Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಬಲೀಕರಣಗೊಂಡ ಮಹಿಳೆಯರನ್ನು ಘನತೆಯಿಂದ...

ಸಬಲೀಕರಣಗೊಂಡ ಮಹಿಳೆಯರನ್ನು ಘನತೆಯಿಂದ ನಡೆಸಿಕೊಳ್ಳುವ ಅವಶ್ಯಕತೆ ಇದೆ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ25 Dec 2020 8:57 PM IST
share
ಸಬಲೀಕರಣಗೊಂಡ ಮಹಿಳೆಯರನ್ನು ಘನತೆಯಿಂದ ನಡೆಸಿಕೊಳ್ಳುವ ಅವಶ್ಯಕತೆ ಇದೆ: ಹೈಕೋರ್ಟ್

ಬೆಂಗಳೂರು, ಡಿ.25: ಇಪ್ಪತ್ತೊಂದನೆಯ ಶತಮಾನದಲ್ಲೂ ಪುರುಷ ಪ್ರಧಾನ ಸಮಾಜಕ್ಕೆ ಸಬಲೀಕರಣಗೊಂಡ ಮಹಿಳೆಯನ್ನು ಯಾವ ರೀತಿಯಾಗಿ ನಡೆಸಿಕೊಳ್ಳಬೇಕು ಎಂಬುದೇ ಅರಿತಿಲ್ಲ. ಇನ್ನಾದರೂ ಸಬಲೀಕರಣಗೊಂಡ ಮಹಿಳೆಯರನ್ನು ಘನತೆಯಿಂದ ನಡೆಸಿಕೊಳ್ಳಿ ಎಂದು ಹೈಕೋರ್ಟ್ ವಿಚ್ಛೇಧನ ಪ್ರಕರಣವೊಂದರಲ್ಲಿ ಅಭಿಪ್ರಾಯಪಟ್ಟಿದೆ.

ಶತಮಾನಗಳ ಹಿಂದಿನಿಂದಲೂ ಈ ಪುರುಷ ಪ್ರಧಾನ ಸಮಾಜ ಮಹಿಳೆಯನ್ನು ಕೀಳಾಗಿಯೇ ನಡೆಸಿಕೊಂಡು ಬಂದಿದೆ. ಪುರುಷ ಪ್ರಧಾನ ವ್ಯವಸ್ಥೆ ಇತ್ತೀಚೆಗೆ ಸ್ತ್ರೀ ಸಬಲೀಕರಣದ ಬಗ್ಗೆ ಮಾತನಾಡುತ್ತಿದೆ. ಆದರೆ, ಸಬಲೀಕರಣಗೊಂಡ ಮಹಿಳೆಯನ್ನು ಹೇಗೆ ನಡೆಸಿಕೊಳ್ಳಬೇಕು ಎಂಬುದನ್ನೇ ಅರ್ಥ ಮಾಡಿಕೊಂಡಿಲ್ಲ. ಪೋಷಕರು ತಮ್ಮ ಮಕ್ಕಳಿಗೂ ಇದನ್ನು ಹೇಳಿಕೊಡುತ್ತಿಲ್ಲ. ಇದು ಪುರುಷ ಪ್ರಧಾನ ಸಮಾಜದ ಸಮಸ್ಯೆ ಎಂದು ಹೈಕೋರ್ಟ್ ಹಿರಿಯ ನ್ಯಾಯಮೂರ್ತಿ ಬಿ.ವಿ ನಾಗರತ್ನ ಅವರಿದ್ದ ವಿಭಾಗೀಯ ಅಭಿಪ್ರಾಯ ವ್ಯಕ್ತಪಡಿಸಿದೆ.

ಎರಡು ವರ್ಷಗಳ ವೈವಾಹಿಕ ಸಂಬಂಧವನ್ನು ಅಂತ್ಯಗೊಳಿಸಿಕೊಳ್ಳಲು ವಿಚ್ಛೇದನ ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ಪತಿ-ಪತ್ನಿ ಇಬ್ಬರಿಗೂ ಬುದ್ಧಿವಾದ ಹೇಳಿರುವ ಪೀಠ, ಮಹಿಳೆ ಶಿಕ್ಷಣ ಪಡೆದು ಆರ್ಥಿಕವಾಗಿ ಸಬಲಗೊಳ್ಳುವುದು ಒಳ್ಳೆಯದು. ಆದರೆ, ಇದೇ ವೈವಾಹಿಕ ಜೀವನಕ್ಕೆ ಮುಳುವಾಗಬಾರದು. ಶಿಕ್ಷಿತ ಮಹಿಳೆ ತನ್ನ ಕುಟುಂಬದೊಂದಿಗೆ ಹೇಗೆ ನಡೆದುಕೊಳ್ಳಬೇಕು ಎಂಬುದನ್ನೂ ಅರಿತುಕೊಳ್ಳಬೇಕು. ಹಾಗೆಯೇ ಮನೆಗೆ ಸೊಸೆ ಬಂದ ಕೂಡಲೇ ಅತ್ತೆ ಎನ್ನಿಸಿಕೊಂಡವರು ಅನಗತ್ಯವಾಗಿ ಹಸ್ತಕ್ಷೇಪ ಮಾಡಬಾರದು ಎಂದಿದೆ.

ಮನೆಯಲ್ಲಿ ಒಬ್ಬಳೇ ಮಗಳಾಗಿ ಬೆಳೆದಿದ್ದರಿಂದ ಸಂಗಾತಿ ಕುಟುಂಬದೊಂದಿಗೆ ಹೊಂದಾಣಿಕೆ ಕಷ್ಟವಾಗುತ್ತಿದೆ ಎಂಬ ಪತ್ನಿಯ ಹೇಳಿಕೆಗೆ ಬೇಸರ ವ್ಯಕ್ತಪಡಿಸಿರುವ ಪೀಠ, ಒಬ್ಬಳೇ ಮಗಳಾಗಿ ಬೆಳೆದಿದ್ದೀನಿ ಎಂಬ ಮಾತ್ರಕ್ಕೆ ಗಂಡನನ್ನು ಆತನ ಕುಟುಂಬವನ್ನೂ ನಿರ್ಲಕ್ಷಿಸಬಹುದು ಎಂದು ಭಾವಿಸಬಾರದು. ಮದುವೆ ಎಂಬುದು ಇಬ್ಬರು ವ್ಯಕ್ತಿಗಳ ನಡುವಿನ ಒಂದು ಅತ್ಯುತ್ತಮ ಹೊಂದಾಣಿಕೆ. ಹೀಗಾಗಿ ಸಮಾಲೋಚನೆಗೆ ಹೋಗಿ. ಪರಸ್ಪರ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಿಕೊಳ್ಳಿ ಎಂದು ವಿಚ್ಛೇದನ ಕೋರಿರುವ ದಂಪತಿಗೆ ತಿಳಿಹೇಳಿ, ವಿಚಾರಣೆ ಮುಂದೂಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X