Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ವಿಶ್ವವಿದ್ಯಾಲಯಗಳ ಮೇಲೆ ಕೋವಿಡ್...

ವಿಶ್ವವಿದ್ಯಾಲಯಗಳ ಮೇಲೆ ಕೋವಿಡ್ ಕರಿಛಾಯೆ: ಸರಕಾರದ ಅನುದಾನ ಕಡಿತದಿಂದ ಆರ್ಥಿಕ ಸಂಕಷ್ಟ

ವಾರ್ತಾಭಾರತಿವಾರ್ತಾಭಾರತಿ25 Dec 2020 10:02 PM IST
share

ಬೆಂಗಳೂರು, ಡಿ.25: ಕೋವಿಡ್ ಪರಿಣಾಮವು ರಾಜ್ಯದ ವಿಶ್ವವಿದ್ಯಾಲಯಗಳ ಮೇಲೂ ಬೀರಿದ್ದು, ಸರಕಾರದಿಂದ ಸಿಗುವಂತಹ ಅನುದಾನದಲ್ಲಿ ಕಡಿತಗೊಂಡಿದೆ. ವಿವಿಗಳೀಗ ಶೇ.30 ರಿಂದ 40 ರಷ್ಟು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ ಎಂದು ಅಂದಾಜಿಸಲಾಗಿದೆ.

ಕೊರೋನ ಹೊಡೆತ ವಿದ್ಯಾರ್ಥಿಗಳ ದಾಖಲಾತಿ ಹಾಗೂ ಶೈಕ್ಷಣಿಕ ಚಟುವಟಿಕೆಗಳ ಮೇಲಷ್ಟೇ ಪ್ರಭಾವ ಬೀರಿಲ್ಲ. ವಿಶ್ವವಿದ್ಯಾಲಯಗಳ ಆಡಳಿತದ ಮೇಲೂ ಪರಿಣಾಮ ಬೀರಿದೆ. ರಾಜ್ಯದ ಪ್ರಮುಖ ವಿವಿಗಳಾದ ಬೆಂಗಳೂರು, ಮೈಸೂರು, ಮಂಗಳೂರು, ಕುವೆಂಪು, ಧಾರವಾಡ, ದಾವಣಗೆರೆ, ಮಹಿಳಾ ವಿವಿ, ಸಂಸ್ಕೃತ ವಿವಿ ಸೇರಿದಂತೆ ಎಲ್ಲ ವಿವಿಗಳಿಗೂ ಅನುದಾನದ ಕೊರತೆ ಎದುರಾಗಿದೆ.

ಪ್ರತಿ ವರ್ಷ ಸರಕಾರ ಬಜೆಟ್‍ನಲ್ಲಿ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದ ವೇತನ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುತ್ತದೆ. ಆದರೆ ಕೊರೋನದಿಂದಾಗಿ ಸರಕಾರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವುದರಿಂದ ವಿವಿಗೆ ವೇತನಾನುದಾನ ಹೊರತುಪಡಿಸಿ, ಬೇರೆ ಕೆಲವು ವಿಭಾಗಕ್ಕೆ ನೀಡಬೇಕಿರುವ ಅನುದಾನ ಇನ್ನೂ ಮಂಜೂರಾಗಿಲ್ಲ. ಎಸ್ಸಿ-ಎಸ್ಟಿ ವಿದ್ಯಾರ್ಥಿಗಳ ಕಲ್ಯಾಣಕ್ಕಾಗಿ ಎಸ್‍ಇಪಿ, ಟಿಎಸ್‍ಪಿ ಯೋಜನೆಯಡಿ ನೀಡಬೇಕಿರುವ ಅನುದಾನದಲ್ಲೂ ಕಡಿತ ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.

ವಿದ್ಯಾರ್ಥಿಗಳು ಹಾಗೂ ಸಂಶೋಧಕರಿಂದ ಪ್ರತಿವರ್ಷವೂ ವಿಶ್ವವಿದ್ಯಾಲಯಗಳು ದಾಖಲಾತಿ ಶುಲ್ಕ, ಕಾಲೇಜುಗಳ ಮಾನ್ಯತೆ ಶುಲ್ಕ, ಪರೀಕ್ಷಾ ಶುಲ್ಕ, ಹಾಸ್ಟೆಲ್‍ಗಳ ಶುಲ್ಕ, ಸ್ನಾತಕೋತ್ತರ ಕೇಂದ್ರಗಳಲ್ಲಿ ಹಲವು ರೀತಿಯ ಶುಲ್ಕಗಳು, ಸಂಶೋಧನಾಧ್ಯಯನ ಶುಲ್ಕ ಸೇರಿದಂತೆ ಹಲವು ರೀತಿಯಲ್ಲಿ ಶುಲ್ಕಗಳಿಂದ ಹಣ ಸಂಗ್ರಹ ಮಾಡಲಾಗುತ್ತಿತ್ತು. ಆದರೆ, ಕೊರೋನ ಕಾರಣದಿಂದಾಗಿ ಕಾಲೇಜು ಆರಂಭವಾಗಿಲ್ಲ. ಆದುದರಿಂದಾಗಿ, ಎಲ್ಲವೂ ಆನ್‍ಲೈನ್ ಮೂಲಕ ನಡೆದಿವೆ. ವಿಶ್ವವಿದ್ಯಾಲಯಗಳು ಆನ್‍ಲೈನ್ ತರಗತಿಗಳಿಗೆ ಯಾವುದೇ ಶುಲ್ಕ ವಿಧಿಸುವಂತಿಲ್ಲ. ಕಾಲೇಜುಗಳ ಮಾನ್ಯತೆ, ಮಾನ್ಯತೆ ನವೀಕರಣದ ಶುಲ್ಕ ಪಾವತಿಸಲು ಈಗಷ್ಟೇ ಆರಂಭವಾಗಿದೆ. ಅಲ್ಲದೆ, 10 ತಿಂಗಳುಗಳಿಂದ ಹಾಸ್ಟೆಲ್‍ಗಳು ಮುಚ್ಚಿರುವುದರಿಂದ ಅದರ ಶುಲ್ಕವೂ ಬಂದಿಲ್ಲ ಎಂದು ಕುಲಪತಿಯೊಬ್ಬರು ಹೇಳಿದ್ದಾರೆ.

ಕೊರೋನ ಕಾರಣದಿಂದಾಗಿ ದಾಖಲಾತಿ, ಪರೀಕ್ಷಾ ಶುಲ್ಕ ಹಾಗೂ ಇತರ ಕೆಲವು ಮೂಲಗಳಿಂದ ವಿವಿಗೆ ಬರುತ್ತಿದ್ದ ಆದಾಯ ಕಡಿಮೆಯಾಗಿದೆ. ಹೀಗಾಗಿ ಆರ್ಥಿಕವಾಗಿ ಸ್ವಲ್ಪ ಕುಸಿತವಾಗಿದ್ದು, ಮುಂದಿನ ದಿನಗಳಲ್ಲಿ ಸುಧಾರಿಸುವ ಸಾಧ್ಯತೆಯಿದೆ ಎಂದು ಬೆಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ. ಕೆ.ಆರ್.ವೇಣುಗೋಪಾಲ್ ಹೇಳಿದ್ದಾರೆ.

ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯಕ್ಕೆ ಯಾವುದೇ ರೀತಿಯ ಆರ್ಥಿಕ ಹಿನ್ನಡೆಯಾಗಿಲ್ಲ. ದಾಖಲಾತಿ ಹಾಗೂ ಇತರೆ ಪ್ರಕ್ರಿಯೆಗಳು ಎಂದಿನಂತೆಯೇ ನಡೆಯುತ್ತಿದೆ ಎಂದು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಎಸ್.ಸಚ್ಚಿದಾನಂದ ಅಭಿಪ್ರಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X