Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶ: ಹಿಂದೂ ಧರ್ಮಕ್ಕೆ...

ಉತ್ತರ ಪ್ರದೇಶ: ಹಿಂದೂ ಧರ್ಮಕ್ಕೆ ಮತಾಂತರಗೊಂಡು ವಿವಾಹವಾದ ಮುಸ್ಲಿಂ ಯುವತಿಯರು

ಪೊಲೀಸರ ‘ಮಧ್ಯವರ್ತಿಕೆ’ಯಲ್ಲಿ, ಸಂಘಪರಿವಾರದ ‘ರಕ್ಷಣೆ'ಯಲ್ಲಿ ನಡೆದ ವಿವಾಹ

ವಾರ್ತಾಭಾರತಿವಾರ್ತಾಭಾರತಿ26 Dec 2020 3:03 PM IST
share
ಉತ್ತರ ಪ್ರದೇಶ: ಹಿಂದೂ ಧರ್ಮಕ್ಕೆ ಮತಾಂತರಗೊಂಡು ವಿವಾಹವಾದ ಮುಸ್ಲಿಂ ಯುವತಿಯರು

ಬರೇಲ್ವಿ,ಡಿ.26: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮುಸ್ಲಿಂ ಯುವತಿಯರು ಹಿಂದೂ ಧರ್ಮಕ್ಕೆ ಮತಾಂತರಗೊಂಡು ವಿವಾಹವಾದ ಘಟನೆಯು ಉತ್ತರಪ್ರದೇಶದ ಬರೇಲ್ವಿಯಲ್ಲಿ ನಡೆದಿದೆ. ಮದುವೆಗೆ ಸಂಘಪರಿವಾರ ಸಂಘಟನೆಗಳು ರಕ್ಷಣೆ ನೀಡಿವೆ ಎಂದು timesofindia.com ವರದಿ ಮಾಡಿದೆ.

ಪ್ರಥಮ ಪ್ರಕರಣವು ಬರೇಲ್ವಿಯ ಹಫೀಝ್ ಗಂಜ್ ನಲ್ಲಿ ನಡೆದಿದ್ದು, ಮೊದಲಿಗೆ ಯುವತಿಯ ಮನೆಯವರು ಪ್ರಕರಣ ದಾಖಲಿಸಿದ್ದು, ಯುವಕನ ವಿರುದ್ಧ ಅಪಹರಣ ಮತ್ತು ದರೋಡೆ ಪ್ರಕರಣವನ್ನು ದಾಖಲಿಸಲಾಗಿತ್ತು. ಆದರೆ ಪೊಲೀಸರು ಮಧ್ಯವರ್ತಿಗಳಾಗಿ ನಿಂತು ಸಂಧಾನ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.

ಈ ಕುರಿತು ಮಾತನಾಡಿದ ಬರೇಲ್ವಿಯ ಮುಖ್ಯ ಪೊಲೀಸ್ ಅಧೀಕ್ಷಕ ರೋಹಿತ್ ಸಿಂಗ್ ಸಜ್ವಾನ್, “ಈ ಪ್ರಕರಣದಲ್ಲಿ ಇಬ್ಬರೂ ವಯಸ್ಕರಾಗಿರುವ ಕಾರಣ, ಇಲ್ಲಿ ಹೆಣ್ಣಿನ ಹೇಳಿಕೆಯನ್ನು ಪರಿಗಣಿಸಲಾಗಿದೆ. ಅವರಿಬ್ಬರೂ ನಮಗೆ ರಕ್ಷಣೆ ನೀಡಬೇಕೆಂದು ಪೊಲೀಸರನ್ನು ಕೋರಿದ್ದರು. ಬಳಿಕ ನಾವು ಎರಡೂ ಕುಟುಂಬಸ್ಥರನ್ನು ಕರೆಸಿ ಮಾತುಕತೆಯ ಮೂಲಕ ಸಂಧಾನ ನಡೆಸಿದ್ದೇವೆ. ಯಾರ ವಿರುದ್ಧವೂ ಪ್ರಕರಣ ದಾಖಲಿಸಲಾಗಿಲ್ಲ” ಎಂದು ಹೇಳಿಕೆ ನೀಡಿದ್ದಾಗಿ timesofindia.com ವರದಿ ತಿಳಿಸಿದೆ. ಗುರುವಾರದಂದು ರಿತೋರಾದಲ್ಲಿರುವ ದೇವಸ್ಥಾನವೊಂದರಲ್ಲಿ ಮದುವೆ ನಡೆದಿದ್ದು, ಸಂಘಪರಿವಾರ ಸಂಘಟನೆಗಳು ಸ್ಥಳದಲ್ಲಿ ಹಾಜರಿತ್ತು ಎಂದು ವರದಿ ತಿಳಿಸಿದೆ.

ಎರಡನೇ ಪ್ರಕರಣದಲ್ಲಿ 29ರ ಹರೆಯದ ಮುಸ್ಲಿಮ್ ಮಹಿಳೆಯೋರ್ವರು ಹಿಂದೂ ಯುವಕನೊಂದಿಗೆ ‘ಪರಾರಿ’ಯಾದ ಘಟನೆಯು ಬಹೇದಿ ಪ್ರದೇಶದಲ್ಲಿ ನಡೆದಿತ್ತು. ಬಳಿಕ ವೀಡಿಯೋ ಕ್ಲಿಪ್ ಬಿಡುಗಡೆಮಾಡಿದ್ದ ಅವರು, ತಾವು ವಿವಾಹವಾಗಿದ್ದಾಗಿ ಹೇಳಿಕೆ ನೀಡಿದ್ದರು. ಆದರೆ, ಯುವತಿಯ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದು, ಯುವಕನ ವಿರುದ್ಧ ದರೋಡೆ ಮತ್ತು ಅಪಹರಣಪ್ರಕರಣ ದಾಖಲಿಸಿದ್ದರು. ಮತಾಂತರ ವಿರೋಧಿ ಕಾಯ್ದೆಯ ಮೂಲಕ ಕ್ರಮ ಕೈಗೊಳ್ಳಬೇಕು ಎಂದೂ ಆಗ್ರಹಿಸಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ ಪೊಲೀಸರು, “ ನಾವು ಹೈಕೋರ್ಟ್ ನ ಆದೇಶವನ್ನು ಪಾಲಿಸುತ್ತಿದ್ದೇವೆ. ವಯಸ್ಕ ಜೋಡಿಯು ಪರಸ್ಪರ ಒಪ್ಪಿಗೆಯ ಮೂಲಕ ಮದುವೆಯಾದರೆ ಅವರ ನಡುವೆ ಕುಟುಂಬಗಳು ಹಸ್ತಕ್ಷೇಪ ಮಾಡುವಂತಿಲ್ಲ. ಅವರನ್ನು ಜೊತೆಯಾಗಿ ಬದುಕಲು ಅನುಮತಿಸಬೇಕು” ಎಂದು ಹೇಳಿಕೆ ನೀಡಿದ್ದಾರೆ.

ಉತ್ತರಪ್ರದೇಶದಲ್ಲಿ ಸದ್ಯ ಮತಾಂತರ ವಿರೋಧಿ ಕಾಯ್ದೆಯು ಜಾರಿಯಾದ ಬಳಿಕ ಹಲವಾರು ಮುಸ್ಲಿಂ ಯುವಕರು ಬಂಧನಕ್ಕೊಳಗಾಗಿದ್ದಾರೆ. ಮೊನ್ನೆ ತಾನೇ ನಡೆದ ಪ್ರಕರಣವೊಂದರಲ್ಲಿ ಜೊತೆಯಾಗಿ ಬದುಕುತ್ತಿದ್ದ ಜೋಡಿಗಳನ್ನು ಬೇರ್ಪಡಿಸಿದ ಪೊಲೀಸರು ಯುವತಿಯನ್ನು ಸೇವಾಶ್ರಮಕ್ಕೆ ಹಾಗೂ ಯುವಕನನ್ನು ಜೈಲಿಗೆ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಕಿರುಕುಳದ ಕಾರಣದಿಂದ ಯುವತಿಯ ಗರ್ಭಪಾತವೂ ನಡೆದಿತ್ತು.

ಇನ್ನೊಂದು ಪ್ರಕರಣದಲ್ಲಿ ಜೊತೆಯಾಗಿ ನಡೆಯುತ್ತಿದ್ದರು ಎಂಬ ಕಾರಣಕ್ಕೆ ಮುಸ್ಲಿಂ ಯುವಕನನ್ನು ಬಂಧಿಸಿದ ಪೊಲೀಸರು ಲೈಂಗಿಕ ದೌರ್ಜನ್ಯ, ಪೊಕ್ಸೋ ಪ್ರಕರಣವನ್ನೂ ದಾಖಲಿಸಿದ್ದರು. ನ್ಯಾಯಾಲಯದ ಆದೇಶವು ಎಲ್ಲಾ ಧರ್ಮಗಳಿಗೂ ಅನ್ವಯವಾಗದೇ ಕೇವಲ ಒಂದೇ ಧರ್ಮವನ್ನು ಗುರಿಯಾಗಿಸಿ ಕಾರ್ಯಾಚರಿಸುತ್ತಿರುವುದು ಸರಕಾರದ ದ್ವಿಮುಖ ಧೋರಣೆಯಾಗಿದೆ ಎಂಬ ಅಭಿಪ್ರಾಯಗಳು ವ್ಯಕ್ತವಾಗಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X