸುತ್ತದೆ. ಶಿಗೆಲ್ಲಾ ಎಂಬ ಬ್ಯಾಕ್ಟೀರಿಯಾದಿಂದ ಈ ಸೋಂಕು ಉಂಟಾಗುತ್ತದೆ. 5 ವರ್ಷದೊಳಗಿನ ಮಕ್ಕಳಿಗೆ ಈ ಸೋಂಕು ಬಾಧಿಸಿದರೆ ಮೃತಪಡುವ ಸಾಧ್ಯತೆಗಳಿವೆ. ಹಿಂದುಳಿದ ರಾಷ್ಟ್ರಗಳಾದ ಆಫ್ರಿಕಾ ಮತ್ತು ದಕ್ಷಿಣ ಏಶ್ಯಾ ಭಾಗಗಳಲ್ಲಿ ಈ ಸೋಂಕು ಹೆಚ್ಚಾಗಿ ಕಂಡು ಬರುತ್ತದೆ.

ಸಾಮಾನ್ಯ ಲಕ್ಷಣಗಳು ಯಾವುವು?

ಬೇಧಿ (ಕೆಲವು ಪ್ರಕರಣಗಳಲ್ಲಿ ರಕ್ತಸ್ರಾವ ಹಾಗೂ ತೀವ್ರ ನೋವುಂಟಾಗುತ್ತದೆ)

ಹೊಟ್ಟೆ ನೋವು

ಜ್ವರ

ತಲೆಸುತ್ತುವುದು

ವಾಂತಿ

ಇದು ಸಾಂಕ್ರಾಮಿಕ ರೋಗವೇ? ಹರಡುವ ಬಗೆ ಹೇಗೆ?

ಹೌದು. ಶಿಗೆಲ್ಲಾ ಒಂದು ಸಾಂಕ್ರಾಮಿಕ ರೋಗ. ಇದು ಮನುಷ್ಯರಿಂದ ಮನುಷ್ಯರಿಗೆ ಹರಡುತ್ತದೆ. ನಾವು ಸೇವಿಸುವ ಆಹಾರದಲ್ಲಿ ಶಿಗೆಲ್ಲಾ ಬ್ಯಾಕ್ಟೀರಿಯಾ ಇದ್ದರೆ ಸೋಂಕು ತಗಲುತ್ತದೆ. ಉದಾಹರಣೆಗೆ ಮಗುವಿಗೆ ಆಹಾರ ನೀಡುವಾಗ ಕೈ ತೊಳೆಯದಿದ್ದರೆ ಅಥವಾ ನೈರ್ಮಲ್ಯವಿಲ್ಲದ ಆಹಾರವನ್ನು ಸೇವಿಸಿದರೆ ಈ ಸೋಂಕು ಹರಡುತ್ತದೆ. ಬಹುತೇಕ ಪ್ರಕರಣಗಳಲ್ಲಿ ಲಕ್ಷಣಗಳು ಒಂದು ವಾರದ ಬಳಿಕ ಕಾಣಿಸಿಕೊಳ್ಳುತ್ತದೆ.

ಶಿಗೆಲ್ಲಾ ಸೋಂಕು ಅಪಾಯಕಾರಿಯೇ?

ಹೆಚ್ಚೇನೂ ಅಪಾಯಕಾರಿಯಲ್ಲ. ಕೆಲವು ದಿನಗಳ ಕಾಲ ಬೇಧಿ, ಅತಿಸಾರ ಉಂಟಾಗುತ್ತದೆ ಹಾಗೂ ಕ್ರಮೇಣ ಕಡಿಮೆಯಾಗುತ್ತದೆ. ಅದರೊಂದಿಗೆ ಜ್ವರ ಮತ್ತು ಹೊಟ್ಟೆ ನೋವು ಕಾಣಿಸಿಕೊಂಡರೆ ಕೂಡಲೇ ವೈದ್ಯರನ್ನು ಸಂಪರ್ಕಿಸುವುದು ಒಳಿತು

ಶಿಗೆಲ್ಲಾ ಸೋಂಕಿನಿಂದ ನಮ್ಮನ್ನು ರಕ್ಷಿಸಿಕೊಳ್ಳುವುದು ಹೇಗೆ?

ನಿಮ್ಮ ಕೈಗಳನ್ನು ಸರಿಯಾಗಿ ತೊಳೆದುಕೊಳ್ಳಿ. ಮಕ್ಕಳಿಗೆ ಆಹಾರ ನೀಡುವಾಗಲಂತೂ ಕೈಗಳನ್ನು ಸ್ವಚ್ಛವಾಗಿಡಿ (ಮಕ್ಕಳಲ್ಲಿ ಈ ಸೋಂಕು ಹೆಚ್ಚಿನ ಪರಿಣಾಮ ಉಂಟು ಮಾಡುತ್ತದೆ

ಆಹಾರ ಸೇವಿಸುವ ಮುನ್ನ ಕೈಗಳನ್ನು ತೊಳೆದುಕೊಳ್ಳಿ

ಬಿಸಿ ನೀರನ್ನು ಹೆಚ್ಚಾಗಿ ಕುಡಿಯಿರಿ

ನೀರಿನಲ್ಲಿ ಈಜುವ ಸಂದರ್ಭದಲ್ಲಿ ಕೆರೆ, ನದಿ, ಸಮುದ್ರದ (ಇತರ ಯಾವುದೇ ಮೂಲಗಳ) ನೀರನ್ನು ಕುಡಿಯದಂತೆ ಜಾಗ್ರತೆ ವಹಿಸಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X